Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ತಿಹಾರ್ ಜೈಲಿನಲ್ಲಿ ‘ಯುನಿಟೆಕ್’ ಎಂಡಿಯ...

ತಿಹಾರ್ ಜೈಲಿನಲ್ಲಿ ‘ಯುನಿಟೆಕ್’ ಎಂಡಿಯ ಐಷಾರಾಮಿ ಜೀವನ

ಕೋಣೆಯಲ್ಲಿ ಎಲ್‌ಇಡಿ ಟಿವಿ, ಬ್ಯಾಡ್ಮಿಂಟನ್ ರ‍್ಯಾಕೆಟ್

ವಾರ್ತಾಭಾರತಿವಾರ್ತಾಭಾರತಿ22 Nov 2018 7:56 PM IST
share
ತಿಹಾರ್ ಜೈಲಿನಲ್ಲಿ ‘ಯುನಿಟೆಕ್’ ಎಂಡಿಯ ಐಷಾರಾಮಿ ಜೀವನ

ಹೊಸದಿಲ್ಲಿ, ನ.22: ತಿಹಾರ್ ಜೈಲಿನಲ್ಲಿ ಯುನಿಟೆಕ್ ಸಂಸ್ಥೆಯ ಎಂಡಿ ಸಂಜಯ್‌ ಚಂದ್ರ ಹಾಗೂ ಆತನ ಸಹೋದರ ಅಜಯ್‌ರನ್ನು ಬಂಧನದಲ್ಲಿಟ್ಟಿರುವ ಕೋಣೆಯಲ್ಲಿ ಎಲ್‌ಇಡಿ ಟಿವಿ, ಮಿನರಲ್ ವಾಟರ್ ವ್ಯವಸ್ಥೆ, ಬ್ಯಾಡ್ಮಿಂಟನ್ ರ‍್ಯಾಕೆಟ್ ಗಳು ಕಂಡುಬಂದಿರುವ ಬಗ್ಗೆ ಸುಪ್ರೀಂಕೋರ್ಟ್ ತೀವ್ರ ಆತಂಕ ವ್ಯಕ್ತಪಡಿಸಿದೆ.

ಜೈಲಿನಲ್ಲಿ ಸಮಾನಾಂತರ ವ್ಯವಸ್ಥೆ ಜಾರಿಯಲ್ಲಿದೆಯೇ ಎಂದು ಸುಪ್ರೀಂಕೋರ್ಟ್ ಪ್ರಶ್ನಿಸಿದೆ. ತಿಹಾರ್ ಜೈಲಿನಲ್ಲಿ ‘ಗಣ್ಯ’ ಅಪರಾಧಿಗಳು ಐಷಾರಾಮಿ ಜೀವನ ಸಾಗಿಸುತ್ತಿದ್ದಾರೆ. ಅವರಿಗೆ ವೈದ್ಯಕೀಯ ಚಿಕಿತ್ಸೆ ಸೇರಿದಂತೆ ಮೂಲ ಅಗತ್ಯಗಳನ್ನು ಒದಗಿಸಲಾಗುತ್ತಿದೆ ಎಂದು ಹಲವು ಕೈದಿಗಳು ಆರೋಪಿಸಿ ಪತ್ರ ಬರೆದಿರುವ ಹಿನ್ನೆಲೆಯಲ್ಲಿ ಈ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಸೆಪ್ಟೆಂಬರ್ 4ರಂದು ತಿಹಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ರಮೇಶ್ ಕುಮಾರ್ ದಿಲ್ಲಿ ಹೈಕೋರ್ಟ್‌ಗೆ ನೀಡಿದ ವರದಿಯಲ್ಲಿ, ತಿಹಾರ್ ಜೈಲಿನಲ್ಲಿ ಬಂಧೀಖಾನೆ ಡಿಜಿ ಹಾಗೂ ಇತರ ಅಧಿಕಾರಿಗಳು ಭ್ರಷ್ಟಾಚಾರ ಮತ್ತು ಅಧಿಕಾರದ ದುರುಪಯೋಗ ನಡೆಸಿರುವ ಬಗ್ಗೆ ಆಧಾರಗಳಿವೆ ಎಂದು ತಿಳಿಸಿದ್ದರು.

 ಅಲ್ಲದೆ ಬಂಧೀಖಾನೆ ಡಿಜಿ ಹಾಗೂ ಇತರ ಅಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ತಿಳಿಸಿದ್ದರು. ಯುನಿಟೆಕ್ ಎಂಡಿಯನ್ನು ಇರಿಸಲಾಗಿರುವ ಕೋಣೆಯಲ್ಲಿ ಕಂಡುಬಂದಿದ್ದ ಅಕ್ವಾಫಿನಾ ಮಿನರಲ್ ವಾಟರ್ ಬಾಟಲಿಯನ್ನು ತಾವು ಜೈಲಿನ ಕ್ಯಾಂಟೀನ್‌ನಿಂದ ಖರೀದಿಸಿರುವುದಾಗಿ ತಿಳಿಸಲಾಗಿದೆ. ಆದರೆ ಜೈಲಿನ ಕ್ಯಾಂಟೀನಿನಲ್ಲಿ ಬಿಸ್ಲೇರಿ ಬ್ರಾಂಡ್‌ನ ಮಿನರಲ್ ವಾಟರ್ ಮಾತ್ರ ಮಾರಾಟ ಮಾಡಲಾಗುತ್ತಿದೆ ಎಂದು ವರದಿ ತಿಳಿಸಿದೆ. ಅಲ್ಲದೆ ಈ ಕೋಣೆಗೆ ಅಳವಡಿಸಲಾಗಿರುವ ಕಬ್ಬಿಣದ ಬಲೆಗೆ ಕಂಬಳಿ ಹಾಗೂ ರಟ್ಟುಗಳನ್ನು ಹೊದಿಸುವ ಮೂಲಕ ಹೊರಗಿನ ಗಾಳಿ ಕೋಣೆಯ ಒಳಗೆ ಪ್ರವೇಶಿಸದಂತೆ ವ್ಯವಸ್ಥೆ ಮಾಡಲಾಗಿದೆ. ಬಂಧೀಖಾನೆ ಡಿಜಿ ಹಾಗೂ ಇತರ ಅಧಿಕಾರಿಗಳು ಶಾಮೀಲಾಗಿರದೆ ಅಥವಾ ಅವರಿಗೆ ತಿಳಿಯದಂತೆ ಇಂತಹ ವ್ಯವಸ್ಥೆ ಹಾಗೂ ಸೌಲಭ್ಯಗಳನ್ನು ಜೈಲಿನೊಳಗೆ ರೂಪಿಸಲು ಸಾಧ್ಯವಿಲ್ಲ. ಆದ್ದರಿಂದ ಜೈಲಿನ 25 ಖೈದಿಗಳು ಬರೆದಿರುವ ಪತ್ರದಲ್ಲಿ ಮಾಡಿರುವ ಆರೋಪಗಳಲ್ಲಿ ಹುರುಳಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಜೈಲುಕೋಣೆಯೊಳಗೆ ಆಫೀಸ್‌ರೂಂ

ಯುನಿಟೆಕ್ ಎಂಡಿ ಸಂಜಯ್‌ಚಂದ್ರ ಹಾಗೂ ಆತನ ಸಹೋದರನನ್ನು ಬಂಧಿಸಿಟ್ಟಿರುವ ಜೈಲಿನ ಕೋಣೆಯಲ್ಲಿ ಹಾಸಿಗೆ, ಸಾಸಿವೆ ಎಣ್ಣೆ, ಕಾಲೊರೆಸುವ ಬಟ್ಟೆ, ಕುಳಿತುಕೊಳ್ಳುವ ಸ್ಟೂಲ್‌ಗಳು, ಟಿವಿ, ‘ಅಕ್ವಾಫಿನಾ’ ಮಿನರಲ್ ವಾಟರ್, ಬ್ಯಾಡ್ಮಿಂಟನ್ ರ್ಯಾಕೆಟ್‌ಗಳ ಜೊತೆ ಜೈಲಿನ ಕೋಣೆಯೊಳಗೆ ಪ್ರತ್ಯೇಕ ಆಫೀಸ್ ಕೋಣೆಯನ್ನು ನಿರ್ಮಿಸಲಾಗಿದೆ.

ಆಫೀಸ್ ಕೋಣೆಯಲ್ಲಿ ಇಂಟರ್‌ನೆಟ್ ಸಂಪರ್ಕವಿರುವ ಕಂಪ್ಯೂಟರ್ ಹಾಗೂ ಪ್ರಿಂಟರ್‌ಗಳಿವೆ ಎಂದು ರಮೇಶ್ ಕುಮಾರ್ ಸಲ್ಲಿಸಿದ ವರದಿಯಲ್ಲಿ ತಿಳಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X