Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಉಪಚುನಾವಣೆಯಲ್ಲಿ ಸೋತಿದ್ದರೂ ನೈತಿಕವಾಗಿ...

ಉಪಚುನಾವಣೆಯಲ್ಲಿ ಸೋತಿದ್ದರೂ ನೈತಿಕವಾಗಿ ಗೆಲುವು ಸಾಧಿಸಿದ್ದೇನೆ: ಮಧು ಬಂಗಾರಪ್ಪ

ವಾರ್ತಾಭಾರತಿವಾರ್ತಾಭಾರತಿ22 Nov 2018 7:26 PM IST
share
ಉಪಚುನಾವಣೆಯಲ್ಲಿ ಸೋತಿದ್ದರೂ ನೈತಿಕವಾಗಿ ಗೆಲುವು ಸಾಧಿಸಿದ್ದೇನೆ: ಮಧು ಬಂಗಾರಪ್ಪ

ಸೊರಬ,ನ.22: ಲೋಕಸಭಾ ಉಪಚುನಾವಣೆಯಲ್ಲಿ ನಾನು ಸೋತಿದ್ದರೂ ನೈತಿಕವಾಗಿ ಗೆಲುವು ಸಾಧಿಸಿದ್ದೇನೆ. ಜಿಲ್ಲೆ ಸಂಪೂರ್ಣ ತಮ್ಮ ಹಿಡಿತದಲ್ಲಿದೆ ಎಂದು ಭ್ರಮೆಯಲ್ಲಿದ್ದವರಿಗೆ ಮತದಾರರು ಬೆವರಿಳಿಸಿದ್ದಾರೆ ಎಂದು ಲೋಕಸಭಾ ಉಪಚುನಾವಣಾ ಪರಾಜಿತ ಅಭ್ಯರ್ಥಿ ಮಧುಬಂಗಾರಪ್ಪ ತಿಳಿಸಿದರು.

ಪಟ್ಟಣದ ಬಂಗಾರಧಾಮದಲ್ಲಿ ಹಮ್ಮಿಕೊಂಡಿದ್ದ ತಾಲೂಕಿನ ಮತದಾರರಿಗೆ, ಕಾರ್ಯಕರ್ತರಿಗೆ, ಹಾಗೂ ಮುಖಂಡರಿಗೆ ಅಭಿನಂದನೆ ಸಲ್ಲಿಸಿ ಅವರು ಮಾತನಾಡಿದರು. ಬಗರ್ ಹುಕುಂ ಸಾಗುವಳಿದಾರರಿಗೆ ಮತ್ತು ಸಾಮಾಜಿಕವಾಗಿ ಶೋಷಣೆಗೊಳಗಾಗಿದ್ದ ಜನರಿಗೆ ದ್ರೋಹ ಬಗೆದಿರುವ ಬಿಜೆಪಿ ಮತ್ತು ಯಡಿಯೂರಪ್ಪನವರಿಗೆ ಜನರು ತಕ್ಕ ಪಾಠ ಕಲಿಸಿದ್ದಾರೆ. ಯಡಿಯೂರಪ್ಪನವರಂತೆ ಬಗರುಹುಕುಂ ಸಾಗುವಳಿದಾರರನ್ನು ಜೈಲಿಗೆ ಕಳಿಸುವ ಕಾರ್ಯವನ್ನು ನಾನಾಗಲಿ ಕಾಗೋಡು ತಿಮ್ಮಪ್ಪನವರಾಗಲಿ ಎಂದೂ ಮಾಡಿಲ್ಲ. ಪ್ರಧಾನಿ ಮೋದಿಯವರು ಕಾರ್ಪೋರೇಟ್ ಸಂಸ್ಥೆಗಳ ಪರವಿರುವ ಸರದಾರ. ಇವರಿಂದ ಕಳೆದ ಚುನಾವಣೆಯಲ್ಲಿ ಘೋಷಿಸಿದ್ದ ಯಾವುದೇ ಯೋಜನೆಗಳು ಅನುಷ್ಟಾನಗೊಂಡಿಲ್ಲ ಎಂದರು. 

ಈ ಹಿಂದೆ ನಾನು ಶಾಸಕನಾಗಿದ್ದಾಗ ತಾಲೂಕಿನ ಅಭಿವೃದ್ದಿಗಾಗಿ ತಂದ ಅನುದಾನದಲ್ಲೇ ಈಗಿನ ಹಾಲಿ ಶಾಸಕ ಕುಮಾರ್ ಬಂಗಾರಪ್ಪ ಗುದ್ದಲಿ ಪೂಜೆ, ಉದ್ಘಾಟನೆ ಕಾರ್ಯಕ್ರಮಗಳನ್ನು ನೆರವೇರಿಸುತ್ತಿದ್ದಾರೆ. ಶಾಸಕನಾಗಿ 6 ತಿಂಗಳುಗಳಾದರೂ ಸರ್ಕಾರದಿಂದ ಒಂದೇ ಒಂದು ನಯಾಪೈಸೆ ತರಲು ತಾಕತ್ತು ಇಲ್ಲದ ಇವರು, ನಾನೇ ಅನುದಾನ ತಂದು ಅಭಿವೃದ್ದಿ ಪಡಿಸುತ್ತಿದ್ದೇನೆಂದು ಜನರಲ್ಲಿ ಸುಳ್ಳು ಹೇಳಿಕೊಂಡು ತಿರುಗಾಡುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದ ಅವರು, ತಾಲೂಕಿನ ಅಭಿವೃದ್ದಿಗೆ ಶ್ರಮಿಸದ ಇವರು ಸರ್ಕಾರವೇ ಇಲ್ಲದ ಪಕ್ಷದಿಂದ ಗೆಲುವು ಸಾಧಿಸಿದ್ದು, ಅನುದಾನ ತರಲು ಹೇಗೆ ಸಾಧ್ಯ. 2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಗೆ ರಾಮನೆ ಮೂಲ ಮಂತ್ರ. ಯಾವುದೇ ಅಭಿವೃದ್ಧಿ ಕಾರ್ಯಗಳನ್ನು ಮಾಡದ ಇವರು ಜನರೊಂದಿಗೆ ಹೇಳಿಕೊಳ್ಳಲಾಗದೆ ಅನಿವಾರ್ಯವಾಗಿ ರಾಮನ ಹೆಸರಲ್ಲಿ ಮತ ಕೇಳಬೇಕಾಗಿದೆ. ಅಗತ್ಯ ಬಿದ್ದಾಗ ಮಾತ್ರ ರಾಮನನ್ನು ನೆನೆಸುವ ಇವರಿಗೆ, ಆ ರಾಮನೆ ಬಿಜೆಪಿಯ ಗಂಟುಮೂಟೆ ಕಟ್ಟಿಸಲಿದ್ದಾನೆ ಎಂದು ಭವಿಷ್ಯ ನುಡಿದರು.

ಸಭೆಯಲ್ಲಿ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ. ಶ್ರೀಕಾಂತ್, ಜಿಲ್ಲಾಧ್ಯಕ್ಷ ಮಂಜುನಾಥ್‍ಗೌಡ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ತೀ.ನಾ. ಶ್ರೀನಿವಾಸ್, ಬ್ಲಾಕ್ ಅಧ್ಯಕ್ಷ ಜೆ.ಶಿವಾನಂದಪ್ಪ, ಹೆಚ್.ಗಣಪತಿ, ಚೌಟಿ ಚಂದ್ರ ಶೇಖರ್ ಪಾಟೀಲ್, ಕೆ.ಪಿ.ರುದ್ರಗೌಡ, ಜಿಪಂ. ಸದಸ್ಯ ಶಿವಲಿಂಗೇಗೌಡ, ತಾರಶಿವಾನಂದ್, ರಾಜೇಶ್ವರಿ, ತಾಪಂ.ಉಪಾಧ್ಯಕ್ಷ ಸುರೇಶ್, ಪಪಂ. ಅಧ್ಯಕ್ಷೆ ಬೀಬಿ. ಝುಲೇಖಾ, ಪ್ರಮುಖರಾದ ರಾಜು ತಲ್ಲೂರು, ನಾಗರಾಜ್ ಚಂದ್ರಗುತ್ತಿ, ಅಜ್ಜಪ್ಪ, ಜೈಶೀಲಗೌಡ, ಬಂಗಾರಪ್ಪಗೌಡ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X