Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನಾಗರಿಕರ ಮತದಾನದ ಹಕ್ಕನ್ನು ಖಾತರಿಪಡಿಸಲು...

ನಾಗರಿಕರ ಮತದಾನದ ಹಕ್ಕನ್ನು ಖಾತರಿಪಡಿಸಲು ಪಿಎಫ್‌ಐ ಆಗ್ರಹ

'ಮತದಾರರ ಪಟ್ಟಿಗೆ ಸೇರ್ಪಡೆಯ ಅರ್ಜಿಗಳ ತಿರಸ್ಕಾರ'

ವಾರ್ತಾಭಾರತಿವಾರ್ತಾಭಾರತಿ22 Nov 2018 10:08 PM IST
share

ಮಂಗಳೂರು, ನ.22: ರಾಜ್ಯದಲ್ಲಿ 2017-18ರಲ್ಲಿ ಮತದಾರರ ಪಟ್ಟಿಗೆ ಸೇರ್ಪಡೆಗಾಗಿ ಸಲ್ಲಿಸಲಾದ 2.8 ಲಕ್ಷ ಅರ್ಜಿಗಳ ಪೈಕಿ ಶೇ.62ರಷ್ಟು ಅರ್ಜಿಗಳು ತಿರಸ್ಕೃತಗೊಂಡಿರುವುದು ಸುಮಾರು ಶೇ.20ರಷ್ಟು ಅರ್ಜಿಗಳನ್ನು ವಿದೇಶಿ ಪೌರರೆಂದು ಆರೋಪಿಸಿ ಮತ್ತು ಶೇ.24ರಷ್ಟು ಅರ್ಜಿಗಳನ್ನು ಅನಿರ್ದಿಷ್ಟ ಕಾರಣ ಗಳಿಗಾಗಿ ಕೈಬಿಡಲಾಗಿದೆ ಎಂದು ಅಧ್ಯಯನವೊಂದರಲ್ಲಿ ಬಹಿರಂಗಗೊಂಡಿರುವ ವಿಚಾರವು ತೀರಾ ಆಘಾತಕಾರಿಯಾಗಿದೆ ಎಂದು ಪಿಎಫ್‌ಐ ರಾಜ್ಯಾಧ್ಯಕ್ಷ ಮುಹಮ್ಮದ್ ಶಾಕಿಬ್ ಹೇಳಿದ್ದಾರೆ.

ದೊಡ್ಡಮಟ್ಟದಲ್ಲಿ ತಿರಸ್ಕೃತಗೊಂಡಿರುವ ಅರ್ಜಿದಾರರಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿದ್ದು, ಇದು ಮುಸ್ಲಿಮರನ್ನು ಚುನಾವಣಾ ಪ್ರಕ್ರಿಯೆಯಿಂದ ಹೊರಗಿಡುವ ದುರುದ್ದೇಶಪೂರಿತ ಪ್ರಯತ್ನದಂತೆ ಮೇಲ್ನೋಟಕ್ಕೆ ಕಂಡುಬರುತ್ತಿದೆ. ಅರ್ಜಿದಾರ ಕುಟುಂಬಗಳಿಗೆ ತಮ್ಮ ಅರ್ಜಿ ತಿರಸ್ಕರಿಸಲ್ಪಟ್ಟ ಕುರಿತಾಗಲೀ, ಯಾವ ಕಾರಣಕ್ಕಾಗಿ ಅರ್ಜಿ ತಿರಸ್ಕರಿಸಲಾಗಿದೆ ಎಂಬ ಮಾಹಿತಿಯಿಲ್ಲ ಮತ್ತು ಅನರ್ಹತೆಯನ್ನು ಪ್ರಶ್ನಿಸಲು ಅವರಿಗೆ ಅವಕಾಶವನ್ನೇ ನೀಡಲಾಗಿಲ್ಲ. ಆಧಾರ್, ವಿದ್ಯುತ್ ಬಿಲ್, ಶಾಲಾ ಪ್ರಮಾಣ ಪತ್ರಗಳಿದ್ದ ಹೊರತಾಗಿಯೂ ವಿದೇಶೀ ಪ್ರಜೆಗಳೆಂಬ ಶಂಕೆಯಲ್ಲಿ ಅವರನ್ನು ಮತದಾರರ ಪಟ್ಟಿಯಲ್ಲಿ ಅವಕಾಶ ಕಲ್ಪಿಸಲಾಗಿಲ್ಲ ಎಂಬ ಮಾಹಿತಿಯನ್ನೂ ಸಂಶೋಧನೆ ಬಹಿರಂಗಪಡಿಸಿದೆ. ಅಗತ್ಯ ದಾಖಲೆಗಳಿದ್ದು ಕೂಡ ಅವರಿಗೆ ವಿದೇಶಿ ಪ್ರಜೆಗಳೆಂದು ಸುಳ್ಳು ಹಣೆಪಟ್ಟಿ ಕಟ್ಟಿರುವುದು ಮೇಲ್ನೋಟಕ್ಕೆ ಸಾಬೀತಾಗುತ್ತದೆ. ಈ ಹಿಂದೆ ಅಸ್ಸಾಂನಲ್ಲಿಯೂ 40 ಲಕ್ಷ ಮಂದಿ ಬಂಗಾಳಿ ಭಾಷಿಕರನ್ನು ರಾಷ್ಟ್ರೀಯ ಪೌರತ್ವ ನೋಂದಣಿಯ ಅಂತಿಮ ಕರಡಿನಿಂದ ಹೊರಗಿಡಲಾಗಿತ್ತು. ಗಮನಾರ್ಹವೆಂದರೆ, ಕರಡಿನಿಂದ ಹೊರಗಿಡಲಾಗಿದ್ದವರ ಪೈಕಿ ದೊಡ್ಡಪಾಲು ಮುಸ್ಲಿಮರದ್ದಾಗಿತ್ತು. ಈ ಬೆಳವಣಿಗೆಯ ನಂತರ ಕುತ್ಸಿತ ಶಕ್ತಿಗಳು ಅಗತ್ಯ ದಾಖಲೆಗಳನ್ನು ಹೊಂದಿಯೂ ಎನ್‌ಆರ್‌ಸಿಯಲ್ಲಿ ಹೆಸರು ಕೈಬಿಟ್ಟುಹೋಗಿರುವವರನ್ನು ಬಾಂಗ್ಲಾದೇಶಿ ನುಸುಳುಕೋರರು ಎಂದು ವ್ಯಾಪಕ ಅಪಪ್ರಚಾರದಲ್ಲಿ ತೊಡಗಿ ರಾಜಕೀಯ ಲಾಭ ಪಡೆಯಲು ಹವಣಿಸಿದ್ದವು. ಇದೀಗ ರಾಜ್ಯದಲ್ಲೂ ಅಗತ್ಯ ದಾಖಲೆಗಳನ್ನು ಸಲ್ಲಿಸಿರುವ ಹೊರತಾಗಿಯೂ ವಿದೇಶಿ ಪೌರರೆಂದು ಜರೆದು ನಾಗರಿಕರನ್ನು ಮತದಾರರ ಪಟ್ಟಿಯಿಂದ ಕೈಬಿಟ್ಟಿರುವುದು ಸಂಶಯದ ವಾತಾವರಣವನ್ನು ಸೃಷ್ಟಿಸಿದೆ.

ಹಾಗಾಗಿ ಆಡಳಿತ ವ್ಯವಸ್ಥೆಯು ಕೂಡಲೇ ಮಧ್ಯ ಪ್ರವೇಶಿಸಿ 1960 ಮತದಾರರ ನಿಯಮಾವಳಿಗಳ ನೋಂದಣಿಯಡಿ ಒದಗಿಸಲಾದ ವ್ಯಾಪಕ ಪ್ರಕ್ರಿಯೆಗೆ ಅವಕಾಶ ಕಲ್ಪಿಸಿ ನಾಗರಿಕರ ಮತದಾನದ ಹಕ್ಕನ್ನು ಖಾತರಿಪಡಿಸಬೇಕು ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು ಎಂದು ಸರಕಾರ ಮತ್ತು ಚುನಾವಣಾ ಅಧಿಕಾರಿಗಳೊಂದಿಗೆ ಮುಹಮ್ಮದ್ ಶಾಕಿಬ್ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X