Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. 'ಸಾಹಿತ್ಯಾಧ್ಯಯನ ಇಂದಿನ ಸಮಾಜಕ್ಕೆ...

'ಸಾಹಿತ್ಯಾಧ್ಯಯನ ಇಂದಿನ ಸಮಾಜಕ್ಕೆ ಅತ್ಯಗತ್ಯ' ಎಕ್ಸಲೆಂಟ್ ಕನ್ನಡಹಬ್ಬ : ಡಾ. ವರದರಾಜ ಚಂದ್ರಗಿರಿ

ವಾರ್ತಾಭಾರತಿವಾರ್ತಾಭಾರತಿ26 Nov 2018 7:32 PM IST
share
ಸಾಹಿತ್ಯಾಧ್ಯಯನ ಇಂದಿನ ಸಮಾಜಕ್ಕೆ ಅತ್ಯಗತ್ಯ ಎಕ್ಸಲೆಂಟ್ ಕನ್ನಡಹಬ್ಬ : ಡಾ. ವರದರಾಜ ಚಂದ್ರಗಿರಿ

ಮೂಡುಬಿದಿರೆ, ನ.26: 'ವಿಜ್ಞಾನ ಬುದ್ಧಿವಂತಿಕೆಯನ್ನು ಹೆಚ್ಚಿಸಿದರೆ, ಸಾಹಿತ್ಯ ಹೃದಯ ವೈಶಾಲ್ಯವನ್ನು ಹೆಚ್ಚಿಸುತ್ತದೆ' ಎಂದು ಖ್ಯಾತ ವಿದ್ವಾಂಸ ಹಾಗೂ ಪ್ರಾಧ್ಯಾಪಕರಾದ ಡಾ.ವರದರಾಜ ಚಂದ್ರಗಿರಿ ಅವರು ಹೇಳಿದರು.  ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಅಯೋಜಿಸಲಾದ ಕನ್ನಡಹಬ್ಬದ ಪ್ರಯುಕ್ತ ನಡೆದ ರಾಜ್ಯಮಟ್ಟದ ಕವಿಗೋಷ್ಠಿಯ ಸಮನ್ವಯಕಾರರಾಗಿ ಮಾತನಾಡಿದ ಅವರು 'ಸಾಹಿತ್ಯ ನಮ್ಮ ಆಂತರಿಕ ವ್ಯಾಪ್ತಿಯನ್ನು ವಿಸ್ತರಿಸುತ್ತದೆ.  ಹಾಗಾಗಿ 'ಸಾಹಿತ್ಯಾಧ್ಯಯನ ಇಂದಿನ ಸಮಾಜಕ್ಕೆ ಅತ್ಯಗತ್ಯವಾಗಿದೆ'ಯೆಂದು ಅವರು ಹೇಳಿದರು. 

ಅವರು ಎಕ್ಸಲೆಂಟ್ ಕಾಲೇಜಿನಲ್ಲಿ ನಡೆದ ಕನ್ನಡ ಹಬ್ಬದ ಕವಿಗೋಷ್ಟಿಯಲ್ಲಿ ಭಾಗವಹಿಸಿ ಮಾತನಾಡಿದರು. ಕವಿಗೋಷ್ಠಿಯಲ್ಲಿ ನಾರಾಯಣ ರೈ ಕುಕ್ಕುವಳ್ಳಿ, ಪುತ್ತೂರು, ಡಿ.ಎಂ ಭಟ್ ಕುಳವೆ ಸಿರ್ಸಿ, ಪ.ಮಾನು. ಸಗರ ಗುಲ್ಬರ್ಗ, ಶಿವಕುಮಾರ್ ಗು.ಶಿವಸಿಂಪಿ ವಿಜಯಪುರ, ವಿ ಸುಬ್ರಮಣ್ಯ ಭಟ್ ತುಂಬೆ ಬಂಟ್ವಾಳ,  ಮಾ. ಮಹೇಶ್ ಮಲೆಯೂರು ಮೈಸೂರು, ಡಿ.ವಿ.ರಾಜಹೆಗ್ಡೆ ನಿಡ್ಡೋಡಿ, ಶರಶ್ಚಂದ್ರ ರಾನಡೆ ಬೆಂಗಳೂರು, ನೀರಜ ಓಕುಡ ಉಡುಪಿ, ಡಿ.ಬಿ.ಢಂಗ ಧಾರವಾಡ, ಸದಾನಂದ ನಾರಾವಿ ಕಾರ್ಕಳ, ಅಭಿನಂದನ್ ಎಂ ಮಂಡ್ಯ, ಲಿಂಗಸಂದ್ರ ತಿಪ್ಪೆಸ್ವಾಮಿ ತುಮಕೂರು, ಮರಿಯನ್ ಪಿಯೂಸ್ ಡಿ'ಸೋಜ ಮಂಗಳೂರು, ಆನಂದ ಜಿ ಕನಕಪುರ, ಶ್ರೀವಾಣಿ ಕಾಕುಂಜೆ, ವಿಜಯಲಕ್ಷ್ಮಿ ಪ್ರಸಾದ್ ರೈ ಕೋಣಾಜೆ, ಅದ್ವೈತ ಕೆ ಅಡ್ಯನಡ್ಕ, ಸ್ಫೂರ್ತಿ ಮೂಡುಪಡುಕೋಡಿ, ಪ್ರಹ್ಲಾದಮೂರ್ತಿ ಭಟ್ ಕಡಂದಲೆ, ಶರಣಪ್ಪ ಗದಗ, ಪಿ.ಎಸ್ ನಾರಾಯಣ ಭಟ್ ಕೊೈಲ, ಕ.ಲ.ರಘು ದೊಡ್ಡಬಳ್ಳಾಪುರ, ಎಂ.ಎಸ್. ನಾಗರಾಜು ಮೂಡಿಗೆರೆ ಇವರು ಪಾಲ್ಗೊಂಡಿದ್ದರು.

ಎಕ್ಸಲೆಂಟ್ ಪ್ರೌಢಶಾಲಾ ವಿದ್ಯಾರ್ಥಿನಿಯರಾದ ಪ್ರಕೃತಿ ಮಾರೂರು, ಮೌಲ್ಯ ವೈ ಆರ್ ಜೈನ್, ಚಂದನ, ಸಾನ್ವಿ, ಪ್ರತೀಕ್ಷಾ ಇವರು ಬಾಬಣ್ಣ ಪುತ್ತೂರು, ಜಗದೀಶ, ಜನಾರ್ದನ ಅವರ ಸಂಗೀತ ಸಂಯೋಜನೆಯಲ್ಲಿ ಕವಿಗಳ ಕವನಕ್ಕೆ ಗಾಯನ ನಡೆಸಿಕೊಟ್ಟರು.  ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಸಂಜನ್, ತುಷಾರ್, ಸಹನಾ ಕಲಾ ಶಿಕ್ಷಕ ಪ್ರವೀಣ್ ಕಕ್ಕಿಂಜೆ ಅವರ ಮಾರ್ಗದರ್ಶನದಲ್ಲಿ ಕವಿತೆಗಳಿಗೆ ಸೂಕ್ತವಾದ ವರ್ಣವಿನ್ಯಾಸ ಮಾಡಿದರು.  ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್ ಕವಿಗಳನ್ನು ಸ್ಮರಣಿಕೆ, ಗ್ರಂಥ, ಪ್ರಮಾಣ ಪತ್ರ ನೀಡಿ ಗೌರವಿಸಿದರು. ಕನ್ನಡ ವಿಭಾಗದ ರಾಮಕೃಷ್ಣ ಹೆಗಡೆ ಕಾರ್ಯಕ್ರಮ ನಿರೂಪಿಸಿ,  ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X