Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಾಲಮನ್ನಾಕ್ಕೆ ಆಗ್ರಹ: ಮಹಾರಾಷ್ಟ್ರ...

ಸಾಲಮನ್ನಾಕ್ಕೆ ಆಗ್ರಹ: ಮಹಾರಾಷ್ಟ್ರ ರೈತರಿಂದ ಭಾರೀ ಪ್ರತಿಭಟನೆ,ಮಣಿದ ಮುಖ್ಯಮಂತ್ರಿ

ವಾರ್ತಾಭಾರತಿವಾರ್ತಾಭಾರತಿ22 Nov 2018 10:13 PM IST
share
ಸಾಲಮನ್ನಾಕ್ಕೆ ಆಗ್ರಹ: ಮಹಾರಾಷ್ಟ್ರ ರೈತರಿಂದ ಭಾರೀ ಪ್ರತಿಭಟನೆ,ಮಣಿದ ಮುಖ್ಯಮಂತ್ರಿ

ಮುಂಬೈ,ನ.22: ರಾಜ್ಯದ ರೈತ ಮತ್ತು ಬುಡಕಟ್ಟು ಸಮುದಾಯಗಳಿಗೆ ಸೇರಿದ 7,000ಕ್ಕೂ ಅಧಿಕ ಜನರು ಗುರುವಾರ ಇಲ್ಲಿಯ ಆಝಾದ್ ಮೈದಾನದಲ್ಲಿ ಸಮಾವೇಶಗೊಂಡು ಪ್ರತಿಭಟನೆ ನಡೆಸಿ ಸಾಲ ಮನ್ನಾ,ಬರ ಪರಿಹಾರ,ಬೆಳೆಗಳಿಗೆ ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ,ಅರಣ್ಯ ಹಕ್ಕುಗಳ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನ ಇತ್ಯಾದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿದರು. ತಮ್ಮ ಬೇಡಿಕೆಗಳು ಈಡೇರುವವರೆಗೂ ಮೈದಾನದಿಂದ ಕದಲುವುದಿಲ್ಲವೆಂಬ ರೈತರ ಹಟಕ್ಕೆ ಕೊನೆಗೂ ಮಣಿದ ಮುಖ್ಯಮತ್ರಿ ದೇವೇಂದ್ರ ಫಡ್ನವೀಸ್ ಅವರು ಸಂಜೆ ವಿಧಾನ ಭವನದಲ್ಲಿ ರೈತ ನಾಯಕರನ್ನು ಭೇಟಿಯಾಗಿ ಹೆಚ್ಚಿನ ಬೇಡಿಕೆಗಳ ಈಡೇರಿಕೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದಾಗಿ ಲಿಖಿತ ಭರವಸೆಯನ್ನು ನೀಡಿದರು.

ಇದು ಈ ವರ್ಷ ರಾಜ್ಯದಲ್ಲಿ ರೈತರ ಮೂರನೇ ಬೃಹತ್ ಪ್ರತಿಭಟನೆಯಾಗಿದ್ದು, ಲೋಕ ಸಂಘರ್ಷ ಮೋರ್ಚಾದ ನೇತೃತ್ವದಲ್ಲಿ ನಡೆದ ಪ್ರತಿಭಟನೆಯನ್ನು ಜೆಡಿಎಸ್,ಆಪ್ ಮತ್ತು ಶಿವಸೇನೆ ಬೆಂಬಲಿಸಿದ್ದವು.

ಥಾಣೆಯಿಂದ ಮಂಗಳವಾರ ಜಾಥಾ ಆರಂಭಿಸಿದ್ದ ರೈತರು ಗುರುವಾರ ಅಪರಾಹ್ನ ಆಝಾದ್ ಮೈದಾನವನ್ನು ತಲುಪಿದ್ದರು. ಸ್ವರಾಜ್ ಅಭಿಯಾನದ ನಾಯಕ ಯೋಗೇಂದ್ರ ಯಾದವ ಮತ್ತು ಮಾಗ್ಸೆಸೆ ಪ್ರಶಸಿ ್ತಪುರಸ್ಕೃತ ರಾಜೇಂದ್ರ ಸಿಂಗ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಪ್ರತಿಭಟನಾಕಾರರೊಂದಿಗೆ ಕೈಜೋಡಿಸಿದ್ದರು.

ರೈತರ ಜಾಥಾದ ಹಿನ್ನೆಲೆಯಲ್ಲಿ ಬೆಳಿಗ್ಗೆ 10ಗಂಟೆಯವರೆಗೆ ಜಾಥಾ ಸಾಗುವ ಕೆಲವು ರಸ್ತೆಗಳನ್ನು ಬಳಸದಂತೆ ಪೊಲೀಸರು ವಾಹನಗಳಿಗೆ ಸೂಚಿಸಿದ್ದರು, ಆಝಾದ್ ಮೈದಾನದ ಬಳಿಯೂ ಸಂಚಾರಕ್ಕೆ ಕೆಲವು ಕಾಲ ವ್ಯತ್ಯಯವುಂಟಾಗಿತ್ತು.

ಬರ ಪರಿಹಾರ ಪ್ರತಿ ಎಕರೆ ನೀರಾವರಿರಹಿತ ಭೂಮಿಗೆ 50,000 ರೂ. ಮತ್ತು ನೀರಾವರಿ ಭೂಮಿಗೆ ಒಂದು ಲ.ರೂ.,ಯಾವುದೇ ಷರತ್ತುಗಳಿಲ್ಲದೆ ಸಂಪೂರ್ಣ ಕೃಷಿ ಸಾಲ ಮನ್ನಾ,ಕನಿಷ್ಠ ಬೆಂಬಲ ಬೆಲೆ ಹೆಚ್ಚಳ,ಬುಡಕಟ್ಟು ಜನಾಂಗಗಳಿಗೆ ಅರಣ್ಯ ಹಕ್ಕುಗಳ ವರ್ಗಾವಣೆ,ಬುಡಕಟ್ಟು ಯುವಕರಿಗೆ ಉದ್ಯೋಗ,ಸ್ವಾಮಿನಾಥನ್ ಸಮಿತಿಯ ಶಿಫಾರಸುಗಳ ಅನುಷ್ಠಾನ ಇತ್ಯಾದಿ ಬೇಡಿಕೆಗಳನ್ನು ಪ್ರತಿಭಟನಾಕಾರರು ಮಂಡಿಸಿದ್ದಾರೆ.

ಪಂಜಾಬ್ ಮತ್ತು ಕರ್ನಾಟಕಗಳಲ್ಲಿಯೂ ರೈತರು ಪ್ರತಿಭಟನೆಗಳನ್ನು ನಡೆಸುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X