Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ರಾಜ್ಯ ಮಟ್ಟದ ಸ್ಪೆಶಲ್...

ಮಂಗಳೂರು: ರಾಜ್ಯ ಮಟ್ಟದ ಸ್ಪೆಶಲ್ ಒಲಿಂಪಿಕ್ಸ್‌ಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Nov 2018 3:04 PM IST
share
ಮಂಗಳೂರು: ರಾಜ್ಯ ಮಟ್ಟದ ಸ್ಪೆಶಲ್ ಒಲಿಂಪಿಕ್ಸ್‌ಗೆ ಚಾಲನೆ

ಮಂಗಳೂರು, ನ.26: ನಗರದ ಮಂಗಳಾ ಕ್ರೀಡಾಂಗಣದಲ್ಲಿಂದು ರಾಜ್ಯಮಟ್ಟದ ‘ಸ್ಪೆಶಲ್ ಒಲಿಂಪಿಕ್ಸ್ ಭಾರತ ಕರ್ನಾಟಕ-2018-19’ನ್ನು ಲಯನ್ಸ್ ಜಿಲ್ಲೆ 317ಡಿಯ ಗವರ್ನರ್ ಕೆ.ದೇವದಾಸ ಭಂಡಾರಿ ಉದ್ಘಾಟಿಸಿ ಶುಭ ಹಾರೈಸಿದರು.

 ರಾಜ್ಯ ಮಟ್ಟದ ಸ್ಪೆಷಲ್ ಒಲಿಂಪಿಕ್ಸ್ ಭಾರತ್ ಕರ್ನಾಟಕದ ಸಹಯೋಗದೊಂದಿಗೆ ಲಯನ್ಸ್ 317ಡಿ ಜಿಲ್ಲೆ ವತಿಯಿಂದ ಭಿನ್ನ ಸಾಮರ್ಥ್ಯದ ಮಕ್ಕಳಿಗಾಗಿ ಉತ್ತಮ ದೈಹಿಕ ಸಾಮರ್ಥ್ಯದ ಮತ್ತು ಕಡಿಮೆ ದೈಹಿಕ ಸಾಮರ್ಥ್ಯದ ಮಕ್ಕಳ ವಿಭಾಗದಲ್ಲಿ ಸ್ಪರ್ಧೆಗಳು ಹಮ್ಮಿಕೊಳ್ಳಲಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳ ವಿಶೇಷ ಶಾಲೆಗಳ 450 ಕ್ರೀಡಾಪಟುಗಳು, 100 ಕ್ರೀಡಾ ತರಬೇತುದಾರರು ಸೇರಿದಂತೆ ಕ್ರೀಡಾಕೂಟದಲ್ಲಿ ಭಾಗವಹಿಸುತ್ತಿವೆ. ವಿಶೇಷ ಮಕ್ಕಳಿಗೆ ಅನುಕಂಪದ ಬದಲು ಅವರಿಗೆ ಅವಕಾಶ ಕಲ್ಪಿಸುವ ಮೂಲಕ ಅವರನ್ನು ಪ್ರೋತ್ಸಾಹಿಸಲು ಈ ವಿಶೇಷ ಒಲಿಂಪಿಕ್ಸನ್ನು ಆರಂಭಿಸಲಾಗಿದೆ ಎಂದು ದೇವದಾಸ ಭಂಡಾರಿ ತಿಳಿಸಿದ್ದಾರೆ.

ಅಬುಧಾಬಿಯಲ್ಲಿ ಅಂತರ್‌ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ಒಲಿಂಪಿಕ್ಸ್ ವಿಶೇಷ ಒಲಿಂಪಿಕ್ಸ್‌ನ ಕ್ಷೇತ್ರದ ನಿರ್ದೇಶಕಿ ಕುಮುದಾ ಮಾತನಾಡಿ, ಮುಂದಿನ ಮಾರ್ಚ್12ರಿಂದ 22ರವರೆಗೆ ಅಬುಧಾಬಿಯಲ್ಲಿ 50ನೇ ವರ್ಷದ ಅಂತರ್‌ರಾಷ್ಟ್ರೀಯ ಮಟ್ಟದ ವಿಶೇಷ ಒಲಿಂಪಿಕ್ಸ್ ಕ್ರೀಡಾಕೂಟ ವಿಶೇಷ ಮಕ್ಕಳಿಗಾಗಿ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ 250 ದೇಶಗಳ 20 ದಶಲಕ್ಷ ಮಕ್ಕಳು ಭಾಗವಹಿಸುತ್ತಾರೆ ಎಂದು ತಿಳಿಸಿದರು.

1968ರಲ್ಲಿ ಆರಂಭಗೊಂಡ ಈ ವಿಶೇಷ ಮಕ್ಕಳ ಒಲಿಂಪಿಕ್ಸ್ 50ನೇ ವರ್ಷಾಚರಣೆಯ ಸಂಭ್ರಮದಲ್ಲಿದೆ. ಈ ಮಕ್ಕಳು ಇತರ ಮಕ್ಕಳಂತೆ ತಮ್ಮ ವಿಶೇಷ ಸಾಮರ್ಥ್ಯವನ್ನು ಪ್ರದರ್ಶಿಸಲು ಮತ್ತು ಅವರನ್ನು ಪೋತ್ಸಾಹಿಸುವ ದೃಷ್ಟಿಯಿಂದ ನಡೆಯುತ್ತದೆ ಎಂದು ಹೇಳಿದರು.

ಪ್ರಥಮ ಬಾರಿಗೆ ಮಧ್ಯಪ್ರಾಚ್ಯದ ಅಬುಧಾಬಿಯಲ್ಲಿ ನಡೆಯಲಿರುವ ಅಂತರ್‌ರಾಷ್ಟ್ರೀಯ ಒಲಿಂಪಿಕ್ಸ್‌ಗೆ ಈಗಾಗಲೆ ತಯಾರಿ ನಡೆಯುತ್ತಿದೆ. 20ವಿಶೇಷ ಮಕ್ಕಳ ಕ್ರೀಡಾ ಪಟುಗಳು ಹಾಗೂ 5 ತರಬೇತುದಾರರು ಕರ್ನಾಟಕದಿಂದ ಆಯ್ಕೆಯಾಗಿದ್ದಾರೆ. ಈಗಾಗಲೇ ಎರಡು ಸುತ್ತಿನ ಸಿದ್ಧತಾ ಪಂದ್ಯಗಳು ನಡೆದಿವೆ ಎಂದು ಕುಮುದಾ ವಿವರಿಸಿದರು.

ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಲಯನ್ಸ್ ವಿಶ್ವನಾಥ ಶೆಟ್ಟಿ ವಹಿಸಿದ್ದರು.ವಿಶೇಷ ಮಕ್ಕಳ ವಿಭಾಗದ ಲಯನ್ಸ್ ಜಿಲ್ಲಾ ಸಂಯೋಜಕ ಮುಹಮ್ಮದ್ ಅಲಿ, ಸಂಯೋಜಕಿ ಮೈಮುನಾ ಮುಹಿಯುದ್ದೀನ್, ಲಯನ್ಸ್ ಸಂಪುಟದ ಮಧ್ವರಾಜ್ ಕಲ್ಮಾಡಿ, ಶಾಂಭವಿ, ಗುಣವತಿ ರಮೇಶ್, ಕಸ್ತೂರಿ ಹೆಗ್ಡೆ, ಕೃಷ್ಣ ಕುಮಾರಿ ಎಸ್. ಆಳ್ವಾ, ಭಾರತಿ ಬಿ.ಎಂ., ಇಂದಿರಾ ಶೆಟ್ಟಿ, ಪಲ್ಲವಿ ಪೈ ಮೊದಲಾದವರು ಉಪಸ್ಥಿತರಿದ್ದರು.

ವಿಶೇಷ ಮಕ್ಕಳ ಕ್ರೀಡಾ ಕೂಟ ಧ್ವಜಾರೋಹಣದ ಮೂಲಕ ಆರಂಭಗೊಂಡಿತು. ಇದೇ ಸಂದರ್ಭದಲ್ಲಿ ವಿಶೇಷ ಮಕ್ಕಳ ಪಥ ಸಂಚಲನ ಕಾರ್ಯಕ್ರಮ ನಡೆಯಿತು. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸಿದ 20 ತಂಡಗಳು ಪಥ ಸಂಚಲನದಲ್ಲಿ ಭಾಗವಹಿಸಿದ್ದವು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X