Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಟಿ ಅಧಿಕಾರಿಗಳ ಭ್ರಷ್ಟಾಚಾರ ಪ್ರಕರಣಕ್ಕೆ...

ಐಟಿ ಅಧಿಕಾರಿಗಳ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ ನೀಡಲು ಸಿಬಿಐ ಹಂಗಾಮಿ ನಿರ್ದೇಶಕರ ನಿರಾಕರಣೆ

ವಾರ್ತಾಭಾರತಿವಾರ್ತಾಭಾರತಿ26 Nov 2018 11:58 PM IST
share
ಐಟಿ ಅಧಿಕಾರಿಗಳ ಭ್ರಷ್ಟಾಚಾರ ಪ್ರಕರಣಕ್ಕೆ ಮರುಜೀವ ನೀಡಲು ಸಿಬಿಐ ಹಂಗಾಮಿ ನಿರ್ದೇಶಕರ ನಿರಾಕರಣೆ

 ಹೊಸದಿಲ್ಲಿ,ನ.26: ಆದಾಯ ತೆರಿಗೆ ಅಧಿಕಾರಿಗಳು ಮತ್ತು ಓರ್ವ ಮಧ್ಯವರ್ತಿಯ ವಿರುದ್ಧದ ಭ್ರಷ್ಟಾಚಾರ ಆರೋಪಗಳ ಪ್ರಕರಣಕ್ಕೆ ಮರುಜೀವ ನೀಡುವಂತೆ ಆಗಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾ ಅವರ ಮೌಖಿಕ ಪ್ರಸ್ತಾವವನ್ನು ಸಿಬಿಐನ ಹಂಗಾಮಿ ನಿರ್ದೇಶಕ ಎಂ.ನಾಗೇಶ್ವರ ರಾವ್ ಅವರು ತಿರಸ್ಕರಿಸಿದ್ದಾರೆ. ಇದೊಂದು ನೀತಿ ನಿರ್ಧಾರವಾಗಿದೆ ಮತ್ತು ಸರ್ವೋಚ್ಚ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ತಾನಿದನ್ನು ಕೈಗೊಳ್ಳುವಂತಿಲ್ಲ ಎಂದು ಅವರು ಕಾರಣವನ್ನು ನೀಡಿದ್ದಾರೆ.

2016ರಲ್ಲಿ ಸಿಬಿಐ ಒಂಭತ್ತು ಹಿರಿಯ ಆದಾಯ ತೆರಿಗೆ ಅಧಿಕಾರಿಗಳು ಮತ್ತು ಚಾರ್ಟರ್ಡ್ ಅಕೌಂಟಂಟ್ ಸಂಜಯ ಭಂಡಾರಿ ಸೇರಿದಂತೆ ಮೂವರು ಖಾಸಗಿ ವ್ಯಕ್ತಿಗಳ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ದಾಖಲಿಸಿಕೊಂಡಿತ್ತು.

ಈ ಪ್ರಕರಣವು ಸಿಬಿಐ 2015,ಜನವರಿಯಲ್ಲಿ ಭಂಡಾರಿಯೊಂದಿಗೆ ಓರ್ವ ಐಟಿ ಅಧಿಕಾರಿಯ ವಿರುದ್ಧ ದಾಖಲಿಸಿದ್ದ ಪ್ರಕರಣದಿಂದ ಹುಟ್ಟಿಕೊಂಡಿತ್ತು. ಆ ಪ್ರಕರಣದಲ್ಲಿ ಲೆಕ್ಕಪರಿಶೋಧಕ ಸಂಸ್ಥೆ ಎಸ್.ಎಚ್.ಭಂಡಾರಿ ಆ್ಯಂಡ್ ಕಂಪನಿಯ ಶ್ರೇಯಾಂಸ್ ಭಂಡಾರಿಯಿಂದ ಲಂಚ ಸ್ವೀಕರಿಸುತ್ತಿದ್ದಾಗ ಐಟಿ ಅಧಿಕಾರಿಯನ್ನು ಬಂಧಿಸಲಾಗಿತ್ತು.

2018,ಮಾರ್ಚ್ 13ರಂದು ಆಗಿನ ಸಿಬಿಐ ನಿರ್ದೇಶಕ ಅಲೋಕ್ ವರ್ಮಾರ ಸೂಚನೆಗಳ ಮೇರೆಗೆ ಪ್ರಕರಣವನ್ನು ಸಮಾಪ್ತಿಗೊಳಿಸಲಾಗಿತ್ತು ಮತ್ತು ಇದನ್ನು ಹೆಚ್ಚುವರಿ ನಿರ್ದೇಶಕ(ಪ್ರಭಾರ) ಪ್ರವೀಣ ಸಿನ್ಹಾ ಅವರು ಪ್ರಕರಣದ ಕಡತದಲ್ಲಿ ದಾಖಲಿಸಿದ್ದರು.

ಬಳಿಕ ಸಿಬಿಐ ಕಟ್ಟಡವನ್ನು ಉದ್ಘಾಟಿಸಲು ಮದುರೈಗೆ ಭೇಟಿ ನೀಡಿದ್ದ ಸಂದರ್ಭ ವರ್ಮಾ ಅವರು ಪ್ರಕರಣಕ್ಕೆ ಮರುಜೀವ ನೀಡುವಂತೆ ವೌಖಿಕವಾಗಿ ಸೂಚಿಸಿದ್ದರು. ಚೆನ್ನೈ ಸಿಬಿಐ ಘಟಕವು ಈಗ ಈ ಸಂಬಂಧ ಆದೇಶವನ್ನು ಕೋರಿತ್ತು.

 ಸಿಬಿಐನ ಆಂತರಿಕ ಕಚ್ಚಾಟದ ಹಿನ್ನೆಲೆಯಲ್ಲಿ ವಿಶೇಷ ನಿರ್ದೇಶಕ ರಾಕೇಶ ಅಸ್ತಾನಾರೊಂದಿಗೆ ಕಡ್ಡಾಯ ರಜೆಯಲ್ಲಿ ಕಳುಹಿಸಲ್ಪಟ್ಟಿರುವ ವರ್ಮಾ ಅವರ ಅರ್ಜಿಯ ವಿಚಾರಣೆಯನ್ನು ಸರ್ವೋಚ್ಚ ನ್ಯಾಯಾಲಯವು ಅ.2ರಂದು ನಡೆಸಿದ್ದ ಸಂದರ್ಭ ವರ್ಮಾ ಅವರ ಕೆಲಸಗಳನ್ನು ನೋಡಿಕೊಳ್ಳಲು ಹಂಗಾಮಿ ನಿರ್ದೇಶಕರಾಗಿ ನೇಮಕಗೊಂಡಿದ್ದ ಐಪಿಎಸ್ ಅಧಿಕಾರಿ ರಾವ್ ಅವರು ಯಾವುದೇ ನೀತಿ ನಿರ್ಧಾರ ಅಥವಾ ಪ್ರಮುಖ ನಿರ್ಧಾರವನ್ನು ಕೈಗೊಳ್ಳುವುದನ್ನು ು ನಿಷೇಧಿಸಿತ್ತು.

ವರ್ಮಾ ಅವರ ಪ್ರಸ್ತಾಕ್ಕೆ ಒಪ್ಪಿಗೆ ನೀಡುವುದು ನೀತಿ ನಿರ್ಧಾರಕ್ಕೆ ಸಮನಾಗುತ್ತದೆ ಮತ್ತು ಇದು ಸರ್ವೋಚ್ಚ ನ್ಯಾಯಾಲಯದ ನಿರ್ದೇಶಕ್ಕೆ ವಿರುದ್ಧವಾಗುತ್ತದೆ. ಆದ್ದರಿಂದ ಪ್ರಕರಣಕ್ಕೆ ಮರುಜೀವ ನೀಡುವಂತೆ ಕೋರಿಕೆಯನ್ನು ರಾವ್ ತಿರಸ್ಕರಿಸಿದ್ದಾರೆ ಎಂದು ಸಿಬಿಐ ವಕ್ತಾರರು ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X