Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮಂಡಳಿಗೆ ಆಯ್ಕೆ ಮಾಡುವ ಅವಕಾಶಗಳ ಬಗ್ಗೆ...

ಮಂಡಳಿಗೆ ಆಯ್ಕೆ ಮಾಡುವ ಅವಕಾಶಗಳ ಬಗ್ಗೆ ತಿಳಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

ರಾಜ್ಯ ವಕ್ಫ್ ಮಂಡಳಿಯ ಚುನಾವಣೆಯಿಂದ ಆಸೀಫ್ ಅಲಿ ಕೈಬಿಟ್ಟ ವಿಚಾರ

ವಾರ್ತಾಭಾರತಿವಾರ್ತಾಭಾರತಿ22 Nov 2018 9:55 PM IST
share
ಮಂಡಳಿಗೆ ಆಯ್ಕೆ ಮಾಡುವ ಅವಕಾಶಗಳ ಬಗ್ಗೆ ತಿಳಿಸಿ: ಸರಕಾರಕ್ಕೆ ಹೈಕೋರ್ಟ್ ಸೂಚನೆ

ಬೆಂಗಳೂರು, ನ.22: ರಾಜ್ಯ ವಕ್ಫ್ ಮಂಡಳಿಗೆ ಮುಸ್ಲಿಂ ಸಂಸದರು, ಶಾಸಕರು, ಬಾರ್ ಕೌನ್ಸಿಲ್ ಸದಸ್ಯರು ಹಾಗೂ ಮುತವಲ್ಲಿ ಕೆಟಗರಿಯಲ್ಲಿ ಒಬ್ಬರನ್ನು ಅಥವಾ ಇಬ್ಬರನ್ನು ಮೀರದಂತೆ ಆಯ್ಕೆ ಮಾಡುವ ಅವಕಾಶಗಳ ಬಗ್ಗೆ ನಿಲುವು ತಿಳಿಸುವಂತೆ ಹೈಕೋರ್ಟ್ ಗುರುವಾರ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ರಾಜ್ಯ ಬಾರ್ ಕೌನ್ಸಿಲ್‌ನ ಚುನಾಯಿತ ಸದಸ್ಯರಾಗಿರುವ ತಮ್ಮ ಹೆಸರನ್ನು ರಾಜ್ಯ ವಕ್ಫ್ ಮಂಡಳಿ ಚುನಾವಣೆಯ ಕರಡು ಮತದಾರರ ಪಟ್ಟಿಯಿಂದ ತೆಗೆದು ಹಾಕಿರುವುದನ್ನು ಪ್ರಶ್ನಿಸಿ ವಕೀಲ ಆಸೀಫ್ ಅಲಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಗುರುವಾರ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ ನಡೆಸಿತು.

ಈ ವೇಳೆ ವಕ್ಫ್ ಕಾಯ್ದೆ ಪ್ರಕಾರ ಚುನಾವಣೆಗೆ ಪರಿಗಣಿಸಬೇಕಾದ ಕೆಟಗರಿಗಳಲ್ಲಿ ಒಬ್ಬರನ್ನು ಅಥವಾ ಇಬ್ಬರನ್ನು ಮೀರದಂತೆ ಸರಕಾರ ಆಯ್ಕೆ ಮಾಡಬಹುದು ಎಂದಿದೆ. ಆದರೆ, ಸರಕಾರ ಒಬ್ಬರನ್ನು ಆಯ್ಕೆ ಮಾಡುತ್ತದೆಯೇ ಅಥವಾ ಇಬ್ಬರನ್ನು ಅನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ತಿಳಿಸುವಂತೆ ಸರಕಾರದ ಪರ ವಕೀಲರಿಗೆ ಸೂಚನೆ ನೀಡಿದ ನ್ಯಾಯಪೀಠ, ವಿಚಾರಣೆಯನ್ನು ಶುಕ್ರವಾರಕ್ಕೆ (ನ.23) ಮುಂದೂಡಿತು.

ಅರ್ಜಿದಾರರ ಪರ ವಾದಿಸಿದ ಹಿರಿಯ ವಕೀಲ ಜಯಕುಮಾರ್ ಎಸ್. ಪಾಟೀಲ್, ವಕ್ಫ್ ಮಂಡಳಿಗೆ ಮುಸ್ಲಿಂ ಸಂಸದರು, ಶಾಸಕರು, ಬಾರ್ ಕೌನ್ಸಿಲ್ ಸದಸ್ಯರು ಹಾಗೂ ಮುತವಲ್ಲಿ ಕೆಟಗರಿಯಲ್ಲಿ ಒಬ್ಬರನ್ನು ಅಥವಾ ಇಬ್ಬರನ್ನು ಮೀರದಂತೆ ಆಯ್ಕೆ ಮಾಡುವ ಅಧಿಕಾರ ರಾಜ್ಯ ಸರಕಾರಕ್ಕಿದೆ. ಸಂಖ್ಯೆ ನಿಗದಿಪಡಿಸುವುದು ಸರಕಾರಕ್ಕೆ ಬಿಟ್ಟ ವಿಚಾರ. ಹಾಲಿ ಸಂಸದರು, ಶಾಸಕರು ಇಲ್ಲದಿದ್ದಲ್ಲಿ ಮಾಜಿಗಳನ್ನು ಪರಿಗಣಿಸಬಹುದು ಎಂದು ವಕ್ಫ್ ತಿದ್ದುಪಡಿ ಕಾಯ್ದೆ ಹೇಳುತ್ತದೆ. ಆದರೆ, ಬಾರ್ ಕೌನ್ಸಿಲ್‌ನಲ್ಲಿ ಮುಸ್ಲಿಂ ಸದಸ್ಯ ಇಲ್ಲದಿದ್ದಲ್ಲಿ ಹಿರಿಯ ಮುಸ್ಲಿಂ ವಕೀಲರನ್ನು ರಾಜ್ಯ ಸರಕಾರ ನೇಮಕ ಮಾಡಬಹುದು ಎಂದು ಹೇಳಲಾಗಿದ್ದು, ಅಲ್ಲಿ ಮಾಜಿ ಸದಸ್ಯರ ಪ್ರಸ್ತಾಪವಿಲ್ಲ. ಮುಸ್ಲಿಂ ಸದಸ್ಯರ ಕೆಟಗರಿ ತಮ್ಮ ಅರ್ಜಿದಾರರಿಗೆ ಅನ್ವಯವಾಗುತ್ತದೆ. ಏಕೆಂದರೆ ಅವರೊಬ್ಬರೇ ಬಾರ್ ಕೌನ್ಸಿಲ್‌ನಲ್ಲಿ ಚುನಾಯಿತ ಮುಸ್ಲಿಂ ಸದಸ್ಯರಾಗಿದ್ದಾರೆ. ತಿದ್ದುಪಡಿ ಕಾಯ್ದೆಯಲ್ಲಿನ ಅವಕಾಶಗಳನ್ನು ಕಡೆಗಣಿಸಿ ಪ್ರಾದೇಶಿಕ ಆಯುಕ್ತರು ಕರಡು ಮತದಾರರ ಪಟ್ಟಿಯಿಂದ ತಮ್ಮ ಅರ್ಜಿದಾರರ ಹೆಸರು ಕೈಬಿಟ್ಟಿದ್ದಾರೆ ಎಂದು ನ್ಯಾಯಪೀಠಕ್ಕೆ ತಿಳಿಸಿದರು.

ಇದಕ್ಕೆ ಆಕ್ಷೇಪಿಸಿದ ಪ್ರತಿವಾದಿ ಪರ ವಕೀಲರು, ಬಾರ್ ಕೌನ್ಸಿಲ್ ಕಾಯ್ದೆ ಪ್ರಕಾರ ಗೆಜೆಟ್ ಅಧಿಸೂಚನೆ ಪ್ರಕಟಗೊಂಡ ಬಳಿಕವಷ್ಟೇ ಬಾರ್ ಕೌನ್ಸಿಲ್‌ಗೆ ಚುನಾಯಿತರಾದವರು ಅಧಿಕೃತ ಸದಸ್ಯರಾಗುತ್ತಾರೆ. ಆಗ ಮಾತ್ರ ವಕ್ಫ್ ಮಂಡಳಿ ಚುನಾವಣೆಯ ಮತದಾರರ ಪಟ್ಟಿಯಲ್ಲಿ ಅವರ ಹೆಸರು ಊರ್ಜಿತವಾಗುತ್ತದೆ. ಆದರೆ, ವಕ್ಫ್ ಮಂಡಳಿಯ ಚುನಾವಣೆಗೆ ಪ್ರಾದೇಶಿಕ ಆಯುಕ್ತರು ಕರಡು ಮತದಾರರ ಪಟ್ಟಿ ಪ್ರಕಟಿಸಿದ ವೇಳೆ ಅರ್ಜಿದಾರರು ಬಾರ್ ಕೌನ್ಸಿಲ್‌ಗೆ ಚುನಾಯಿತರಾಗಿದ್ದಿರಬಹುದು. ಆದರೆ, ಅವರು ಅಧಿಕೃತವಾಗಿ ಸದಸ್ಯರಾಗಿರಲಿಲ್ಲ. ಮತದಾರರ ಪಟ್ಟಿಯಲ್ಲಿ ಅವರ ಹೆಸರು ಸೇರಿಸಿದ್ದೇ ತಪ್ಪು ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.

ರಾಜ್ಯ ವಕ್ಫ್ ಮಂಡಳಿಯ ಚುನಾವಣೆಗೆ ಬೆಂಗಳೂರು ಪ್ರಾದೇಶಿಕ ಆಯುಕ್ತರು 2018ರ ಸೆ.10ರಂದು ಕರಡು ಮತದಾರರ ಪಟ್ಟಿ ಪ್ರಕಟಿಸಿ ಅಧಿಸೂಚನೆ ಹೊರಡಿಸಿದ್ದರು. ಅದರಲ್ಲಿ ಬಾರ್ ಕೌನ್ಸಿಲ್‌ನ ಹಾಲಿ ಚುನಾಯಿತ ಮುಸ್ಲಿಂ ಸದಸ್ಯ ಆಸೀಫ್ ಅಲಿ ಅವರ ಹೆಸರು ಸೇರಿಸಲಾಗಿತ್ತು. ಆದರೆ, ಅ.15ರಂದು ಆಸೀಫ್ ಅಲಿ ಅವರ ಹೆಸರನ್ನು ತೆಗೆದುಹಾಕಿ ಬಾರ್ ಕೌನ್ಸಿಲ್‌ನ ಮಾಜಿ ಸದಸ್ಯ ರಿಯಾಜ್ ಖಾನ್ ಅವರ ಹೆಸರನ್ನು ಸೇರಿಸಲಾಗಿತ್ತು. ಇದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X