Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರೈತರ ಡೆಲ್ಲಿ ಚಲೋಗೆ ಜನವಾದಿ ಮಹಿಳಾ...

ರೈತರ ಡೆಲ್ಲಿ ಚಲೋಗೆ ಜನವಾದಿ ಮಹಿಳಾ ಸಂಘಟನೆ ಬೆಂಬಲ: ರೈತರಿಗಾಗಿ ಮಹಿಳೆಯರು-ಪೋಸ್ಟರ್ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ27 Nov 2018 9:13 PM IST
share

ಬೆಂಗಳೂರು, ನ.27: ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರಕ್ಕಾಗಿ ನ.29, 30ರಂದು ದೇಶಾದ್ಯಂತ ನಡೆಯುತ್ತಿರುವ ರೈತರ ಡೆಲ್ಲಿ ಚಲೋದಲ್ಲಿ ಪಾಲ್ಗೊಂಡು ಸಂಸತ್ ಮುತ್ತಿಗೆ ಹಾಕುತ್ತೇವೆ ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ ತಿಳಿಸಿದೆ.

ಮಂಗಳವಾರ ನಗರದ ಬಿಬಿಎಂಪಿ ಸರ್ಕಲ್‌ನಲ್ಲಿ ರೈತರಿಗಾಗಿ ಡೆಲ್ಲಿ ಚಲೋ ಬೆಂಬಲಿಸಿ, ರೈತರಿಗಾಗಿ ಮಹಿಳೆಯರು-ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ಕೆ.ಎಸ್.ವಿಮಲಾ, ನ.30ರಂದು ಅಖಿಲ ಭಾರತ ಕೃಷಿ ಸಂಘರ್ಷ ಸಂಘಟನೆಗಳ ಸಮನ್ವಯ ಸಮಿತಿ ಸೇರಿದಂತೆ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ದೇಶಾದ್ಯಂತ ಲಕ್ಷಾಂತರ ರೈತರು ದೆಹಲಿ ಚಲೋದಲ್ಲಿ ಪಾಲ್ಗೊಂಡು ಸಂಸತ್ತು ಮುತ್ತಿಗೆ ಹಾಕಲಿದ್ದೇವೆ ಎಂದು ತಿಳಿಸಿದರು.

ರೈತರು ಸಾಲದ ಸುಳಿಯಲ್ಲಿ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಗೊತ್ತಿದ್ದರೂ ಕೇಂದ್ರ ಹಾಗೂ ರಾಜ್ಯ ಸರಕಾರಗಳು ರೈತರ ಸಮಸ್ಯೆಗಳಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿಲ್ಲ. ಹೀಗಾಗಿ, ರೈತರ ದೆಹಲಿ ಚಲೋಗೆ ನಮ್ಮ ಸಂಘಟನೆ ಕೈಜೋಡಿಸಿದೆ ಎಂದು ತಿಳಿಸಿದರು.

ಬಯಲು ಸೀಮೆಯ ಬರಪೀಡಿತ ರೈತರ ಭೂಮಿಗೆ ನೀರು ಒದಗಿಸಲು ಶಾಶ್ವತ ಯೋಜನೆ ರೂಪಿಸಬೇಕು. ರೈತರಿಗೆ ಅನುಕೂಲವಾಗುವ ಯೋಜನೆಗಳನ್ನು ಜಾರಿಗೆ ತರಬೇಕು ಹಾಗೂ ರೈತರ ಸಮಸ್ಯೆ ಪರಿಹಾರಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಧ್ಯಸ್ಥಿಕೆ ವಹಿಸಬೇಕೆಂದು ಮನವಿ ಮಾಡಿದರು.

ಡಾ.ಎಂ.ಎಸ್.ಸ್ವಾಮಿನಾಥನ್ ನೇತೃತ್ವದ ಸಮಿತಿಯ ಶಿಫಾರಸ್ಸಿನ ಆಧಾರದಲ್ಲಿ ಬೆಳೆಗಳ ಬೆಲೆ ನಿಗದಿ ಮಾಡುವುದರ ಮೂಲಕ ಎಲ್ಲ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಘೋಷಿಸಬೇಕು. ಅಲ್ಲದೆ, ರೈತರು ಮಾಡಿರುವ ಸಾಲ ಮನ್ನಾ ಮಾಡುವುದರ ಜತೆಗೆ ಬಡ್ಡಿ ರಹಿತ ಸಾಲ ನೀಡಬೇಕೆಂದು ಎಂದರು.

ನೈಸರ್ಗಿಕ ಏರುಪೇರು, ಸರಕಾರಗಳ ಆರ್ಥಿಕ ನೀತಿ ತಾಂತ್ರಿಕ ತೊಂದರೆಗಳು, ಹಣಕಾಸಿನ ಆಡಚಣೆ ಇತ್ಯಾದಿ ಆಪತ್ತುಗಳನ್ನು ಎದುರಿಸಲು ಪೂರ್ವ ಸಿದ್ಧತೆ ಹಾಗೂ ಅಗತ್ಯವಿರುವ ತುರ್ತು ನಿಧಿಯ ವ್ಯವಸ್ಥೆ ಹಾಗೂ ನೀರಾವರಿ, ವಿದ್ಯುತ್, ರಸ್ತೆ, ಸಂಸ್ಕರಣ ವ್ಯವಸ್ಥೆ, ಮೌಲ್ಯವರ್ಧನೆಗೆ ಪ್ರೋತ್ಸಾಹ, ಬೆಂಬಲ ಬೆಲೆ, ಶೀತಲೀಕರಣ, ಮಾರುಕಟ್ಟೆ ಮುಂತಾದ ಮೂಲಭೂತ ಸೌಕರ್ಯಗಳನ್ನು ಒದಗಿಸುವಲ್ಲಿ ಸರಕಾರಗಳು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X