Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಬೆಂಗಳೂರು: ರಾಮೋಹಳ್ಳಿ ಪಂಚಾಯತ್ ಜನರಿಗೆ...

ಬೆಂಗಳೂರು: ರಾಮೋಹಳ್ಳಿ ಪಂಚಾಯತ್ ಜನರಿಗೆ ಹಕ್ಕುಪತ್ರ ವಿತರಣೆ

ವಾರ್ತಾಭಾರತಿವಾರ್ತಾಭಾರತಿ26 Nov 2018 8:24 PM IST
share

ಬೆಂಗಳೂರು, ನ.26: ಸರಕಾರಿ ಜಮೀನಿನಲ್ಲಿ ಮನೆ ನಿರ್ಮಿಸಿಕೊಂಡು ಅಕ್ರಮ-ಸಕ್ರಮದ ಅಡಿಯಲ್ಲಿ ಹಕ್ಕುಪತ್ರಗಳಿಗಾಗಿ ಕಾಯುತ್ತಿದ್ದ ರಾಮೋಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಜನರಿಗೆ ಕೊನೆಗೂ ಹಕ್ಕುಪತ್ರ ದೊರಕಿದ್ದು, ಗ್ರಾಮದ ಜನರ ಮೊಗದಲ್ಲಿ ಸಂತಸ ಮೂಡಿಸಿದೆ. 

ಇಲ್ಲಿನ ಗ್ರಾಮದ ಬಯಲು ರಂಗಮಂದಿರ ಆವರಣದಲ್ಲಿ ನಡೆದ ಪಂಚಾಯ್ತಿ ಕಟ್ಟೆ ಕಾರ್ಯಕ್ರಮದಲ್ಲಿ ಶಾಸಕ ಎಸ್.ಟಿ.ಸೊಮಶೇಖರ್ ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ ಮಾಡಿದರು. ರಾಮೋಹಳ್ಳಿ ಗ್ರಾಮ ಪಂಚಾಯತ್ ವ್ಯಾಪ್ತಿಯ 17 ಫಲಾನುಭವಿಗಳು ನಿರ್ಮಿಸಿಕೊಂಡಿರುವ ಮನೆ ಹಾಗೂ ಜಾಗಕ್ಕೆ ಹಕ್ಕುಪತ್ರ ಸಿದ್ಧಗೊಂಡಿದ್ದು, ಉಳಿದವರಿಗೆ ಪಂಚಾಯತ್ ಕಚೇರಿಯಲ್ಲಿಯೇ ವಿತರಣೆ ಮಾಡಲಾಗುತ್ತದೆ ಎಂದು ಶಾಸಕ ಭರವಸೆ ನೀಡಿದರು.

ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 200 ಮಂದಿ ಅಕ್ರಮ-ಸಕ್ರಮ ಯೋಜನೆ ಅಡಿಯಲ್ಲಿ ಹಕ್ಕುಪತ್ರಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಹಸಿರು ವಲಯದಲ್ಲಿರುವ ಸರಕಾರಿ ಜಮೀನಿನಲ್ಲಿ ಮನೆ ಕಟ್ಟಿಕೊಂಡವರಿಗೆ ಕಾನೂನಿನ ಅನ್ವಯ ಹಕ್ಕುಪತ್ರ ವಿತರಣೆ ಸಾಧ್ಯವಿಲ್ಲ. ಹೀಗಾಗಿ ಹಕ್ಕುಪತ್ರ ನೀಡಲು ಕಷ್ಟವಾಗುತ್ತಿದೆ. ಹಳದಿ ವಲಯದಲ್ಲಿ ಇದ್ದರೆ ಎಲ್ಲರಿಗೂ ಶೀಘ್ರದಲ್ಲಿಯೇ ಹಕ್ಕುಪತ್ರ ಸಿಗುತ್ತಿತ್ತು. ಸರಕಾರದ ಮಟ್ಟದಲ್ಲಿ ಹಸಿರು ವಲಯವನ್ನು ಹಳದಿ ವಲಯವನ್ನಾಗಿ ಮಾರ್ಪಡಿಸಿ ಹಕ್ಕುಪತ್ರ ನೀಡಲಾಗುತ್ತದೆ. ಅಲ್ಲದೆ, ಕಾನೂನು ಅಡಿಯಲ್ಲಿ ಹಕ್ಕುಪತ್ರ ನೀಡಲು ಕ್ರಮ ವಹಿಸಲಾಗುತ್ತಿದೆ ಎಂದು ಅವರು ತಿಳಿಸಿದರು.

ಬಿಬಿಎಂಪಿಗೆ ಸೇರಿಸಲು ಚಿಂತನೆ: ಈಗಿರುವ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯನ್ನು 5 ವಿಭಾಗಗಳಲ್ಲಿ ವಿಭಜಿಸುವ ಪ್ರಸ್ತಾವನೆ ಸರಕಾರದ ಮಟ್ಟದಲ್ಲಿದೆ. ಅದು ಕಾರ್ಯರೂಪಕ್ಕೆ ಬಂದರೆ ರಾಮೋಹಳ್ಳಿ, ಕುಂಬಳಗೂಡು ಸೇರಿ ಯಶವಂತಪುರ ಕ್ಷೇತ್ರ ವ್ಯಾಪ್ತಿಯ ಹಲವು ಪಂಚಾಯತ್ ಗಳನ್ನು ಬಿಬಿಎಂಪಿ ವ್ಯಾಪ್ತಿಗೆ ಸೇರಿಸಲಾಗುವುದು ಎಂದು ಶಾಸಕ ಸೊಮಶೇಖರ್ ಇದೇ ವೇಳೆ ಮಾಹಿತಿ ನೀಡಿದರು.

ಪಂಚಾಯತ್ ವ್ಯಾಪ್ತಿಯ ಗ್ರಾಮಗಳನ್ನು ಬಿಬಿಎಂಪಿ ವಾರ್ಡ್‌ಗಳಂತೆ ಅಭಿವೃದ್ಧಿಪಡಿಸಲು ಹೆಚ್ಚಿನ ಅನುದಾನದ ಅವಶ್ಯಕತೆ ಇದೆ. ಬಿಬಿಎಂಪಿ ವ್ಯಾಪ್ತಿಗೆ ಸೇರಿದರೆ ಅಭಿವೃದ್ಧಿ ಕೆಲಸಗಳಿಗೆ ವೇಗ ದೊರೆಯುತ್ತದೆ. ಪ್ರಸ್ತುತ ರಾಮೋಹಳ್ಳಿ ಮತ್ತೆರಡು ಪಂಚಾಯತ್ ಗಳನ್ನು ಪಟ್ಟಣ ಪಂಚಾಯತ್ ಗಳಾಗಿ ರೂಪಿಸುವ ಚಿಂತನೆ ಇದ್ದು, ಶೀಘ್ರದಲ್ಲೆ ಕಾರ್ಯರೂಪಕ್ಕೆ ತರಲಾಗುತ್ತದೆ. ರಸ್ತೆ ವಿಸ್ತರಣೆ, ಸರಕಾರಿ ಆಸ್ಪತ್ರೆ, ಶಾಲೆಗಳನ್ನು ಅಭಿವೃದ್ಧಿಪಡಿಸುವುದು, ಕೆರೆಗಳ ಅಭಿವೃದ್ಧಿ ಸೇರಿ ಪ್ರಮುಖ ಸಮಸ್ಯೆಗಳ ಪರಿಹಾರಕ್ಕೆ ರೂಪುರೇಷೆ ಸಿದ್ಧಪಡಿಸಲಾಗಿದೆ. ತುರ್ತು ಕೆಲಸಗಳನ್ನು ಶೀಘ್ರದಲ್ಲೆ ಮುಗಿಸಲಾಗುವುದು. ಕೆಲ ಸಮಸ್ಯೆಗಳನ್ನು ಕಾಲಮಿತಿಯೊಳಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಅವರು ನುಡಿದರು.

ಬಿಡಿಎ ವತಿಯಿಂದ ಅಭಿವೃದ್ಧಿ: ರೈತರಿಂದ ನಿವೇಶನಕ್ಕಾಗಿ ಬಿಡಿಎ ಜಮಿನು ವಶಪಡಿಸಿಕೊಳ್ಳುವ ವೇಳೆ ಗ್ರಾಮದ ಅಭಿವೃದ್ಧಿ ಮಾಡುವ ಬಗ್ಗೆ ನೀಡಿರುವ ಭರವಸೆಯನ್ನು ಈಡೇರಿಸಲಿದೆ ಎಂದು ಬಿಡಿಎ ಇಂಜಿನಿಯರ್ ಚೇತನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X