Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ...

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಪ್ರಕಾರ ಲಭ್ಯ ನೀರನ್ನು ಪೂರ್ಣ ಬಳಸಿಕೊಳ್ಳಲು ಕೇಂದ್ರದ ಯೋಜನೆ

ವಾರ್ತಾಭಾರತಿವಾರ್ತಾಭಾರತಿ25 Nov 2018 8:29 PM IST
share

ಹೊಸದಿಲ್ಲಿ, ನ.25: ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಇಂಡಸ್ (ಸಿಂಧೂ) ನೀರು ಹಂಚಿಕೆ ಒಪ್ಪಂದದ ಪ್ರಕಾರ ತನ್ನ ಪಾಲಿನ ಬಳಕೆಯಾಗದ ನೀರು ಪಾಕಿಸ್ತಾನಕ್ಕೆ ಹರಿದು ಹೋಗುತ್ತಿರುವುದನ್ನು ತಡೆಯುವ ನಿಟ್ಟಿನಲ್ಲಿ ಭಾರತ ಅಣೆಕಟ್ಟು ನಿರ್ಮಾಣವೂ ಸೇರಿದಂತೆ ಮೂರು ಯೋಜನೆಗಳ ಕಾಮಗಾರಿಯನ್ನು ಚುರುಕಿನಿಂದ ನಡೆಸಲು ನಿರ್ಧರಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಶಹಾಪುರ ಕಾಂಡಿ ಅಣೆಕಟ್ಟು ಯೋಜನೆ, ಜಮ್ಮು ಕಾಶ್ಮೀರದ ಉಜಾಹ್ ಅಣೆಕಟ್ಟು ಯೋಜನೆ, ಪಂಜಾಬ್‌ನ ಸಟ್ಲೇಜ್-ಬಿಯಾಸ್ ಸಂಪರ್ಕ ಯೋಜನೆಯ ಕಾಮಗಾರಿಯನ್ನು ತ್ವರಿತಗತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಭ್ರಷ್ಟಾಚಾರ ಹಾಗೂ ಅಂತರ್‌ರಾಜ್ಯ ವಿವಾದಗಳಿಂದಾಗಿ ಈ ಯೋಜನೆಗಳು ಸ್ಥಗಿತಗೊಂಡಿವೆ. ಇದೀಗ ಇದನ್ನು ತ್ವರಿತವಾಗಿ ಪೂರ್ಣಗೊಳಿಸಲು ನಿರ್ಧರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಪ್ರಕಾರ, ಸಿಂಧೂ ನದಿಯ ಉಪನದಿಗಳಾದ ಸಟ್ಲೇಜ್, ಬಿಯಾಸ್ ಹಾಗೂ ರಾವಿ ನದಿಗಳ ಮೂಲಕ ಹರಿಯುತ್ತಿರುವ ನೀರನ್ನು ಭಾರತಕ್ಕೆ, ಚೆನಾಬ್, ಝೇಲಂ ಮತ್ತು ಸಿಂಧು ನದಿ ನೀರನ್ನು ಪಾಕಿಸ್ತಾನಕ್ಕೆ ಹಂಚಿಕೆ ಮಾಡಲಾಗಿದೆ. ಒಟ್ಟು 168 ಮಿಲಿಯನ್ ಎಕ್ರೆ ಅಡಿ ನೀರಿನಲ್ಲಿ ಭಾರತದ ಪಾಲು ಶೇ.20ರಷ್ಟು ಅಂದರೆ, 33 ಮಿಲಿಯನ್ ಎಕ್ರೆ ಅಡಿ ನೀರು. ಈ ಪಾಲಿನಲ್ಲಿ ಭಾರತ ಸುಮಾರು ಶೇ.94ರಷ್ಟು ಪ್ರಮಾಣದ ನೀರನ್ನು ಮಾತ್ರ ಬಳಸಿಕೊಳ್ಳುತ್ತಿದ್ದು ಬಳಕೆಯಾಗದ ನೀರು ಪಾಕಿಸ್ತಾನಕ್ಕೆ ಹರಿದು ಹೋಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜಮ್ಮುವಿನ ಕಥುವಾ ಜಿಲ್ಲೆಯಲ್ಲಿ ರಾವಿ ನದಿಯ ಮೇಲೆ ಕಟ್ಟಲಾಗುವ ಉಜಾಹ್ ಅಣೆಕಟ್ಟಿನಲ್ಲಿ ಸಂಗ್ರಹವಾಗುವ ನೀರನ್ನು ಜಲವಿದ್ಯುತ್ ಉತ್ಪಾದನೆ ಹಾಗೂ ಕೃಷಿಕಾರ್ಯಕ್ಕೆ ಬಳಸಲಾಗುವುದು. 925 ಮಿಲಿಯನ್ ಕ್ಯುಸೆಕ್ ಮೀಟರ್(ಎಂಸಿ) ನೀರನ್ನು ಸಂಗ್ರಹಿಸುವ ಸಾಮರ್ಥ್ಯವಿರುವ ಈ ಅಣೆಕಟ್ಟಿನ ಮೂಲಕ 172.8 ಮಿಲಿಯನ್ ಎಂಸಿ ನೀರನ್ನು ಬಳಕೆ ಮಾಡಿಕೊಳ್ಳಲಾಗುವುದು. ಯೋಜನೆಯ ವೆಚ್ಚ 5,950 ಕೋಟಿ ರೂ. ಈ ಕುರಿತ ವಿವರವಾದ ಯೋಜನಾ ವರದಿಯನ್ನು ಜಮ್ಮು-ಕಾಶ್ಮೀರ ಸರಕಾರ ಕೇಂದ್ರಕ್ಕೆ ಕಳುಹಿಸಿದ್ದು ಜಲಸಂಪನ್ಮೂಲ ಇಲಾಖೆಯ ಅನುಮೋದನೆಯನ್ನು ನಿರೀಕ್ಷಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ರಾವಿ-ಬಿಯಾಸ್ ಸಂಪರ್ಕ ಯೋಜನೆಯ ಬಗ್ಗೆ ಕಾರ್ಯಸಾಧ್ಯತೆ ವರದಿಯನ್ನು ಸಿದ್ಧಪಡಿಸುವಂತೆ ಕೇಂದ್ರ ಸರಕಾರ ಪಂಜಾಬ್ ಸರಕಾರಕ್ಕೆ ಸೂಚಿಸಿದೆ.

ಶಹಾಪುರ ಕಾಂಡಿ ಯೋಜನೆಗೆ 2013ರಲ್ಲಿ ಚಾಲನೆ ನೀಡಲಾಗಿದ್ದರೂ ಜಮ್ಮು ಕಾಶ್ಮೀರ ಸರಕಾರ ಎತ್ತಿರುವ ಆಕ್ಷೇಪಣೆಯಿಂದಾಗಿ ಕಾಮಗಾರಿ ಸ್ಥಗಿತಗೊಂಡಿತ್ತು. ಇದೀಗ 2,793 ಕೋಟಿ ರೂ.ವೆಚ್ಚದ ಯೋಜನೆಯ ಕಾಮಗಾರಿ ಪುನರಾರಂಭಿಸುವ ಕುರಿತು ಈ ವರ್ಷದ ಸೆಪ್ಟೆಂಬರ್‌ನಲ್ಲಿ ಪಂಜಾಬ್ ಹಾಗೂ ಜಮ್ಮು ಮತ್ತು ಕಾಶ್ಮೀರ ಸರಕಾರಗಳ ಮಧ್ಯೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಈ ಯೋಜನೆಯ ವೆಚ್ಚವನ್ನು 2,793.54 ಕೋಟಿ ರೂ.ಗೆ ಪರಿಷ್ಕರಿಸಿರುವ ಪಂಜಾಬ್ ಸರಕಾರ, ಯೋಜನೆಯನ್ನು ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ(ಪಿಎಂಕೆಎಸ್‌ವೈ) ಅಥವಾ ವೇಗವರ್ಧಿತ ನೀರಾವರಿ ಸೌಲಭ್ಯ ಯೋಜನೆ(ಎಐಬಿಪಿ)ಯಡಿ ಸೇರಿಸಿ ಆದ್ಯತೆ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಿಕೊಂಡಿದೆ.

ಯೋಜನೆ ಅನುಷ್ಠಾನಕ್ಕೆ ಬಂದಾಗ 206 ಮೆಗಾವ್ಯಾಟ್ ವಿದ್ಯುತ್ ಉತ್ಪಾದಿಸಲು ಸಾಧ್ಯವಾಗುವ ಜೊತೆಗೆ ಪಂಜಾಬ್ ಹಾಗೂ ಜಮ್ಮು ಕಾಶ್ಮೀರದ 37,173 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲು ಸಾಧ್ಯವಾಗುತ್ತದೆ. 2016ರಲ್ಲಿ ಕಾಶ್ಮೀರದ ಉರಿ ಎಂಬಲ್ಲಿ ಪಾಕ್ ಬೆಂಬಲಿತ ಉಗ್ರರು ದಾಳಿ ನಡೆಸಿದ ಪ್ರಕರಣದ ಬಳಿಕ ಪಾಕಿಸ್ತಾನದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಸಿಂಧೂ ನದಿ ನೀರು ಹಂಚಿಕೆ ಒಪ್ಪಂದದ ಪ್ರಕಾರ ಲಭ್ಯವಿರುವ ನೀರಿನ ಪ್ರಮಾಣವನ್ನು ಪೂರ್ತಿಯಾಗಿ ಬಳಸಿಕೊಳ್ಳಲು ಕೇಂದ್ರ ಸರಕಾರ ನಿರ್ಧರಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X