Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ...

ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ ಪ್ರಾಶಸ್ತ್ಯ ಅಗತ್ಯ: ರವಿರಾಜ್ ಹೆಗ್ಡೆ

ವಾರ್ತಾಭಾರತಿವಾರ್ತಾಭಾರತಿ26 Nov 2018 6:34 PM IST
share
ಹಾಲಿನ ಗುಣಮಟ್ಟಕ್ಕೆ ಹೆಚ್ಚಿನ ಪ್ರಾಶಸ್ತ್ಯ ಅಗತ್ಯ: ರವಿರಾಜ್ ಹೆಗ್ಡೆ

ಉಡುಪಿ, ನ.26: ಹಾಲಿನ ಉದ್ಯಮದಲ್ಲಿ ಪ್ರಾಮಾಣಿಕತೆ ಇರಬೇಕು ಮತ್ತು ಗುಣಮಟ್ಟಕ್ಕೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಹಾಲಿನಲ್ಲಿ ಆ್ಯಂಟಿ ಬಯೋಟಿಕ್ಸ್ ಇಲ್ಲದಂತಹ ವ್ಯವಸ್ಥೆಗೆ ನಮ್ಮ ಹೈನುಗಾರರು ಸಿದ್ಧರಾಗಬೇಕು ಮತ್ತು ಬದ್ಧರಾಗಬೇಕು ಎಂದು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ಕೊಡವೂರು ರವಿರಾಜ್ ಹೆಗ್ಡೆ ಹೇಳಿದ್ದಾರೆ.

ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ವತಿಯಿಂದ ಡಾ. ವರ್ಗೀಸ್ ಕುರಿಯರ್ ಜನ್ಮದಿನದಂದು ಆಚರಿಸಲಾದ ರಾಷ್ಟ್ರೀಯ ಹಾಲು ದಿನಾಚರಣೆ ಪ್ರಯುಕ್ತ ಅಜ್ಜರಕಾಡು ಪುರಭವನದಲ್ಲಿ ಸೋಮವಾರ ಆಯೋಜಿಸಲಾದ ಎನ್‌ಡಿಪಿ ನೆರವಿನೊಂದಿಗೆ ತಾಂತ್ರಿಕ ಉಪನ್ಯಾಸ ಹಾಗೂ ಐಎನ್‌ಎಪಿಎಚ್ ಮತ್ತು ಕೆಚ್ಚಲು ಬಾವು ನಿಯಂತ್ರಣ ಕಾರ್ಯಕ್ರಮದ ಸಮಾರೋಪದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ತಂತ್ರಜ್ಞಾನವನ್ನು ಅಳವಡಿಸಿಕೊಂಡು ಆಸಕ್ತಿಯಿಂದ ಶ್ರಮ ವಹಿಸಿದರೆ ಹೈನುಗಾರಿಕೆಯಲ್ಲಿ ಯಶಸ್ಸು ಗಳಿಸಲು ಸಾಧ್ಯ. ಇಂದು ಹಾಲಿಗೆ ನಿರ್ದಿಷ್ಟವಾದ ದರ ಸಿಗುತ್ತಿದ್ದರೆ ಅದಕ್ಕೆ ಈ ರೀತಿಯ ವ್ಯವಸ್ಥೆಯನ್ನು ಹುಟ್ಟಿ ಹಾಕಿದ ಕುರಿಯನ್ ಕಾರಣ. ಮುಂದಿನ ದಿನಗಳಲ್ಲಿ ಒಕ್ಕೂಟ, ಹೈನುಗಾರರ ಪ್ರಗತಿ ಹಾಗೂ ಗ್ರಾಹಕರಿಗೆ ಗುಣಮಟ್ಟದ ಹಾಲನ್ನು ನೀಡುವಂತಹ ಪೂರಕವಾದ ವಾತಾವರಣವನ್ನು ನಾವು ನಿರ್ಮಿಸಬೇಕಾಗಿದೆ ಎಂದರು.

ಒಂದು ವೇಳೆ ಹಾಲಿಗೆ ಈಗ ಇರುವ ಸಹಕಾರಿ ವ್ಯವಸ್ಥೆ ಇಲ್ಲದಿರುತಿದ್ದರೆ ಅದು ಟಾಟಾ, ರಿಲಯನ್ಸ್ ನಂತಹ ಖಾಸಗಿ ಬಂಡವಾಳಶಾಹಿಗಳು ಪಾಲಾಗಿ ಲಾಭದ ಲೆಕ್ಕಾಚಾರದೊಂದಿಗೆ ವ್ಯವಹಾರ ನಡೆಯುತ್ತಿತ್ತು. ಅಲ್ಲಿ ಸಿಗುವ ಲಾಭ ನೇರವಾಗಿ ಖಾಸಗಿಯವರಿಗೆ ದೊರೆಯುತ್ತಿತ್ತು. ಆದರೆ ಈಗಿರುವ ಸಹಕಾರಿ ವ್ಯವಸ್ಥೆಯಲ್ಲಿ ಬಂದ ಲಾಭವನ್ನು ಸದಸ್ಯರಿಗೆ ಹಂಚಲಾಗುತ್ತದೆ ಎಂದು ಅವರು ತಿಳಿಸಿದರು.

ಉಪ್ಪೂರಿನಲ್ಲಿ ನಿರ್ಮಾಣವಾಗುತ್ತಿರುವ ನೂತನ ಡೈರಿಯ ಉದ್ಘಾಟನೆಯು ಮುಂದಿನ ಎರಡು ತಿಂಗಳೊಳಗೆ ನಡೆಯಲಿದೆ ಎಂದು ಅವರು ಹೇಳಿದರು.

ಕರ್ನಾಟಕ ಹಾಲು ಮಹಾಮಂಡಳಿಯ ನಿರ್ದೇಶಕ ಡಾ.ಡಿ.ಎನ್.ಹೆಗಡೆ ತಾಂತ್ರಿಕ ಉಪನ್ಯಾಸ ನೀಡಿದರು. ಒಕ್ಕೂಟದ ಉಪಾಧ್ಯಕ್ಷ ಸುಚರಿತ್ ಶೆಟ್ಟಿ ಕೆಚ್ಚಲು ಬಾವು ನಿಯಂತ್ರಣ ಸಾಮಾಗ್ರಿಗಳನ್ನು ವಿತರಿಸಿದರು. ಮಾ-ನಂದಿನಿ ಸದಸ್ಯತ್ವ ಹಾಗೂ ಷೇರುಪ್ರವನ್ನು ಬಿಡುಗಡೆಗೊಳಿಸಲಾಯಿತು.

ಜಿಪಂ ಸದಸ್ಯ ಉದಯ ಕೋಟ್ಯಾನ್, ನಿರ್ದೇಶಕರುಗಳಾದ ಪದ್ಮನಾಭ ಶೆಟ್ಟಿ ಅರ್ಕಜೆ, ಜಾನಕಿ ಹಂದೆ, ಕೃಷ್ಣ ಭಟ್, ವೀಣಾ ಆರ್.ರೈ, ಸುರೇಶ್ ಶೆಟ್ಟಿ ತೆಕ್ಕಟ್ಟೆ, ರಾಜೀವ ಶೆಟ್ಟಿ, ಅಶೋಕ್ ಕುಮಾರ್ ಶೆಟ್ಟಿ, ಉಡುಪಿ ಪಶುಸಂಗೋಪನಾ ಇಲಾಖೆಯ ಉಪನಿರ್ದೇಶಕ ಸವೋತ್ತಮ ಉಡುಪ, ಬೆಂಗಳೂರು ಎನ್‌ಡಿ ಡಿಬಿಯ ಡಾ.ಕುೃಷ್ಣಾ, ಹಿರಿಯಡ್ಕ ಸರಕಾರಿ ಪದವಿ ಕಾಲೇಜಿನ ಪ್ರಾಂಶುಪಾಲೆ ಡಾ.ನಿಕೇತನ, ಮಾ-ನಂದಿನಿ ಅಧ್ಯಕ್ಷೆ ಸವಿತಾ, ಡಾ.ಆನಂದರಾಜ್ ಮೊದಲಾದವರು ಉಪಸ್ಥಿತರಿದ್ದರು.

ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಡಾ.ಬಿ.ವಿ.ಸತ್ಯನಾರಾಯಣ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಿರ್ದೇಶಕ ಕಾಪು ದಿವಾಕರ ಶೆಟ್ಟಿ ವಂದಿಸಿ ದರು. ಸಹಾಯಕ ವ್ಯವಸ್ಥಾಪಕರಾದ ಸುಧಾಕರ್ ಹಾಗೂ ಶಂಕರ್ ನಾಯಕ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X