Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಾರು ಬ್ಯಾಟರಿ ಕದ್ದ ಆರೋಪ: ಆಟೋ ಚಾಲಕನ...

ಕಾರು ಬ್ಯಾಟರಿ ಕದ್ದ ಆರೋಪ: ಆಟೋ ಚಾಲಕನ ಥಳಿಸಿ ಹತ್ಯೆ, ಇಬ್ಬರು ಗಂಭೀರ

ವಾರ್ತಾಭಾರತಿವಾರ್ತಾಭಾರತಿ26 Nov 2018 1:36 PM IST
share
ಕಾರು ಬ್ಯಾಟರಿ ಕದ್ದ ಆರೋಪ: ಆಟೋ ಚಾಲಕನ ಥಳಿಸಿ ಹತ್ಯೆ, ಇಬ್ಬರು ಗಂಭೀರ

ಹೊಸದಿಲ್ಲಿ, ನ.26: ಕಾರು ಬ್ಯಾಟರಿಗಳನ್ನು ಕಳವುಗೈದಿದ್ದಾರೆಂದು ಆರೋಪಿಸಿ ಮೂವರನ್ನು ಸ್ಥಳೀಯರು ವಿದ್ಯುತ್ ಕಂಬವೊಂದಕ್ಕೆ ಕಟ್ಟಿ ಹಾಕಿ ಥಳಿಸಿದ ಪರಿಣಾಮ ಓರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಆಟೋ ಚಾಲಕ 26 ವರ್ಷದ ಅವಿನಾಶ್ ಸಕ್ಸೇನಾ ಮೃತಪಟ್ಟ ಯುವಕ. ಈತನ ಜತೆಗಿದ್ದ ಮುನ್ನಿ ಪಾಲ್ (26) ಹಾಗೂ ಸೂರಜ್ ಯಾದವ್ (24) ಎಂಬರು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ.

ಘಟನೆ ಪಶ್ಚಿಮ ದೆಹಲಿಯ ಮೋಹನ್ ಗಾರ್ಡನ್ ಪ್ರದೇಶದಲ್ಲಿ ನಡೆದಿದೆ. ಸುಮಾರು 200ರಿಂದ 300ರಷ್ಟಿದ್ದ ಜನರು ಮೂವರನ್ನೂ ಥಳಿಸಿದ್ದರು. ಥಳಿಸುತ್ತಿರುವ ಮಧ್ಯದಲ್ಲಿಯೇ ಸಕ್ಸೇನಾ ಫೋನನ್ನು ಬಳಸಿ ಒಬ್ಬ ಆತನ ಹೆತ್ತವರಿಗೆ ಕರೆ ಮಾಡಿದ್ದು, ಆಗ ಅವಿನಾಶ್ ಮಾತನಾಡಿ ತನ್ನ ಆಟೋದ ದಾಖಲೆಗಳನ್ನು ತರುವಂತೆ ಹೇಳಿದ್ದ. ಆತನ ಹೆತ್ತವರು ಕೂಡಲೇ ಸ್ಥಳಕ್ಕೆ ಧಾವಿಸಿ ತಮ್ಮ ಮಗನಿಗೆ ಥಳಿಸುತ್ತಿರುವುದನ್ನು ಕಂಡು ಆತನನ್ನು ಬಿಟ್ಟು ಬಿಡುವಂತೆ ಗೋಗರೆದರೂ ಪ್ರಯೋಜನವಾಗಿಲ್ಲ.

‘‘ರಕ್ಷಿಸುವಂತೆ ನಮ್ಮ ಮಗ ಅಂಗಲಾಚುತ್ತಿದ್ದ ಆದರೆ ನಾವೇನೂ ಮಾಡುವ ಸ್ಥಿತಿಯಲ್ಲಿರಲಿಲ್ಲ. ಪ್ರತಿ ಬಾರಿ ಆತನಿಗೆ ಪ್ರಜ್ಞೆ ತಪ್ಪಿದಾಗಲೂ ಆತನ ಮುಖಕ್ಕೆ ನೀರು ಚಿಮುಕಿಸಿ ಮತ್ತೆ ಹೊಡೆಯಲಾಗುತ್ತಿತ್ತು. ನಾವು ಪೊಲೀಸರಿಗೆ ಕರೆ ಮಾಡಲು ಯತ್ನಿಸಿದಾಗ ನಮ್ಮ ಮೊಬೈಲ್ ಫೋನನ್ನು ಸೆಳೆಯಲಾಯಿತು’’ ಎಂದು ಅವಿನಾಶ್ ತಾಯಿ ಕುಸುಮ್ ಲತಾ ಹೇಳುತ್ತಾರೆ.

ಹಿರಿಯ ಪೊಲೀಸ್ ಅಧಿಕಾರಿಗಳು ಘಟನೆಯ ಬಗ್ಗೆ ಮೌನ ತಾಳಿದ್ದರೂ ತನಿಖಾ ತಂಡದ ಅಧಿಕಾರಿಗಳಲ್ಲೊಬ್ಬರು ಈಗಾಗಲೇ ಒಬ್ಬನನ್ನು ಬಂಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಅವಿನಾಶ್ ಡ್ರಗ್ಸ್ ವ್ಯಸನಿಯಾಗಿದ್ದ ಎಂದೂ ಪೊಲೀಸರು ಹೇಳುತ್ತಿದ್ದಾರೆ. ಮೂವರೂ ಕಾರು ಬ್ಯಾಟರಿಗಳನ್ನು ಕದ್ದು ಅವುಗಳನ್ನು ಆಟೋದಲ್ಲಿ ತುಂಬಿಸುತ್ತಿದ್ದಾಗ ಸ್ಥಳೀಯರ ಕೈಗೆ ಸಿಕ್ಕಿ ಬಿದ್ದಿದ್ದರೆಂದು ಹೇಳಲಾಗುತ್ತಿದೆ. ಆದರೆ ಅವಿನಾಶ್‌ಗೆ ಯಾವುದೇ ಕ್ರಿಮಿನಲ್ ಹಿನ್ನೆಲೆಯಿಲ್ಲ ಎಂದು ಆತನ ಹೆತ್ತವರು ಹೇಳುತ್ತಿದ್ದಾರೆ.

ಆತ ತನ್ನ ಹೆತ್ತವರು, ಪತ್ನಿ ಮತ್ತು ಇಬ್ಬರು ಮಕ್ಕಳೊಂದಿಗೆ ಮೋಹನ್ ಗಾರ್ಡನ್ ಪ್ರದೇಶದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ, ರಾತ್ರಿ ಹೊತ್ತು ಆಟೋ ಓಡಿಸುತ್ತಿದ್ದ. ಮನೆಯಿಂದ ಸುಮಾರು 2 ಕಿ.ಮೀ. ದೂರವಿರುವ ಪೀಪಲ್ ಚೌಕ್ ಪ್ರದೇಶದಲ್ಲಿ ಮುಂಜಾವ 3:30ರಿಂದ 7:30ರ ನಡುವೆ ಈ ಘಟನೆ ನಡೆದಿತ್ತು. ನಾಲ್ಕು ಗಂಟೆಗಳ ಕಾಲ ಅವರನ್ನು ಥಳಿಸಲಾಗಿತ್ತು. ಅವರು ಕದ್ದಿದ್ದಾರೆ ಎನ್ನಲಾದ ಬ್ಯಾಟರಿಗಳನ್ನು ಅವರು ತಲೆಯ ಮೇಲೆ ಹೊತ್ತುಕೊಂಡು ಹೋಗುವಂತೆ ಮಾಡಲಾಯಿತು ಎಂದು ಸ್ಥಳೀಯ ನಿವಾಸಿಯೊಬ್ಬರು ಹೇಳುತ್ತಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X