Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ದಯಾಮರಣ ಕೋರಿ ರಾಷ್ಟ್ರಪತಿಗೆ ಉನಾ...

ದಯಾಮರಣ ಕೋರಿ ರಾಷ್ಟ್ರಪತಿಗೆ ಉನಾ ಸಂತ್ರಸ್ತ ಕುಟುಂಬದ ಪತ್ರ

ವಾರ್ತಾಭಾರತಿವಾರ್ತಾಭಾರತಿ28 Nov 2018 1:52 PM IST
share
ದಯಾಮರಣ ಕೋರಿ ರಾಷ್ಟ್ರಪತಿಗೆ ಉನಾ ಸಂತ್ರಸ್ತ ಕುಟುಂಬದ ಪತ್ರ

 ಅಹ್ಮದಾಬಾದ್,ನ.28: 2016,ಜು.11ರಂದು ಉನಾ ಜಿಲ್ಲೆಯ ಮೋಟಾ ಸಮಾಧಿಯಾಲಾ ಗ್ರಾಮದಲ್ಲಿ ಗೋಹತ್ಯೆಯ ಆರೋಪದಲ್ಲಿ ತಥಾಕಥಿತ ಗೋರಕ್ಷಕರಿಂದ ಅಮಾನುಷ ಥಳಿತಕ್ಕೊಳಗಾಗಿದ್ದ ಸಂತ್ರಸ್ತ ದಲಿತರು ಗುಜರಾತ್ ಸರಕಾರವು ತಮಗೆ ನೀಡಿದ್ದ ಯಾವುದೇ ಭರವಸೆಯನ್ನು ಈಡೇರಿಸಿಲ್ಲ ಎಂದು ಆರೋಪಿಸಿದ್ದು,ತಮಗೆ ದಯಾಮರಣಕ್ಕೆ ಅನುಮತಿಯನ್ನು ಕೋರಿ ರಾಷ್ಟ್ರಪತಿಗಳಿಗೆ ಪತ್ರ ಬರೆದಿದ್ದಾರೆ. ತಮ್ಮಲ್ಲೋರ್ವರು ಡಿ.7ರಿಂದ ದಿಲ್ಲಿಯಲ್ಲಿ ಆಮರಣಾಂತ ಉಪವಾಸವನ್ನು ಕೈಗೊಳ್ಳಲಿದ್ದಾರೆ ಎಂದೂ ಅವರು ತಿಳಿಸಿದ್ದಾರೆ.

ತನ್ನ ಕುಟುಂಬದ ಪರವಾಗಿ ಮಂಗಳವಾರ ಈ ಪತ್ರವನ್ನು ಬರೆದಿರುವ ವಶ್ರಾಮ್ ಸರ್ವೈಯಾ(28) ಅವರು ತನ್ನ ಕುಟುಂಬ ಸದಸ್ಯರು ಮತ್ತು ಬಂಧುಗಳ ಮೇಲೆ ಹಲ್ಲೆ ನಡೆದ ಬಳಿಕ ಆಗಿನ ಗುಜರಾತ್ ಮುಖ್ಯಮಂತ್ರಿ ಆನಂದಿ ಬೆನ್ ಪಟೇಲ್ ಅವರು ಪ್ರತಿಯೊಬ್ಬ ಸಂತ್ರಸ್ತರಿಗೂ ಐದು ಎಕರೆ ಭೂಮಿ ಮತ್ತು ವಿದ್ಯಾರ್ಹತೆಗೆ ತಕ್ಕಂತೆ ಸರಕಾರಿ ಉದ್ಯೋಗವನ್ನು ನೀಡುವುದಾಗಿ ಭರವಸೆ ಕೊಟ್ಟಿದ್ದರು. ಮೋಟಾ ಸಮಾಧಿಯಾಲಾ ಗ್ರಾಮವನ್ನು ಅಭಿವೃದ್ಧಿಗೊಳಿಸುವುದಾಗಿಯೂ ಅವರು ಆಶ್ವಾಸನೆ ನೀಡಿದ್ದರು. ಘಟನೆಯು ನಡೆದು ಎರಡು ವರ್ಷ ನಾಲ್ಕು ತಿಂಗಳುಗಳೇ ಕಳೆದುಹೋಗಿದ್ದರೂ ಸರಕಾರವು ಒಂದೇ ಒಂದು ಭರವಸೆಯನ್ನು ಈಡೇರಿಸಿಲ್ಲ, ಈಡೇರಿಸಲು ಪ್ರಯತ್ನವನ್ನೂ ಮಾಡಿಲ್ಲ ಎಂದು ಹೇಳಿದ್ದಾರೆ.

ಗೋ ಹತ್ಯೆ ಮಾಡಿದ್ದಾರೆಂದು ಆರೋಪಿಸಿ ಗೋರಕ್ಷಕರ ಗುಂಪು ವಶ್ರಾಮ್,ಅವರ ಕಿರಿಯ ಸೋದರ ರಮೇಶ,ತಂದೆ ಬಾಲು ಮತ್ತು ತಾಯಿ ಕುನ್ವರ್ ಸೇರಿದಂತೆ ಎಂಟು ದಲಿತರನ್ನು ಅಮಾನವೀಯವಾಗಿ ಥಳಿಸಿದ್ದರು. ಈ ಘಟನೆಯ ವೀಡಿಯೊ ವೈರಲ್ ಆಗಿದ್ದು,ರಾಷ್ಟ್ರವ್ಯಾಪಿ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯಾದ್ಯಂತ ದಲಿತರು ಪ್ರತಿಭಟನೆ ನಡೆಸಿದ್ದರು. ಹಲವಾರು ಜನರು ಆತ್ಮಹತ್ಯೆಗೆ ಪ್ರಯತ್ನಿಸಿದ್ದು,ಈ ಪೈಕಿ ಓರ್ವ ಮೃತಪಟ್ಟಿದ್ದ. ದಲಿತರು ಸತ್ತ ದನದ ಚರ್ಮವನ್ನು ಸುಲಿಯುತ್ತಿದ್ದರು ಎನ್ನುವುದು ನಂತರ ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

“ಈ ದಾಳಿಯು ನಾವು ಸತ್ತ ದನಗಳ ಚರ್ಮ ಸುಲಿಯುವ ಸಾಪ್ರದಾಯಿಕ ವೃತ್ತಿಗೆ ತಿಲಾಂಜಲಿ ಇಡುವಂತೆ ಮಾಡಿದೆ. ನಮಗೆ ಜೀವನೋಪಾಯಕ್ಕೆ ಅನ್ಯ ಮಾರ್ಗಗಳೂ ಇಲ್ಲ. ಭವಿಷ್ಯದಲ್ಲಿ ನಾವು ಹಸಿವೆಯಿಂದ ಸಾಯುವ ಸಾಧ್ಯತೆಯಿದೆ. ನಾವು ಪದೇಪದೇ ಮೌಖಿಕ ಮತ್ತು ಲಿಖಿತ ಮನವಿಗಳನ್ನು ಮಾಡಿಕೊಂಡಿದ್ದರೂ ಗುಜರಾತ್ ಸರಕಾರವು ನಮ್ಮ ಯಾವುದೇ ಸಮಸ್ಯೆಗೆ ಕಿವಿಗೊಟ್ಟಿಲ್ಲ ಎಂದು ಪತ್ರದಲ್ಲಿ ತಿಳಿಸಿರುವ ವಶ್ರಾಮ್,ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದಲಿತರ ವಿರುದ್ಧ ದಾಖಲಿಸಲಾಗಿರುವ ಪ್ರಕರಣಗಳನ್ನು ಸರಕಾರವು ಹಿಂದೆಗೆದುಕೊಳ್ಳದಿರುವುದು ತಮಗೆ ನೋವನ್ನುಂಟು ಮಾಡಿದೆ. ಇವೆಲ್ಲ ಸಂಪೂರ್ಣ ಸುಳ್ಳು ಪ್ರಕರಣಗಳಾಗಿವೆ ಎಂದಿದ್ದಾರೆ.

ರಾಜ್ಯ ಸರಕಾರವು ತಮಗೆ ಹಾಗೂ ಸಾಕ್ಷಿಗಳಿಗೆ ಸಾಕಷ್ಟು ಭದ್ರತೆಯನ್ನು ಒದಗಿಸುತ್ತಿಲ್ಲ ಎಂದಿರುವ ಅವರು,ತಮ್ಮ ಬದುಕು ದಯನೀಯವಾಗಿದೆ. ತಾನು ಮತ್ತು ತನ್ನ ಕುಟುಂಬ ಸಾಯಲು ಬಯಸಿದ್ದೇವೆ ಎಂದು ನೋವು ತೋಡಿಕೊಂಡಿದ್ದಾರೆ.

ಆರೋಪಿಗಳು ಜಾಮೀನು ಪಡೆದು ಹೊರಗೆ ಬರುತ್ತಿದ್ದು,ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸುತ್ತಿದ್ದಾರೆ ಮತ್ತು ಇತರ ಅಪರಾಧಗಳಲ್ಲಿ ತೊಡಗಿಕೊಂಡಿದ್ದಾರೆ. ಹೀಗಿದ್ದರೂ ಸರಕಾರವು ಅವರ ಜಾಮೀನುಗಳನ್ನು ರದ್ದುಗೊಳಿಸಲು ಯಾವುದೇ ಪ್ರಯತ್ನಗಳನ್ನು ಮಾಡುತ್ತಿಲ್ಲ ಎಂದು ತಿಳಿಸಿರುವ ವಶ್ರಾಮ್,ಸರಕಾರವು ಆರೋಪಿಗಳ ಜಾಮೀನುಗಳನ್ನು ರದ್ದುಗೊಳಿಸಲು ಕ್ರಮಗಳನ್ನು ತೆಗೆದುಕೊಳ್ಳಬೇಕು,ವೆರಾವಲ್ ನ್ಯಾಯಾಲಯಕ್ಕೆ ನಿಯೋಜಿತ ನ್ಯಾಯಾಲಯದ ಅಧಿಕಾರಗಳನ್ನು ನೀಡಬೇಕು ಮತ್ತು ಮೋಟಾ ಸಮಾಧಿಯಾಲಾದಲ್ಲಿ ಪೊಲೀಸ್ ಹೊರಠಾಣೆಯನ್ನು ಸ್ಥಾಪಿಸಬೇಕು ಎಂದು ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X