Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐತಿಹಾಸಿಕ ಪಾಕ್ ಗುರುದ್ವಾರಾಕ್ಕೆ ತೆರಳಲು...

ಐತಿಹಾಸಿಕ ಪಾಕ್ ಗುರುದ್ವಾರಾಕ್ಕೆ ತೆರಳಲು ಕರ್ತಾರಪುರ ಕಾರಿಡಾರ್ ಯೋಜನೆಗೆ ಅಸ್ತು

ವಾರ್ತಾಭಾರತಿವಾರ್ತಾಭಾರತಿ22 Nov 2018 9:08 PM IST
share
ಐತಿಹಾಸಿಕ ಪಾಕ್ ಗುರುದ್ವಾರಾಕ್ಕೆ ತೆರಳಲು ಕರ್ತಾರಪುರ ಕಾರಿಡಾರ್ ಯೋಜನೆಗೆ ಅಸ್ತು

ಹೊಸದಿಲ್ಲಿ,ನ.22: ಗುರು ನಾನಕ್ ಅವರು ತನ್ನ ಬದುಕಿನ ಕೊನೆಯ 18 ವರ್ಷಗಳನ್ನು ಕಳೆದಿದ್ದರು ಎನ್ನಲಾಗಿರುವ ಪಾಕಿಸ್ತಾನದಲ್ಲಿಯ ಐತಿಹಾಸಿಕ ಗುರುದ್ವಾರಕ್ಕೆ ಯಾತ್ರಿಗಳ ಸುಗಮ ಸಂಚಾರಕ್ಕಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ಕಾರಿಡಾರ್ ನಿರ್ಮಾಣ ಯೋಜನೆಗೆ ಕೇಂದ್ರ ಸಂಪುಟವು ಗುರುವಾರ ಹಸಿರು ನಿಶಾನೆಯನ್ನು ತೋರಿಸಿದೆ. ತನ್ನ ಭೂಪ್ರದೇಶದಲ್ಲಿ ಸೂಕ್ತ ಸೌಲಭ್ಯಗಳೊಂದಿಗೆ ಗುರುದ್ವಾರಾಕ್ಕೆ ಕಾರಿಡಾರ್ ನಿರ್ಮಿಸುವಂತೆಯೂ ಭಾರತವು ಪಾಕ್ ಸರಕಾರವನ್ನು ಕೋರಿದೆ

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಲಾಹೋರ್‌ನಿಂದ 120 ಕಿ.ಮೀ. ದೂರದಲ್ಲಿರುವ ಕರ್ತಾರಪುರ ಸಾಹಿಬ್ ಗುರುದ್ವಾರಾವು ಐತಿಹಾಸಿಕ ಸಿಖ್ ಯಾತ್ರಾಸ್ಥಳವಾಗಿದೆ.

ಗುರು ನಾನಕ್ ದೇವ ಅವರ 550ನೇ ಜಯಂತಿಗೆ ಮುನ್ನ ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಂಪುಟ ಸಭೆಯು ಕಾರಿಡಾರ್ ನಿರ್ಮಾಣಕ್ಕೆ ನಿರ್ಧಾರವನ್ನ ಕೈಗೊಂಡಿದೆ. ತನ್ಮಧ್ಯೆ 3000ಕ್ಕೂ ಅಧಿಕ ಸಿಖ್ ಯಾತ್ರಿಗಳು ಬುಧವಾರ ಲಾಹೋರ್ ತಲುಪಿದ್ದು,ಜನ್ಮ ದಿನಾಚರಣೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಗುರು ನಾನಕ್‌ರ ಜನ್ಮಸ್ಥಳವಾದ ನಾನಕಾನಾ ಸಾಹಿಬ್ ಗುರುದ್ವಾರಾ ಜನಮೇಸ್ಥಾನಕ್ಕೆ ಪ್ರಯಾಣ ಮುಂದುವರಿಸಿದರು.

ಪಾಕಿಸ್ತಾನದಲ್ಲಿ ರಾವಿನದಿ ದಂಡೆಯಲ್ಲಿರುವ ಗುರುದ್ವಾರಾ ದರ್ಬಾರ್ ಸಾಹಿಬ್ ಕರ್ತಾರಪುರಕ್ಕ್ಕೆ ತೆರಳುವ ಸಿಖ್ ಯಾತ್ರಿಗಳ ಅನುಕೂಲಕ್ಕಾಗಿ ಭಾರತವು ಪಂಜಾಬಿನ ಗುರುದಾಸಪುರ ಜಿಲ್ಲೆಯ ದೇರಾ ಬಾಬಾ ನಾನಕ್‌ನಿಂದ ಅಂತರರಾಷ್ಟ್ರೀಯ ಗಡಿಯವರೆಗೆ ಸುಸಜ್ಜಿತ ಕಾರಿಡಾರ್‌ನ್ನು ನಿರ್ಮಿಸಲಿದೆ ಎಂದು ಸಭೆಯ ಬಳಿಕ ಗೃಹಸಚಿವ ರಾಜನಾಥ ಸಿಂಗ್ ಅವರು ಟ್ವೀಟಿಸಿದರೆ,ಯಾತ್ರಿಗಳಿಗೆ ವೀಸಾ ವ್ಯವಸ್ಥೆಯನ್ನು ಮಾಡಲಾಗುವುದು. ಕಾರಿಡಾರ್ 3-4 ಕಿ.ಮೀೂ.ಉದ್ದವಿರಲಿದೆ ಎಂದು ವಿತ್ತಸಚಿವ ಅರುಣ್ ಜೇಟ್ಲ್ಲಿ ಅವರು ಸುದ್ದಿಗಾರರಿಗೆ ತಿಳಿಸಿದರು.

ಕರ್ತಾರಪುರ ಗಡಿಯನ್ನು ತೆರೆಯುವ ಪಾಕಿಸ್ತಾನದ ಪ್ರಸ್ತಾಪವನ್ನು ಭಾರತವು ಒಪ್ಪಿಕೊಂಡಿರುವದು ಉಭಯ ರಾಷ್ಟ್ರಗಳಲ್ಲಿ ಶಾಂತಿ ಪ್ರತಿಪಾದಕರ ಪಾಲಿಗೆ ಸಿಕ್ಕ ವಿಜಯವಾಗಿದೆ ಎಂದು ಪಾಕಿಸ್ತಾನದ ವಾರ್ತಾಸಚಿವ ಫವಾದ್ ಚೌಧರಿ ಟ್ವೀಟಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X