Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಕಲಬುರ್ಗಿ ಹತ್ಯೆ: ರಾಜ್ಯ ಸರಕಾರಕ್ಕೆ...

ಕಲಬುರ್ಗಿ ಹತ್ಯೆ: ರಾಜ್ಯ ಸರಕಾರಕ್ಕೆ ಸುಪ್ರೀಂ ತರಾಟೆ

‘ನೀವು ಏನನ್ನೂ ಮಾಡಿಲ್ಲ,ಜನರನ್ನು ಮೂರ್ಖರನ್ನಾಗಿಸುತ್ತಿದ್ದೀರಿ ಅಷ್ಟೇ’ ಎಂದ ಪೀಠ

ವಾರ್ತಾಭಾರತಿವಾರ್ತಾಭಾರತಿ26 Nov 2018 7:56 PM IST
share
ಕಲಬುರ್ಗಿ ಹತ್ಯೆ: ರಾಜ್ಯ ಸರಕಾರಕ್ಕೆ ಸುಪ್ರೀಂ ತರಾಟೆ

ಹೊಸದಿಲ್ಲಿ,ನ.26: ವಿಚಾರವಾದಿ ಪ್ರೊ.ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ತನಿಖೆಯಲ್ಲಿ ‘‘ನಿಷ್ಕ್ರಿಯತೆಗಾಗಿ ಮತ್ತು ಕೇವಲ ಜನರನ್ನು ಮೂರ್ಖರನ್ನಾಗಿಸುತ್ತಿರುವುದಕ್ಕಾಗಿ’’ ಕರ್ನಾಟಕ ಸರಕಾರವನ್ನು ಸರ್ವೋಚ್ಚ ನ್ಯಾಯಾಲಯವು ಸೋಮವಾರ ತೀವ್ರ ತರಾಟೆಗೆತ್ತಿಕೊಂಡಿತು.

 ಪ್ರಕರಣದಲ್ಲಿ ಈವರೆಗಿನ ತನಿಖೆಯ ಕುರಿತು ಸ್ಥಿತಿಗತಿ ವರದಿಯನ್ನು ಎರಡು ವಾರಗಳಲ್ಲಿ ತನಗೆ ಸಲ್ಲಿಸುವಂತೆ ಕರ್ನಾಟಕ ಸರಕಾರಕ್ಕೆ ನಿರ್ದೇಶ ನೀಡಿದ ನ್ಯಾಯಮೂರ್ತಿಗಳಾದ ಆರ್.ಎಫ್.ನಾರಿಮನ್ ಮತ್ತು ನವೀನ್ ಸಿನ್ಹಾ ಅವರ ಪೀಠವು, ವರದಿಯನ್ನು ಪರಿಶೀಲಿಸಿದ ಬಳಿಕ ತನಿಖೆಯ ಮೇಲೆ ನಿಗಾಯಿರಿಸಲು ತಾನು ಪ್ರಕರಣವನ್ನು ಬಾಂಬೆ ಉಚ್ಚ ನ್ಯಾಯಾಲಯಕ್ಕ್ಕೆ ವರ್ಗಾಯಿಸಬಹುದು ಎಂಬ ಸುಳಿವನ್ನೂ ನೀಡಿತು.

“ಈವರೆಗೆ ನೀವು(ಕರ್ನಾಟಕ ಸರಕಾರ) ಏನು ಮಾಡಿದ್ದೀರಿ?, ಏನೂ ಇಲ್ಲ. ನೀವು ಜನರನ್ನು ಮೂರ್ಖರನ್ನಾಗಿಸುತ್ತಿದ್ದೀರಿ ಅಷ್ಟೇ. ತನಿಖೆಯನ್ನು ಪೂರ್ಣಗೊಳಿಸಲು ನಿಮಗೆ ಇನ್ನೂ ಎಷ್ಟು ಸಮಯ ಬೇಕು?, ಅದನ್ನು ನಮಗೆ ತಿಳಿಸಿ,ಇಲ್ಲದಿದ್ದರೆ ನಾವು ಆದೇಶಗಳನ್ನು ಹೊರಡಿಸುತ್ತೇವೆ ಎಂದು ಪೀಠವು ಹೇಳಿತು.

ತನಿಖೆಯನ್ನು ಪೂರ್ಣಗೊಳಿಸಲು ಅಗತ್ಯ ಕಾಲಾವಧಿಯ ಬಗ್ಗೆ ತಾನು ಸೂಚನೆಗಳನ್ನು ಪಡೆದುಕೊಳ್ಳಬೇಕಾಗುತ್ತದೆ ಎಂದು ಕರ್ನಾಟಕ ಸರಕಾರದ ಪರ ವಕೀಲ ದೇವದತ್ತ ಕಾಮತ್ ತಿಳಿಸಿದಾಗ,ನೀವು ಸೂಚನೆಯನ್ನು ಪಡೆದುಕೊಳ್ಳಿ. ಆಗ ನಾವು ಇಂತಹುದೇ ವಿಷಯವು ಬಾಕಿಯುಳಿದಿರುವ ಬಾಂಬೆ ಉಚ್ಚ ನ್ಯಾಯಾಲಯಕ್ಕೆ ಈ ವಿಷಯವನ್ನೂ ಒಪ್ಪಿಸುತ್ತೇವೆ. ನೀವು ಏನನ್ನೂ ಮಾಡುತ್ತಿಲ್ಲ ಎಂದು ಪೀಠವು ಕಿಡಿಕಾರಿತು.

ಹತ್ಯೆ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ(ಸಿಟ್)ದಿಂದ ತನಿಖೆಯನ್ನು ಕೋರಿ ದಿ.ಕಲಬುರ್ಗಿ ಅವರ ಪತ್ನಿ ಉಮಾದೇವಿ ಕಲಬುರ್ಗಿ ಸಲ್ಲಿಸಿರುವ ಅರ್ಜಿಯ ವಿಚಾರಣೆೆಯನ್ನು ನ್ಯಾಯಾಲಯವು ನಡೆಸುತ್ತಿದೆ.

ಕಲಬುರ್ಗಿ ಪರ ವಕೀಲರು,ಇನ್ನಷ್ಟು ಉಸ್ತುವಾರಿಗಾಗಿ ಪ್ರಕರಣವನ್ನು ಬಾಂಬೆ ಉಚ್ಚ ನ್ಯಾಯಾಲಯಕ್ಕೆ ವರ್ಗಾಯಿಸುವುದು ಒಳ್ಳೆಯದು ಎಂದು ಪೀಠಕ್ಕೆ ತಿಳಿಸಿದರು.

ಕಲಬುರ್ಗಿಯವರ ಹತ್ಯೆಯು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಕಾಯ್ದೆಯ ವ್ಯಾಪ್ತಿಗೆ ಬರುವುದಿಲ್ಲ,ಹೀಗಾಗಿ ರಾಷ್ಟ್ರೀಯ ಮತ್ತು ಅಂತರರಾಜ್ಯ ಭಯೋತ್ಪಾದನೆ ಪ್ರಕರಣಗಳ ತನಿಖೆ ನಡೆಸುವ ವಿಶೇಷ ಏಜೆನ್ಸಿಯಾಗಿರುವ ಎನ್‌ಐಎ ಈ ಪ್ರಕರಣದ ತನಿಖೆಯನ್ನು ನಡೆಸುವಂತಿಲ್ಲ ಎಂದು ಕೇಂದ್ರವು ಕಳೆದ ಮಾ.23ರಂದು ಸರ್ವೋಚ್ಚ ನ್ಯಾಯಾಲಯಕ್ಕ ತಿಳಿಸಿತ್ತು.

ಹಂಪಿ ವಿವಿಯ ಮಾಜಿ ಕುಲಪತಿಯಯಾಗಿದ್ದ 77ರ ಹರೆಯದ ಕಲಬುರ್ಗಿಯವರನ್ನು 2015,ಆ.30ರಂದು ಹಾಡಹಗಲೇ ಧಾರವಾಡದ ಕಲ್ಯಾಣ ನಗರದಲ್ಲಿಯ ಅವರ ನಿವಾಸದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X