Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಗಲ್ಫ್
  4. ವಿದ್ಯಾ ಸಂಸ್ಥೆಗಳು ಜಾತ್ಯತೀತವಾಗಿರಬೇಕು,...

ವಿದ್ಯಾ ಸಂಸ್ಥೆಗಳು ಜಾತ್ಯತೀತವಾಗಿರಬೇಕು, ಜನರ ಪ್ರೀತಿ ಸೇತೋಷ ಎಲ್ಲಕ್ಕಿಂತ ಮಿಗಿಲು: ಸವಣೂರು ಸೀತಾರಾಮ ರೈ

ಅಝೀಝ್ ಸೋಂಪಾಡಿಅಝೀಝ್ ಸೋಂಪಾಡಿ27 Nov 2018 11:20 PM IST
share
ವಿದ್ಯಾ ಸಂಸ್ಥೆಗಳು ಜಾತ್ಯತೀತವಾಗಿರಬೇಕು, ಜನರ ಪ್ರೀತಿ ಸೇತೋಷ ಎಲ್ಲಕ್ಕಿಂತ ಮಿಗಿಲು: ಸವಣೂರು ಸೀತಾರಾಮ ರೈ

ದುಬೈ, ನ. 27: ಜಾತಿ ಆಧಾರಿತ ವಿದ್ಯಾ ಸಂಸ್ಥೆಗಳಿಂದ ಸಾಮಾಜಿಕ ಮೌಲ್ಯಯುತ ವಿದ್ಯಾಭ್ಯಾಸ ನೀಡಲು ಸಾಧ್ಯವಿಲ್ಲ, ವಿದ್ಯಾ ಸಂಸ್ಥೆಗಳಲ್ಲಿ ಜಾತಿ ತಾರತಮ್ಯ ಸಲ್ಲದು, ವಿದ್ಯಾ ಸಂಸ್ಥೆಗಳು ಜಾತ್ಯತೀತವಾಗಿರಬೇಕು ಮತ್ತು ವಿದ್ಯಾ ಸಂಸ್ಥೆಗಳಲ್ಲಿ ಸಾಮಾನ್ಯ ಕುಟುಂಬದ ಮಕ್ಕಳು ಉತ್ತಮ ಶಿಕ್ಷಣ ಪಡೆಯುಂತಿರಬೇಕು ಎಂದು ಅವರು ಸವಣೂರು ಚಾಪಲ್ಲ ಮುಸ್ಲಿಮ್ ಹೆಲ್ಪ್ ಲೈನ್ ಯುಎಇ ಸಮಿತಿ ನಗರದ ಪರ್ಲ್ ಕ್ರೀಕ್ ಹೋಟೆಲ್ ಸಭಾಂಗಣದಲ್ಲಿ ಆಯೋಜಿಸಿದ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು  ಉದ್ದೇಶಿಸಿ ಮಾತನಾಡಿದರು.

ನಮ್ಮೂರಿನ ಸಾಮಾನ್ಯ ಮಕ್ಕಳು ಉತ್ತಮ ಶಿಕ್ಷಣ ಪಡೆಯಲಿ ಎಂಬ ಉದ್ದೇಶದಿಂದ  ಸವಣೂರಿನ ಹೃದಯ ಭಾಗದಲ್ಲಿ ಸುಮಾರು 25 ಎಕರೆ ವಿಶಾಲವಾದ ಪ್ರದೇಶದಲ್ಲಿ  ವಿದ್ಯಾ ಸಂಸ್ಥೆಗಳನ್ನು ಕಟ್ಟಿ ಮುನ್ನಡೆಸುತ್ತಿದ್ದೇನೆಯೇ ವಿನಃ ಯಾವುದೇ ವಾಣಿಜ್ಯ ಉದ್ದೇಶದಿಂದ ಮುನ್ನಡೆಸುತ್ತಿಲ್ಲ ಎಂದು ಹೇಳಿದರು.

ತಮ್ಮ ವಿದ್ಯಾ ಸಂಸ್ಥೆಯ ನಿರ್ಮಾಣಕ್ಕೆ ಮೊದಲು ಸವಣೂರಿನಲ್ಲಿ ಹಿರಿಯ ಪ್ರಾಥಮಿಕ ಶಾಲೆ, ಪ್ರೌಢ ಶಾಲೆ ಮತ್ತು ಪದವಿ ಪೂರ್ವ ಕಾಲೇಜು ಸ್ಥಾಪನೆಗೆ ಹೆಚ್ಚು ಶ್ರಮ ವಹಿಸಿ ಕೆಲಸ ಮಾಡಿರುವುದು ನಮ್ಮೂರಿನ ಜನರ ಏಳಿಗೆ, ಪ್ರೀತಿ ಮತ್ತು ಸಂತೋಷಕ್ಕಾಗಿ ಎಂದು ಅವರು ಹೇಳಿದರು.

ನಾವು ಪರಸ್ಪರ ಶಾಂತಿ, ಸೌಹಾರ್ದತೆಯಿಂದ ಅನ್ಯೊನ್ಯವಾಗಿ ಬಾಳಬೇಕು ಜನರ ಪ್ರೀತಿ ಮತ್ತು ಸಂತೋಷ ಎಲ್ಲಕ್ಕಿಂತ ಮಿಗಿಲು ಎಂದು ಹೇಳುತ್ತಾ ತಮ್ಮ ಸಾರ್ಥಕ ಜೀವನದ ಮೆಟ್ಟಿಲುಗಳನ್ನು ಎಳೆ ಎಳೆಯಾಗಿ ಕಾರ್ಯಕ್ರಮದಲ್ಲಿ ತೆರೆದಿಟ್ಟು ನೆರೆದವರನ್ನು ರೋಮಾಂಚನಗೊಳಿಸಿದರು. ಖಾಸಗಿ ಕಾರ್ಯಕ್ರಮ ನಿಮಿತ್ತ ಯುಎಇ ಪ್ರವಾಸ ದಲ್ಲಿರುವ ವಿದ್ಯಾರಶ್ಮಿ ಸಂಸ್ಥೆಯ ಸ್ಥಾಪಕ ಕೆ ಸೀತಾರಾಮ ರೈ ಅವರಿಗೆ ಕಿರು ಕಾಣಿಕೆ ನೀಡಿ, ಶಾಲು ಹೊದಿಸಿ ಸನ್ಮಾನಿಸಲಾಯಿತು.

ಈ ಸಂದರ್ಭ ವಿದ್ಯಾ ಸಂಸ್ಥೆಯ ವ್ಯವಸ್ಥಾಪಕರಾದ ಅಶ್ವಿನ್ ಶೆಟ್ಟಿ, ಆದರ್ಶ ಕೊ-ಆಪರೇಟಿವ್ ಸೊಸೈಟಿ ಡೈರೆಕ್ಟರ್ ಕೆನ್ಯ ರವೀಂದ್ರನಾಥ್ ಶೆಟ್ಟಿ, ರಿಟೈರ್ಡ್ ಕಇಬಿ ಚೀಫ್ ಇಂಜಿನಿಯರ್ ಮಹಾದೇವ ಇವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.

ಸಮಿತಿಯ ಅಧ್ಯಕ್ಷ ಝೈನುದ್ದೀನ್ ಎಸ್ ಎಮ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಮಿತಿಯ ಸಲಹೆಗಾರರು, ಈಡನ್ ಗ್ಲೋಬಲ್ ಬೆಳಂದೂರು ಶಾಲೆಯ ಟ್ರಸ್ಟಿ, ಉದ್ಯಮಿ ಅಶ್ರಫ್ ಶಾ ಮಾಂತೂರು ಅವರು ಮಾತನಾಡಿ ಸವಣೂರು ಎಂಬ ಗ್ರಾಮಾಂತರ ಪ್ರದೇಶವನ್ನು ಭಾರತದ ಭೂಪಟದಲ್ಲಿ ಶೈಕ್ಷಣಿಕವಾಗಿ ಗುರುತಿಸಿರುವ ಮಾನ್ಯ ಸೀತಾರಾಮ ರೈ ಅವರನ್ನು ಗೌರವಿಸಿ ಸನ್ಮಾನಿಸುವುದು ನಮ್ಮ ಕರ್ತವ್ಯ ಆದ್ದರಿಂದ ಈ ಕಾರ್ಯಕ್ರಮವನ್ನು ಆಯೋಜಿಸಿದ್ದೇವೆ ಎಂದರು.

ಕಾರ್ಯಕ್ರಮದ ಅತಿಥಿ ಅಹ್ಮದ್ ನಯೀಂ ಮುಖ್ವೆ ಅವರು ಮಾತನಾಡಿ ಜ್ಞಾನವೇ ಬೆಳಕು, ಜ್ಞಾನವಿಲ್ಲದ ಪ್ರದೇಶ ಕತ್ತಲು ತುಂಬಿಕೊಂಡಿರುತ್ತದೆ. ಇದನ್ನು ದಶಕಗಳ ಹಿಂದೆ ಅರ್ಥೈಸಿಕೊಂಡ ಹೃದಯ ಶ್ರೀಮಂತಿಕೆಯ ಸೀತಾರಾಮ ರೈ ಅವರು ಎಲ್ಲರೊಂದಿಗೆ ಬೆರೆತು ಸೌಹಾರ್ದತೆಯಿಂದ ಭವ್ಯ ಭಾರತದ ಸಂಸ್ಕೃತಿಯನ್ನು ಎತ್ತಿ ಹಿಡಿದು ಸವಣೂರು ಎಂಬ ಗ್ರಾಮಾಂತರ ಪ್ರದೇಶದಲ್ಲಿ ವಿದ್ಯಾ ಸಂಸ್ಥೆಗಳು ಕಟ್ಟಿ ಬೆಳೆಸಿ ಜ್ಞಾನದ ರಶ್ಮಿಯನ್ನು ಬೆಳಗಿಸಿದರು ಎಂದು ಹೇಳಿ ಕಾರ್ಯಕ್ರಮವನ್ನು ಪವಿತ್ರ ಕುರಾನ್ ಸೂಕ್ತದೊಂದಿಗೆ ಉದ್ಘಾಟಿಸಿದರು.

ಕೋಶಾಧಿಕಾರಿ ಅಬ್ಬಾಸ್ ಕೇಕುಡೆ ವಂದಿಸಿದರು ಹಾಗೂ ಅಶ್ರಫ್ ಪರ್ಲಡ್ಕ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ಮಹಾಬಲ ಶೆಟ್ಟಿ ಮತ್ತು ಸಮಿತಿಯ ಪದಾಧಿಕರಿಗಳಾದ ಶಾಕಿರ್ ಸವಣೂರು, ಅಶ್ರಫ್ ಆರ್ತಿಗೆರೆ, ಸೆಲೀಂ ಎಸ್ ಎಮ್, ರಫೀಕ್ ಎಂ ಎಸ್, ಯಾಕೂಬ್ ಸವಣೂರು, ಜಾಫರ್ ಸೋಂಪಾಡಿ, ಜಾಫರ್ ಆರಿಗೆ ಮಜಲು ಅಲ್ಲದೆ ಅಸ್ಗರ್ ಅಲೀ ತಂಙಲ್, ಶೆರೀಫ್ ಕಾವು, ಅಬ್ದುಲ್ ಸಲಾಮ್ ಬಪ್ಪಲಿಗೆ, ಇಶಾಕ್ ಹಾಜಿ ತೋಡಾರು, ಜಬ್ಬಾರ್ ಬೈತಡ್ಕ, ಆಸಿಕ್ ಕೂರ್ನಡ್ಕ, ಆರಿಫ್ ಕೂರ್ನಡ್ಕ,  ಆಸಿಫ್ ಮರೀಲ್ ಇವರನ್ನೊಳಗೊಂಡ ಮಾನ್ಯ  ಸೀತಾರಾಮ ರೈ ಅವರ ಅಭಿಮಾನಿಗಳು ಉಪಸ್ತಿತರಿದ್ದರು.

share
ಅಝೀಝ್ ಸೋಂಪಾಡಿ
ಅಝೀಝ್ ಸೋಂಪಾಡಿ
Next Story
X