ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಅಸ್ತು
![ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಅಸ್ತು ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಅಸ್ತು](https://www.varthabharati.in/sites/default/files/images/articles/2018/11/27/165202.jpg)
ಹೊಸದಿಲ್ಲಿ, ನ.27: ರಾಜ್ಯದ ಮಹತ್ವಾಂಕಾಕ್ಷಿ ನೀರಾವರಿ ಯೋಜನೆಯಾಗಿರುವ ಮೇಕೆದಾಟು ಯೋಜನೆಗೆ ಕೇಂದ್ರ ಸರಕಾರ ಒಪ್ಪಿಗೆ ನೀಡಿದೆ.
ಈ ಯೋಜನೆಯನ್ನು ವಿರೋಧಿಸಿದ್ದ ತಮಿಳುನಾಡಿಗೆ ಇದೀಗ ಹಿನ್ನಡೆಯಾಗಿದೆ. ಈ ಯೋಜನೆಗೆ ಒಪ್ಪಿಗೆ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮಿಳುನಾಡಿನ ಮುಖ್ಯ ಮಂತ್ರಿ ಪಳನಿಸ್ವಾಮಿ ಪತ್ರ ಬರೆದಿದ್ದರು.
ಈ ಯೋಜನೆಯ ಬಗ್ಗೆ ಸಮಗ್ರ ವರದಿ ನೀಡುವಂತೆ ಕೇಂದ್ರ ಜಲಸಂಪನ್ಮೂಲ ಇಲಾಖೆ ರಾಜ್ಯ ಸರಕಾರಕ್ಕೆ ನಿರ್ದೇಶನ ನೀಡಿದೆ.
ಮೇಕೆದಾಟು ಪರಿಸರದಲ್ಲಿ ಜಲಾಶಯ ನಿರ್ಮಾಣ ಮಾಡಿ, ಅಂದಾಜು 30-35 ಟಿಎಂಸಿ ಹೆಚ್ಚುವರಿ ನೀರನ್ನು ಸಂಗ್ರಹಿಸುವುದು ಮತ್ತು ಬೃಹತ್ ಪ್ರಮಾಣದ ವಿದ್ಯುತ್ ಉತ್ಪಾದನೆಗೆ ರಾಜ್ಯ ಸರಕಾರ ಯೋಜನೆ ಹಾಕಿಕೊಂಡಿದೆ.
Next Story