Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಳೆದು ಹೋದ ಬದುಕಿನ ಹುಡುಕಾಟದಲ್ಲಿ...

ಕಳೆದು ಹೋದ ಬದುಕಿನ ಹುಡುಕಾಟದಲ್ಲಿ ಕೊಡಗಿನ ಸಂತ್ರಸ್ತರು

ಹೆಬ್ಬೆಟ್ಟಗೇರಿಯಲ್ಲಿ ಮಣ್ಣಿನಡಿ ಸಿಕ್ಕಿತು ಹಣ, ಚಿನ್ನಾಭರಣ

ವರದಿ: ಲಕ್ಷ್ಮೀಶ್ವರದಿ: ಲಕ್ಷ್ಮೀಶ್22 Nov 2018 6:58 PM IST
share
ಕಳೆದು ಹೋದ ಬದುಕಿನ ಹುಡುಕಾಟದಲ್ಲಿ ಕೊಡಗಿನ ಸಂತ್ರಸ್ತರು

ಮಡಿಕೇರಿ, ನ.21: ಕೊಡಗಿನಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಲ್ಲಿ ಮನೆ ಕಳೆದುಕೊಂಡ ನೂರಾರು ಕುಟುಂಬಗಳು ಇಂದಿಗೂ ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿವೆ. ಮಹಾಮಳೆಗೆ ಕುಸಿದ ಬೆಟ್ಟದ ಮಣ್ಣಿನ ರಾಶಿಯಡಿ ಸಿಲುಕಿಕೊಂಡ ಮನೆಗಳ ಅವಶೇಷಗಳಡಿಯಲ್ಲಿ ಹೂತು ಹೋಗಿರುವ ವಸ್ತುಗಳಿಗಾಗಿ ಹುಡುಕಾಟ ನಡೆಯುತ್ತಲೇ ಇದೆ. 

ಹೆಬ್ಬೆಟ್ಟಗೇರಿ ಗ್ರಾಮದಲ್ಲಿ ಆಗಸ್ಟ್ 16ರ ಬೆಳಿಗ್ಗೆ 7.45 ಗಂಟೆಗೆ ಜಲಸ್ಫೋಟದೊಂದಿಗೆ ಭಾರೀ ಬೆಟ್ಟ ಕುಸಿದು ಮನೆಯೊಂದರ ಮೇಲೆ ಬಿದ್ದ ಪರಿಣಾಮ ಮನೆಯೊಳಗಿದ್ದ ವೃದ್ದೆಯೊಬ್ಬರು ಭೂ ಸಮಾಧಿಯಾಗಿದ್ದರು. ಇದೇ ಮನೆಯೊಳಗಿದ್ದ ಮಿನ್ನಂಡ ಗಣಪತಿ ಮತ್ತವರ ಕುಟುಂಬ ಸದಸ್ಯರು ಪವಾಡದ ರೀತಿಯಲ್ಲಿ ಜೀವ ಉಳಿಸಿಕೊಂಡಿದ್ದರು. ಆದರೆ ಕಣ್ಣೇದುರೇ ಹೂತು ಹೋದ ಹೆತ್ತಾಕೆಯನ್ನು ಹೊರಗೆಳೆಯಲು 40 ಅಡಿ ಎತ್ತರದ ಕೆಸರಿನ ಪ್ರವಾಹ ಬಿಡಲಿಲ್ಲ. ಈ ದುರ್ಘಟನೆ ನಡೆದ 7 ದಿನಗಳ ಬಳಿಕ ರಕ್ಷಣಾ ಕಾರ್ಯಚರಣೆ ನಡೆಸಿ ಉಮ್ಮವ್ವ ಅವರ ದೇಹವನ್ನು ಹೊರ ತೆಗೆಯಲಾಗಿತ್ತು. ಆದರೆ ಕಳೆದ 6 ತಿಂಗಳ ಹಿಂದೆ ಗೃಹ ಪ್ರವೇಶವಾಗಿದ್ದ ಮಿನ್ನಂಡ ಗಣಪತಿ ಅವರ 15 ಲಕ್ಷದ ಮನೆ ಸಂಪೂರ್ಣ ನೆಲಕಚ್ಚಿತ್ತು. ಉಟ್ಟ ಬಟ್ಟೆ, ಖಾಲಿ ಹೊಟ್ಟೆಯಲ್ಲೇ ಬಂಧುಗಳ ಮನೆಯಲ್ಲಿ ಆಶ್ರಯ ಪಡೆದ ಗಣಪತಿ ಕುಟುಂಬ ಕಳೆದೆರಡು ದಿನಗಳಿಂದ ಜೆಸಿಬಿ ಯಂತ್ರದಲ್ಲಿ ನಾಮಾವಶೇಷಗೊಂಡ ಮನೆಯಿಂದ ಅಳಿದುಳಿದ ವಸ್ತುಗಳನ್ನು ಹುಡುಕುವ ಪ್ರಯತ್ನ ನಡೆಸಿತು. 

ನೀರು ಪಾಲಾದ ಸ್ಥಿತಿಯಲ್ಲಿದ್ದ 2 ಕ್ವಿಂಟಾಲ್ ಕರಿಮೆಣಸು, ಹರಿದ ಬಟ್ಟೆಗಳು, ಮುರಿದ ಮಂಚ, ಕೆಸರು ಮೆತ್ತಿಕೊಂಡ ಕೆಲವು ದಾಖಲೆಗಳು ಸಿಕ್ಕಿದ್ದವು. ಶೋಧ ಮುಂದುವರಿಸುತ್ತಿದ್ದಂತೆಯೇ ಅಮ್ಮವ್ವ ಅವರ 1 ಚಿನ್ನದ ಉಂಗುರ, 1 ಜೊತೆ ಓಲೆ, ತಿಂಗಳ ಖರ್ಚಿಗೆಂದು ಮನೆಯಲ್ಲಿಟ್ಟದ್ದ 10 ಸಾವಿರ ರೂ. ನಗದು ಕೆಸರು ಮೆತ್ತಿದ ಸ್ಥಿತಿಯಲ್ಲಿ ಮಣ್ಣಿನಡಿಯಲ್ಲಿ ಪ್ತತೆಯಾದವು.

ಕೊಡವ ಸಂಪ್ರದಾಯದ ತೆಂಗಿನ ಎಣ್ಣೆಯ 2 ಬಟ್ಟಲು, ಮುರಿದು ತುಂಡರಿಸಲ್ಪಟ್ಟ ಸ್ಥಿತಿಯಲ್ಲಿದ್ದ ಜೋಡಿ ನಳಿಕೆಯ 1 ಜಮ್ಮಾ ಬಂದೂಕು, ಅಡುಗೆ ಸಿಲಿಂಡರ್ ಮತ್ತು ಬೆಳ್ಳಿಯ ಪೀಚೆಕತ್ತಿ ಮಾತ್ರ ಈ ಬಡ ನಿರ್ವಸತಿಕ ಕುಟುಂಬದ ಪಾಲಾಯಿತು. 

ಈ ಸಂದರ್ಭ ಮಾತನಾಡಿದ ಉಮ್ಮವ್ವ ಅವರ ಪುತ್ರ ಮಿನ್ನಂಡ ಗಣಪತಿ, ನಮಗೆ ಬಂದಂತ ಸ್ಥಿತಿ ಮತ್ತ್ಯಾರಿಗೂ ಬಾರದಿರಲಿ. ಕಣ್ಣ ಮುಂದೆ ಮಣ್ಣಿನಡಿ ಹೂತು ಹೋದ ತಾಯಿಯ ರಕ್ಷಣೆ ಮಾಡಲು ಸಾಧ್ಯವಾಗಲಿಲ್ಲ. ದುಡಿದು ಕಟ್ಟಿದ ಮನೆಯೂ ಉಳಿಯಲಿಲ್ಲ. ಮನೆ ನಾಶವಾದ ಹಿನ್ನೆಲೆಯಲ್ಲಿ ಸರಕಾರ 1.2 ಲಕ್ಷ ರೂ. ಹಣ, ಗಂಜಿ ಕೇಂದ್ರದಲ್ಲಿದ್ದ ಸಂದರ್ಭ 3800 ರೂ. ಪರಿಹಾರ ಮತ್ತು ವಿವಿಧ ಸಂಘ-ಸಂಸ್ಥೆಗಳು ನಮ್ಮ ನೆರವಿಗೆ ಬಂದಿವೆ. ಸರಕಾರ ಸಾಧ್ಯವಾದಷ್ಟು ಬೇಗ ನಿರಾಶ್ರಿತರಿಗೆ ಮನೆ ಕಟ್ಟಿಕೊಡಬೇಕು ಎಂದು ಹೇಳಿದರು.

ಮಹಾಮಳೆಗೆ ಸಿಲುಕಿ ಬೀದಿಪಾಲಾದ ನೂರಾರು ಕುಟುಂಬಗಳು ಇಂದಿಗೂ ಅತಂತ್ರ ಸ್ಥಿತಿಯಲ್ಲೇ ಜೀವನ ಸಾಗಿಸುತ್ತಿದ್ದು, ಕಳೆದು ಹೋದ ಬದುಕನ್ನು ಹುಡುಕುವ ಪ್ರಯತ್ನದಲ್ಲೇ ದಿನ ದೂಡುತ್ತಿದ್ದಾರೆ.

share
ವರದಿ: ಲಕ್ಷ್ಮೀಶ್
ವರದಿ: ಲಕ್ಷ್ಮೀಶ್
Next Story
X