Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಭಾರತದ್ದು ವಿವಿಧತೆ ಹೊಂದಿರುವ ಶ್ರೇಷ್ಠ...

ಭಾರತದ್ದು ವಿವಿಧತೆ ಹೊಂದಿರುವ ಶ್ರೇಷ್ಠ ಸಂವಿಧಾನ : ನ್ಯಾ. ಅಶೋಕ್ ಹಿಂಚ್‍ಗಿರಿ

ವಾರ್ತಾಭಾರತಿವಾರ್ತಾಭಾರತಿ27 Nov 2018 12:16 AM IST
share
ಭಾರತದ್ದು ವಿವಿಧತೆ ಹೊಂದಿರುವ ಶ್ರೇಷ್ಠ ಸಂವಿಧಾನ : ನ್ಯಾ. ಅಶೋಕ್ ಹಿಂಚ್‍ಗಿರಿ

ಪುತ್ತೂರು : ಭಾರತದ ಸಂವಿಧಾನವು ಅತೀ ಹೆಚ್ಚಿನ ವಿವಿಧತೆಯನ್ನು ಹೊಂದಿರುವ ಜನರನ್ನು ನಿರ್ವಹಿಸುವ ಅತೀ ಶ್ರೇಷ್ಠ ಸಂವಿಧಾನವಾಗಿದೆ. ಈ ಹಿನ್ನಲೆಯಲ್ಲಿ ಸಂವಿಧಾನ ದಿನವನ್ನು ಆಚರಿಸುವುದು ಹೆಮ್ಮೆಯ ವಿಷಯ ಎಂದು ರಾಜ್ಯ ಹೈಕೋರ್ಟಿನ ನಿವೃತ್ತ ನ್ಯಾಯಾಧೀಶ ಅಶೋಕ್ ಹಿಂಚ್‍ಗಿರಿ ಅವರು ಹೇಳಿದರು.

ವಿವೇಕಾನಂದ ವಿದ್ಯಾವರ್ಧಕ ಸಂಘದ ವತಿಯಿಂದ ವಿವೇಕಾನಂದ ಕಾನೂನು ಕಾಲೇಜಿನಲ್ಲಿ ಸೋಮವಾರ ನಡೆದ ನೂತನ ಅಣಕು ನ್ಯಾಯಾಲಯ ಕಟ್ಟಡದ ಉದ್ಘಾಟನೆ, ಸಂವಿಧಾನ ದಿನಾಚರಣೆ ಮತ್ತು ಬೆನಗಲ್ ನರಸಿಂಗ ರಾವ್ ಅವರ ಭಾವಚಿತ್ರ ಅನಾವರಣ ಕಾರ್ಯಕ್ರಮವನ್ನು ಅವರು ಉದ್ಘಾಟಿಸಿ ಮಾತನಾಡಿದರು. 

ಬೆನಗಲ್ ನರಸಿಂಗ್ ರಾವ್ ಅವರು ಸಂವಿಧಾನ ನಿರ್ಮಾಣ ಕಾರ್ಯದಲ್ಲಿ ತಮ್ಮ ಮಹತ್ವಪೂರ್ಣ ಸೇವೆಯನ್ನು ನೀಡಿದ್ದು, ಸಂವಿಧಾನಕ್ಕೆ ಅವರ ಕೊಡುಗೆಗಳು ಅಪಾರ ಎಂದು ಅವರು ಹೇಳಿದರು. 

ಅಣಕು ನ್ಯಾಯಾಲಯ ಕಟ್ಟಡ ಉದ್ಘಾಟಿಸಿ, ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಪ್ರಭಾಕರ್ ಭಟ್ ಕಲ್ಲಡ್ಕ ಅವರು ಮಾತನಾಡಿ, ವಿವಿಧತೆಯಲ್ಲಿ ಏಕತೆ ಎಂಬುದು ಭಾರತೀಯರಲ್ಲಿ ರಕ್ತಗತವಾಗಿದೆ. ಆದ್ದರಿಂದಲೇ ಭಾರತೀಯ ಸಂವಿಧಾನವು ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಬೆನಗಲ್ ನರಸಿಂಗ್ ರಾವ್ ಅವರಂತಹ ವ್ಯಕ್ತಿಗಳನ್ನು ನೆನಪಿಸಿಕೊಳ್ಳುವುದು ಒಳ್ಳೆಯ ವಿಚಾರ ಎಂದರು.   

ಮುಖ್ಯ ಅತಿಥಿಯಾಗಿದ್ದ ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾದ ನಿವೃತ್ತ ಕುಲಸಚಿವ ಪ್ರೊ. ವಿ. ಎಸ್. ಮಲ್ಲಾರ್ ಅವರು ಸಂವಿಧಾನ ದಿನದ ಮಹತ್ವ ಮತ್ತು ಪ್ರಸ್ತುತ ದಿನಗಳಲ್ಲಿ ನಡೆಯುತ್ತಿರುವ ಕಾನೂನು ವಿಚಾರಗಳ ಕುರಿತು ಮಾತನಾಡಿದರು.

ಕಾನೂನು ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಗಣೇಶ್ ಜೋಷಿ ಬಿ., ಮತ್ತು ಸಂಚಾಲಕ ವಿಜಯನಾರಾಯಣ ಕೆ.ಎಂ ಉಪಸ್ಥಿತರಿದ್ದರು. ಕಾನೂನು ಅಧ್ಯಯನ ವಿಭಾಗದ ನಿರ್ದೇಶಕ ಡಾ. ಬಿ. ಕೆ. ರವಿಂದ್ರ ಸ್ವಾಗತಿಸಿದರು. ಪ್ರಾಂಶುಪಾಲ ರಾಜೆಂದ್ರ ಪ್ರಸಾದ್.ಎ ವಂದಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X