Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸರೋಜಿನಿ ಮಹಿಷಿ ವರದಿ ಶೀಘ್ರ ಜಾರಿಯಾಗಲಿ:...

ಸರೋಜಿನಿ ಮಹಿಷಿ ವರದಿ ಶೀಘ್ರ ಜಾರಿಯಾಗಲಿ: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ22 Nov 2018 7:30 PM IST
share
ಸರೋಜಿನಿ ಮಹಿಷಿ ವರದಿ ಶೀಘ್ರ ಜಾರಿಯಾಗಲಿ: ಡಾ.ವಸುಂಧರಾ ಭೂಪತಿ

ಬೆಂಗಳೂರು, ನ.22: ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಸರೋಜಿಶಿ ಮಹಿಷಿ ಅವರ ವರದಿಯನ್ನು ಕೂಡಲೇ ರಾಜ್ಯ ಸರಕಾರ ಜಾರಿ ಮಾಡಬೇಕು ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ಒತ್ತಾಯಿಸಿದ್ದಾರೆ.

ಗುರುವಾರ ನಗರದ ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಿದ್ದ 63 ನೆ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸರಕಾರಿ ಕನ್ನಡ ಶಾಲೆಗಳನ್ನು ಮೇಲ್ದರ್ಜೆಗೇರಿಸಬೇಕು. ಅದರ ಜತೆಗೆ ಕನ್ನಡದಲ್ಲಿ ಅಧ್ಯಯನ ಮಾಡಿದರೆ ಉನ್ನತ ಶಿಕ್ಷಣ ಹಾಗೂ ಉದ್ಯೋಗ ಸಿಗುತ್ತದೆ ಎಂಬ ಭರವಸೆಯನ್ನು ಪೋಷಕರಲ್ಲಿ ಮೂಡಿಸುವಂತಾಗಬೇಕು ಎಂದು ಹೇಳಿದರು.

ರಾಜ್ಯದ ಎಲ್ಲ ಶಾಲೆಗಳಲ್ಲಿಯೂ ಪೂರ್ವ ಪ್ರಾಥಮಿಕ ಶಿಕ್ಷಣ ಆರಂಭವಾಗಬೇಕು. ಅದರ ಜತೆಗೆ, ಕನ್ನಡ ಶಾಲೆಗಳಿಗೆ ಹೆಚ್ಚು ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಬೇಕು. ಈ ನಿಟ್ಟಿನಲ್ಲಿ ಕನ್ನಡಿಗರಿಗೆ ಉದ್ಯೋಗದಲ್ಲಿ ಹಾಗೂ ಉನ್ನತ ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವುದು ಕಡ್ಡಾಯ ಮಾಡಬೇಕು ಎಂದು ಅವರು ಆಗ್ರಹಿಸಿದರು.

ಬೆಂಗಳೂರು ನಗರದಲ್ಲಿ ಇತ್ತೀಚಿನ ದಿನಗಳಲ್ಲಿ ಕನ್ನಡವು ಮರೆಯಾಗುತ್ತಿದೆ. ಇಂತಹ ಸಂದರ್ಭದಲ್ಲಿ ಕನ್ನಡವನ್ನು ಭಾಷೆಯನ್ನಾಗಿ ಮಾಡಿ ಕಾಗದಗಳ ಮೇಲೆ ಇಡುವ ಬದಲಿಗೆ, ಸರಕಾರಿ ಅಧಿಕಾರಿಗಳು, ರಾಜಕಾರಣಿಗಳು ಕನ್ನಡ ಮಾತನಾಡುವುದನ್ನು, ಬಳಕೆ ಮಾಡುವುದರ ಬಗ್ಗೆ ಇಚ್ಛಾಶಕ್ತಿಯನ್ನು ತೋರಬೇಕು. ಆ ಮೂಲಕ ಕನ್ನಡವನ್ನು ಉಳಿಸಿ-ಬೆಳೆಸಬೇಕು ಎಂದು ಅವರು ಸಲಹೆ ನೀಡಿದರು.

ಕರ್ನಾಟಕ ಏಕೀಕರಣಗೊಂಡು 63 ವರ್ಷಗಳಾಗುತ್ತಿದೆ. ಹಿರಿಯ ಸಾಹಿತಿಗಳು, ಕಲಾವಿದರು, ಹೋರಾಟಗಾರರು ಕನ್ನಡ ಭಾಷೆಗಾಗಿ ಹೋರಾಡಿದವರ ತ್ಯಾಗದಿಂದಾಗಿ ರಾಜ್ಯ ಏಕೀಕರಣ ಕಂಡಿದೆ. ಆದರೆ, ಇಂದು ಅದರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲದೆ, ನಾಡನ್ನು ಕಟ್ಟುವ ಬದಲಿಗೆ, ಕೆಡವಲು ಮುಂದಾಗಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಕರ್ನಾಟಕ ಗಾಂಧಿ ಸ್ಮಾರಕದ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ ಮಾತನಾಡಿ, ನಮ್ಮ ಇಂದಿನ ಶಿಕ್ಷಣ ವ್ಯವಸ್ಥೆಯಲ್ಲಿ ದೇಶದ ಸ್ವಾತಂತ್ರ ಸಂಗ್ರಾಮದ ಬಗ್ಗೆ ಅಷ್ಟೇ ಹೇಳಿಕೊಡಲಾಗುತ್ತಿದೆ. ಅದರ ಜತೆಗೆ, ಕರ್ನಾಟಕ ಏಕೀಕರಣ ಚಳವಳಿಯನ್ನು ಪಠ್ಯವಾಗಿ ಹೇಳಿಕೊಡಬೇಕು. ಆ ಮೂಲಕ ನಿಜಾಮರಿಂದ, ಪಾಳೇಗಾರರಿಂದ ನಾಡನ್ನು ಪಡೆದ ರೀತಿಯನ್ನು ಎಲ್ಲರಿಗೂ ತಿಳಿಸಬೇಕು ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ರಂಗಭೂಮಿ ಕಲಾವಿದೆ ಆರ್.ಕೆ.ಸ್ಪರ್ಶಾ, ಕಾಲೇಜಿನ ಶಿಕ್ಷಣ ದತ್ತಿ ಅಧ್ಯಕ್ಷ ಬಿ.ಎಂ.ಪಾರ್ಥಸಾರಥಿ, ಕಾಲೇಜಿನ ಪ್ರಾಂಶುಪಾಲ ಪ್ರೊ.ಪಿ.ನಾರಾಯಣಸ್ವಾಮಿ, ಉಪನ್ಯಾಸಕಿ ಕಾವ್ಯ ಉಪಸ್ಥಿತರಿದ್ದರು.

ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಅನೇಕ ಮಹಿಳೆಯರು ಪಾಲ್ಗೊಂಡಿದ್ದರು. ಆದರೆ, ಇಂದಿನ ನಮ್ಮ ಇತಿಹಾಸದಲ್ಲಿ ಪುರುಷರನ್ನಷ್ಟೇ ತೋರಿಸುತ್ತಿದ್ದು, ಮಹಿಳೆಯರ ಪಾತ್ರವನ್ನೇ ಮರೆಮಾಚಲಾಗಿದೆ.

 -ಇಂದಿರಾ ಕೃಷ್ಣಪ್ಪ, ಕರ್ನಾಟಕ ಗಾಂಧಿ ಸ್ಮಾರಕದ ಗೌರವ ಕಾರ್ಯದರ್ಶಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X