Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ​ಬಿಜೆಪಿ, ಸಂಘಪರಿವಾರದಿಂದ ಮಹಿಳಾ ವಿರೋಧಿ...

​ಬಿಜೆಪಿ, ಸಂಘಪರಿವಾರದಿಂದ ಮಹಿಳಾ ವಿರೋಧಿ ನಿಲುವು: ಯಮುನಾ ಗಾಂವ್ಕರ್

ದ.ಕ.ಜಿಲ್ಲಾ ಅಕ್ಷರ ದಾಸೋಹ ನೌಕರರ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ26 Nov 2018 6:02 PM IST
share
​ಬಿಜೆಪಿ, ಸಂಘಪರಿವಾರದಿಂದ ಮಹಿಳಾ ವಿರೋಧಿ ನಿಲುವು: ಯಮುನಾ ಗಾಂವ್ಕರ್

ಮಂಗಳೂರು, ನ.26: ಶಬರಿಮಲೆಯ ಅಯ್ಯಪ್ಪಸ್ವಾಮಿಯ ದರ್ಶನ ಪಡೆಯಲು ಮಹಿಳೆಯರು ಅರ್ಹರು ಎಂದು ಸುಪ್ರೀಂ ಕೋರ್ಟ್ ಚಾರಿತ್ರಿಕ ತೀರ್ಪು ನೀಡಿದ್ದರೂ ಕೂಡಾ ಬಿಜೆಪಿ ಮತ್ತು ಸಂಘಪರಿವಾರ ಅದನ್ನು ವಿರೋಧಿಸುವ ಮೂಲಕ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಸಾಹಿತಿ ಹಾಗೂ ಕಾರ್ಮಿಕ ನಾಯಕಿ ಯಮುನಾ ಗಾಂವ್ಕರ್ ಆರೋಪಿಸಿದರು.

ನಗರದಲ್ಲಿ ರವಿವಾರ ನಡೆದ ದ.ಕ.ಜಿಲ್ಲಾ ಅಕ್ಷರದಾಸೋಹ ನೌಕರರ 7ನೇ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.
ಮಹಿಳೆಯರನ್ನು ಮಾತೆಯರೆಂದು ಮೊಸಳೆ ಕಣ್ಣೀರಿಡುವ ಸಂಘ ಪರಿವಾರದ ಮಹಿಳಾ ವಿರೋಧಿ ನೀತಿ ಬಯಲಾಗುತ್ತಲೇ ಇದೆ ಎಂದ ಯಮುನಾ ಗಾಂವ್ಕರ್ ಪಿಣರಾಯ್ ವಿಜಯನ್ ನೇತೃತ್ವದ ಕೇರಳ ಎಡರಂಗ ಸರಕಾರದ ಜನಪರ ನೀತಿ ಹಾಗೂ ಸಂವಿಧಾನಬದ್ಧ ಸುಪ್ರೀಂಕೋರ್ಟ್‌ನ ತೀರ್ಪನ್ನು ಜಾರಿಗೊಳಿಸುವ ಮುತುವರ್ಜಿಯನ್ನು ಶ್ಲಾಘಿಸಿದರು.

ಸಿಐಟಿಯು ದ.ಕ.ಜಿಲ್ಲಾಧ್ಯಕ್ಷ ಜೆ.ಬಾಲಕೃಷ್ಣ ಶೆಟ್ಟಿ ಮಾತನಾಡಿ ಅಕ್ಷರದಾಸೋಹ ನೌಕರರಿಗೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ 1,000 ರೂ. ವೇತನ ಏರಿಕೆ ಮಾಡುವುದಾಗಿ 2014ರಲ್ಲಿ ಭರವಸೆ ನೀಡಿತ್ತು. ಆದರೆ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರಕಾರ ಅದನ್ನು ಜಾರಿಗೊಳಿಸಲು ಮುಂದಾಗುತ್ತಿಲ್ಲ. ಬದಲಾಗಿ ಪೆಟ್ರೋಲ್, ಡೀಸೆಲ್ ದರವನ್ನು ವಿಪರೀತ ಏರಿಕೆ ಮಾಡಿ ಜನಸಾಮಾನ್ಯರ ಬದುಕಿನ ಮೇಲೆ ಚೆಲ್ಲಾಟವಾಡುತ್ತಿದೆ ಎಂದರು.

2019ರ ಜನವರಿ 8 ಮತ್ತು 9ರ ಕಾರ್ಮಿಕ ಸಂಘಟನೆಗಳ ಸಾರ್ವತ್ರಿಕ ಮುಷ್ಕರಕ್ಕೆ ಬೆಂಬಲ ಹಾಗೂ ಕೇಂದ್ರ ಸರಕಾರ ಬಿಸಿಯೂಟ ಕಾರ್ಮಿಕರಿಗೆ ತಾತ್ಕಾಲಿಕವಾಗಿ 5,000 ರೂ. ವೇತನ ಏರಿಕೆ ಮಾಡುವ ನಿರ್ಣಯವನ್ನು ಸಮ್ಮೇಳನವು ಅಂಗೀಕರಿಸಿತು.

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಜಯಂತಿ ಬಿ.ಶೆಟ್ಟಿ, ಸಿಐಟಿಯು ನಾಯಕರಾದ ವಸಂತ ಆಚಾರಿ, ರಾಬರ್ಟ್ ಡಿಸೋಜ ಉಪಸ್ಥಿತರಿದ್ದರು. ಪ್ರಧಾನ ಕಾರ್ಯದರ್ಶಿ ಗಿರಿಜಾ ವರದಿ ವಾಚಿಸಿದರು. ಭವ್ಯಾ ಲೆಕ್ಕಪತ್ರ ಮಂಡಿಸಿದರು.

ಸಮ್ಮೇಳನದಲ್ಲಿ ಜಿಲ್ಲಾಧ್ಯಕ್ಷರಾಗಿ ಪದ್ಮಾವತಿ ಶೆಟ್ಟಿ, ಉಪಾಧ್ಯಕ್ಷರಾಗಿ ಶೋಭಾ, ಅನಿತಾ, ರೇಖಲತಾ, ಲಲಿತಾ ಬೆಳ್ತಂಗಡಿ, ಶ್ರೀಮತಿ, ಲತಾ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಗಿರಿಜಾ, ಕಾರ್ಯದರ್ಶಿಯಾಗಿ ಬಬಿತಾ, ಲೀಲಾವತಿ, ಹೇಮಲತಾ, ಪ್ರಮೀಳಾ, ಶಾಂತಾ, ಸುಮಿತ್ರಾ ಬೆಳ್ತಂಗಡಿ, ಖಜಾಂಚಿಯಾಗಿ ಭವ್ಯಾ ಹಾಗೂ 21 ಮಂದಿಯ ಜಿಲ್ಲಾ ಸಮಿತಿಯನ್ನು ಚುನಾಯಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X