Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೆಟ್ರೋ ಆರು ಬೋಗಿಗಳ ಮೂರನೇ ರೈಲಿಗೆ...

ಮೆಟ್ರೋ ಆರು ಬೋಗಿಗಳ ಮೂರನೇ ರೈಲಿಗೆ ಮುಖ್ಯಮಂತ್ರಿ ಚಾಲನೆ

ವಾರ್ತಾಭಾರತಿವಾರ್ತಾಭಾರತಿ22 Nov 2018 6:05 PM IST
share
ಮೆಟ್ರೋ ಆರು ಬೋಗಿಗಳ ಮೂರನೇ ರೈಲಿಗೆ ಮುಖ್ಯಮಂತ್ರಿ ಚಾಲನೆ

ಬೆಂಗಳೂರು, ನ.22: ನಮ್ಮ ಮೆಟ್ರೋದ ಮೂರನೇ ಆರು ಬೋಗಿಗಳ ಮೆಟ್ರೋ ರೈಲಿಗೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇಂದು ಚಾಲನೆ ನೀಡಿದ್ದಾರೆ.

ಗುರುವಾರ ನಗರದ ವಿಧಾನಸೌಧ ಬಳಿಯ ಡಾ.ಬಿ.ಆರ್.ಅಂಬೇಡ್ಕರ್ ಮೆಟ್ರೋ ನಿಲ್ದಾಣದಲ್ಲಿ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮೇಯರ್ ಗಂಗಾಂಬಿಕೆ ಮಲ್ಲಿಕಾರ್ಜುನ್ ಆರು ಬೋಗಿಗಳ ರೈಲಿಗೆ ಹಸಿರು ನಿಶಾನೆ ತೋರಿಸಿದರು.

ಪ್ರಯಾಣಿಕರ ಸಂಖ್ಯೆ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ಬಿಎಂಆರ್‌ಸಿಎಲ್ ಕಳೆದ ವರ್ಷದ ಜೂನ್‌ನಲ್ಲಿ ಮೊದಲ ಬಾರಿಗೆ ಆರು ಬೋಗಿಗಳ ರೈಲನ್ನು ಓಡಿಸಲಾಗಿತ್ತು. ಅನಂತರ ಎಲ್ಲ ರೈಲುಗಳಿಗೂ ಆರು ಬೋಗಿಗಳನ್ನು ಅಳವಡಿಸಲು ಕಾರ್ಯ ಯೋಜನೆಯನ್ನು ರೂಪಿಸಲಾಗಿತ್ತು. ಅದರ ಭಾಗವಾಗಿ 2018 ಅಕ್ಟೋಬರ್‌ನಲ್ಲಿ ಎರಡನೇ ಆರು ಬೋಗಿಗಳ ರೈಲಿಗೆ ಮುಖ್ಯಮಂತ್ರಿ ಕುಮಾರಸ್ವಾಮಿ ಚಾಲನೆ ನೀಡಿದ್ದರು. ಇದಾದ ಒಂದು ತಿಂಗಳಲ್ಲಿಯೇ ಮತ್ತೊಂದು ರೈಲಿಗೂ ಚಾಲನೆ ನೀಡಲಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಸೇಠ್, ನಾಲ್ಕನೇ ರೈಲಿಗೆ ಈಗಾಗಲೇ ಆರು ಬೋಗಿಗಳನ್ನು ಅಳವಡಿಸಿದ್ದು, ಪರಿಕ್ಷಾರ್ಥವಾಗಿ ಸಂಚಾರ ನಡೆಸುತ್ತಿದೆ. ಅದನ್ನು ಮುಂದಿನ 10-15 ದಿನಗಳಲ್ಲಿ ಅಧಿಕೃತವಾಗಿ ಚಾಲನೆ ನೀಡಿ, ಉದ್ಘಾಟಿಸಲಾಗುವುದು ಎಂದರು.

ಈಗಾಗಲೇ ಆರು ಬೋಗಿಗಳ ಎಲ್ಲ ರೈಲುಗಳು ಪೂರ್ವ ಮತ್ತು ಪಶ್ಚಿಮದ ನೇರಳೆ ಮಾರ್ಗದಲ್ಲಿ(ಬೈಯಪ್ಪನಹಳ್ಳಿ-ಮೈಸೂರು ರಸ್ತೆ ಮಾರ್ಗ) ಸಂಚರಿಸುತ್ತಿವೆ. ಉತ್ತರ-ದಕ್ಷಿಣ ಭಾಗದ ಹಸಿರು ಮಾರ್ಗ(ನಾಗಸಂದ್ರ-ಯಲಚೇನಹಳ್ಳಿ ಮಾರ್ಗ)ದ ಮೆಟ್ರೋ ರೈಲುಗಳಿಗೂ ಆರು ಭೋಗಿಗಳನ್ನು ಅಳವಡಿಸಬೇಕು ಎಂಬ ಬೇಡಿಕೆ ಬಂದಿದೆ. ಹೀಗಾಗಿ, ನಾಲ್ಕನೇ ರೈಲಿಗೆ ಹಸಿರು ಮಾರ್ಗದಲ್ಲಿರುವುದಕ್ಕೆ ಬೋಗಿ ಅಳವಡಿಸಿದ್ದು, ಕಾರ್ಯಾರಂಭ ಮಾಡಿದೆ. ಅದನ್ನು ಡಿಸೆಂಬರ್‌ನಲ್ಲಿ ಸಂಚಾರ ಮುಕ್ತ ಮಾಡಲಾಗುತ್ತದೆ ಎಂದು ತಿಳಿಸಿದರು.

ನೇರಳೆ ಮಾರ್ಗದಲ್ಲಿ ಬೈಯಪ್ಪನಹಳ್ಳಿಯ ಕಡೆ ಹೆಚ್ಚು ಐಟಿ-ಬಿಟಿ ಕಂಪನಿಗಳು, ಸೇರಿದಂತೆ ವಾಣಿಜ್ಯ ಚಟುವಟಿಕೆ ಕೇಂದ್ರಗಳು ಅಧಿಕವಾಗಿದೆ. ಈ ಕಡೆಗೆ ಬೆಳಗ್ಗೆ ಹಾಗೂ ಸಂಜೆಯ ಕೆಲಸದ ಅವಧಿಯಲ್ಲಿ ಅಂದಾಜು 19 ಸಾವಿರಕ್ಕೂ ಅಧಿಕ ಜನ ಪ್ರಯಾಣ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಈ ಭಾಗದಲ್ಲಿ ಆರು ಬೋಗಿಗಳ ರೈಲು ಅಳವಡಿಸಲು ಹೆಚ್ಚು ಒತ್ತು ನೀಡಲಾಗಿತ್ತು ಎಂದು ಹೇಳಿದರು.

ಆದರೆ, ಹಸಿರು ಮಾರ್ಗಗಳು ಹೆಚ್ಚು ವಸತಿ ಪ್ರದೇಶಗಳನ್ನು ಹೊಂದಿದ್ದು, ವಾಣಿಜ್ಯ ಚಟುವಟಿಕೆಗಳು ಕಡಿಮೆ ಸಂಖ್ಯೆಯಲ್ಲಿವೆ. ಕೆಲಸದ ಸಮಯದಲ್ಲಿ ಈ ಮಾರ್ಗದಲ್ಲಿ ಅಂದಾಜು ಹತ್ತು ಸಾವಿರ ಜನ ಸಂಚಾರ ಮಾಡುತ್ತಿದ್ದಾರೆ. ಹೀಗಾಗಿ, ಈ ಮಾರ್ಗದಲ್ಲಿ ಆರು ಬೋಗಿಗಳ ರೈಲಿಗೆ ಹೆಚ್ಚು ಒತ್ತು ನೀಡಲು ಸಾಧ್ಯವಾಗಿಲ್ಲ. ಆದರೆ, ಮುಂದಿನ ರೈಲನ್ನು ಇದೇ ಮಾರ್ಗದಲ್ಲಿ ಸಂಚಾರ ಮಾಡಲು ನಿರ್ಧರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಇದೀಗ ಸಂಚಾರ ಮಾಡುತ್ತಿರುವ ಮೂರು ಬೋಗಿಗಳ ರೈಲಿನಲ್ಲಿ ಒಂದು ಬಾರಿಗೆ ಸುಮಾರು 750 ಜನ ಆರಾಮವಾಗಿ ಪ್ರಯಾಣಿಸಬಹುದು. ಆದರೆ, ಆರು ಬೋಗಿಗಳ ರೈಲಿನಲ್ಲಿ 1500 ಜನ ಆರಾಮವಾಗಿ ಪ್ರಯಾಣಿಸಬಹುದಿದ್ದು, ಹೊಂದಾಣಿಕೆ ಮಾಡಿಕೊಂಡು ಪ್ರಯಾಣಿಸುವುದಾದರೆ ಗರಿಷ್ಠ ಎರಡು ಸಾವಿರ ಜನ ಪ್ರಯಾಣಕ್ಕೆ ಅವಕಾಶವಿದೆ ಎಂದು ಅಜಯ್ ಸೇಠ್ ವಿವರಿಸಿದರು.

2019 ಕ್ಕೆ ಆರು ಬೋಗಿ ಅಳವಡಿಕೆ ಪೂರ್ಣ: ಬಿಇಎಂಎಲ್ ಪ್ರತಿ ತಿಂಗಳು ಮೂರರಿಂದ ನಾಲ್ಕು ಭೋಗಿಗಳನ್ನು ಪೂರೈಸುವ ಒಪ್ಪಂದ ಮಾಡಿಕೊಂಡಿದೆ. ಮುಂದಿನ ವರ್ಷದ ಸೆಪ್ಟೆಂಬರ್ ವೇಳೆಗೆ ನಮ್ಮ ಮೆಟ್ರೋದ ಎಲ್ಲ ರೈಲುಗಳಿಗೂ ಆರು ಬೋಗಿಗಳನ್ನು ಅಳವಡಿಕೆ ಮಾಡುವ ಮೂಲಕ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಲಾಗುತ್ತದೆ ಎಂದು ಅವರು ಇದೇ ಸಂದರ್ಭದಲ್ಲಿ ನುಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X