Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಅಯೋಧ್ಯೆ ಕುರಿತು ಪ್ರಧಾನಿ ಟೀಕೆಗಳು...

ಅಯೋಧ್ಯೆ ಕುರಿತು ಪ್ರಧಾನಿ ಟೀಕೆಗಳು ಸುಪ್ರೀಂ ಕೋರ್ಟ್‌ಗೆ ಮಾನಹಾನಿಕರ: ಕಪಿಲ್ ಸಿಬಲ್

ವಾರ್ತಾಭಾರತಿವಾರ್ತಾಭಾರತಿ26 Nov 2018 9:18 PM IST
share
ಅಯೋಧ್ಯೆ ಕುರಿತು ಪ್ರಧಾನಿ ಟೀಕೆಗಳು ಸುಪ್ರೀಂ ಕೋರ್ಟ್‌ಗೆ ಮಾನಹಾನಿಕರ: ಕಪಿಲ್ ಸಿಬಲ್

 ಹೊಸದಿಲ್ಲಿ,ನ.26: ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆ ಕುರಿತು ಮಾಡಿರುವ ಟೀಕೆಗಳು ಲಜ್ಜೆಗೇಡಿತನದ್ದಾಗಿದ್ದು, ಸರ್ವೋಚ್ಚ ನ್ಯಾಯಾಲಯದ ಪಾಲಿಗೆ ಮಾನಹಾನಿಕರವಾಗಿವೆ ಎಂದು ಹಿರಿಯ ವಕೀಲ ಹಾಗೂ ಕಾಂಗ್ರೆಸ್ ನಾಯಕ ಕಪಿಲ್ ಸಿಬಲ್ ಅವರು ಸೋಮವಾರ ಹೇಳಿದರು.

ಸಿಬಲ್ ಅವರು ಕಳೆದ ವರ್ಷ ಅಯೋಧ್ಯೆ ಪ್ರಕರಣದ ವಿಚಾರಣೆಯನ್ನು 2019ರ ಸಾರ್ವತ್ರಿಕ ಚುನಾವಣೆಗಳು ಪೂರ್ಣಗೊಳ್ಳುವವರೆಗೆ ಮುಂದೂಡಬೇಕೆಂದು ಕೋರಿ ಸರ್ವೋಚ್ಚ ನ್ಯಾಯಾಲಯಲ್ಲಿ ಅರ್ಜಿ ಸಲ್ಲಿಸಿದ್ದ ಮುಹಮ್ಮದ್ ಹಾಷಿಂ ಪರ ವಕೀಲರಾಗಿದ್ದರು.

 ರವಿವಾರ ರಾಜಸ್ಥಾನದ ಆಲ್ವಾರ್‌ನಲ್ಲಿ ಬಹಿರಂಗ ಸಭೆಯಲ್ಲಿ ಮಾತನಾಡಿದ್ದ ಮೋದಿ ಅವರು,ಕಾಂಗ್ರೆಸ್ ಪಕ್ಷವು ನ್ಯಾಯಾಂಗಕ್ಕೆ ಭೀತಿಯ ವಾತಾವರಣವನ್ನು ಸೃಷ್ಟಿಸುತ್ತದೆ. 2019ರ ಚುನಾವಣೆಗಳ ಹಿನ್ನೆಲೆಯಲ್ಲಿ ಅಯೋಧ್ಯೆ ವಿಚಾರಣೆಯನ್ನು ವಿಳಂಬಗೊಳಿಸುವಂತೆ ಅದು ಸರ್ವೋಚ್ಚ ನ್ಯಾಯಾಲಯಕ್ಕೆ ಹೇಳುತ್ತದೆ. ಅದು ಭಾರತದ ಮುಖ್ಯ ನ್ಯಾಯಾಧೀಶರನ್ನು ಮಹಾಭಿಯೋಗಕ್ಕೊಳಪಡಿಸಲು ಸಾಧ್ಯವಿರುವ ಎಲ್ಲ ಪ್ರಯತ್ನಗಳನ್ನೂ ಮಾಡುತ್ತದೆ ಎಂದು ಹೇಳಿದ್ದರು. ನಂತರ ತನ್ನ ಹೇಳಿಕೆಗೆ ಪೂರಕವಾಗಿ ಟ್ವೀಟಿಸಿದ್ದ ಅವರು,ವಕೀಲರನ್ನು ರಾಜ್ಯಸಭೆಗೆ ಸದಸ್ಯರನ್ನಾಗಿ ಕಳುಹಿಸಿ ಪ್ರಮುಖ ಮಸೂದೆಗಳಿಗೆ ಅವರು ತಡೆಯೊಡ್ಡುವಂತೆ ಮಾಡುವುದು ಮತ್ತು ನ್ಯಾಯಾಲಯದ ತೀರ್ಪು ತಮ್ಮ ಪರವಾಗಿ ಬರುವಂತೆ ಒತ್ತಡ ಹೇರುವುದು. ನ್ಯಾಯಾಧೀಶರು ಅವರು ಬಯಸಿದ ತೀರ್ಪು ನೀಡದಿದ್ದರೆ ಅವರಿಗೆ ಮಹಾಭಿಯೋಗದ ಬೆದರಿಕೆಯೊಡ್ಡುವುದು...ಇದು ಕಾಂಗ್ರೆಸ್‌ನ ಹೊಸ ತಂತ್ರವಾಗಿದೆ ಎಂದು ಹೇಳಿದ್ದರು.

ಪ್ರಧಾನಿಯವರು ಸರ್ವೋಚ್ಚ ನ್ಯಾಯಾಲಯದ ಮಾನಹಾನಿಯನ್ನುಂಟು ಮಾಡುತ್ತಿದ್ದಾರೆ. ಸರ್ವೋಚ್ಚ ನ್ಯಾಯಾಲಯವು ರಾಜಕೀಯ ಒತ್ತಡಗಳಿಗೆ ಮಣಿಯುತ್ತದೆ ಎಂದು ಹೇಳಲು ಅವರು ಪ್ರಯತ್ನಿಸುತ್ತಿದ್ದಾರೆಯೇ?, ಇದು ನಾಚಿಕೆಗೇಡಿನದಾಗಿದೆ. ಪ್ರಧಾನಿಯವರು ಇಂತಹ ಹೇಳಿಕೆಗಳನ್ನು ನೀಡಬಾರದು ಎಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಬಲ್ ಹೇಳಿದರು.

ಯಾರು ಭೀತಿಯ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ?, ವಿಹಿಂಪ ಅಯೋಧ್ಯೆಯಲ್ಲಿ ಏನು ಮಾಡುತ್ತಿದೆ?, ಅವರು ಮೋದಿಯವರಿಗೆ ರಾಜಕೀಯ ಲಾಭಗಳನ್ನು ಒದಗಿಸುತ್ತಿರುವ ಭೀತಿಯ ವಾತಾವರಣವನ್ನು ಸೃಷ್ಟಿಸುತ್ತಿದ್ದಾರೆ ಎಂದ ಸಿಬಲ್,ಪ್ರಧಾನಿಯವರಿಗೆ ವಾಸ್ತವಾಂಶಗಳು ಗೊತ್ತಿಲ್ಲ. ಕಾಂಗ್ರೆಸ್ ದಾವೆಯ ಭಾಗವಾಗಿಲ್ಲ ಮತ್ತು 2018,ಜನವರಿಯಿಂದ ಅಯೋಧ್ಯೆ ಪ್ರಕರಣದಲ್ಲಿ ನ್ಯಾಯಾಲಯದಲ್ಲಿ ಹಾಜರಾಗುವುದನ್ನು ತಾನು ನಿಲ್ಲಿಸಿದ್ದೇನೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X