Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಡಿಸೆಂಬರ್ 1, 2ರಂದು ಜನನುಡಿ

ಮಂಗಳೂರು: ಡಿಸೆಂಬರ್ 1, 2ರಂದು ಜನನುಡಿ

ವಾರ್ತಾಭಾರತಿವಾರ್ತಾಭಾರತಿ28 Nov 2018 4:35 PM IST
share
ಮಂಗಳೂರು: ಡಿಸೆಂಬರ್ 1, 2ರಂದು ಜನನುಡಿ

ಮಂಗಳೂರು, ನ.28: ದೇಶದ ಜನ ಎದುರಿಸುತ್ತಿರುವ ಸವಾಲುಗಳಿಗೆ ಈ ದೇಶದ ಸಾಹಿತ್ಯ ಮತ್ತು ಸಾಂಸ್ಕೃತಿಕ ಪ್ರತಿರೋಧದ ಮೂಲಕ ಉತ್ತರ ಕಂಡುಕೊಳ್ಳುವ ಆಶಯದೊಂದಿಗೆ ಹುಟ್ಟಿಕೊಂಡಿರುವ ‘ಜನನುಡಿ’ ಕಾರ್ಯಕ್ರಮ ಈ ಬಾರಿ ಡಿಸೆಂಬರ್ 1 ಮತ್ತು 2ರಂದು ನಗರದ ನಂತೂರಿನಲ್ಲಿರುವ ಶಾಂತಿ ಕಿರಣ ಸಭಾಂಗಣದಲ್ಲಿ ನಡೆಯಲಿದೆ.

ನಾಡಿನ ಖ್ಯಾತ ಚಿಂತಕ, ಸಂವಿಧಾನ ತಜ್ಞ, ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ಜಸ್ಟಿಸ್ ನಾಗಮೋಹನ್ ದಾಸ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಲೇಖಕಿ ಡಾ. ವಿನಯಾ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಉದ್ಘಾಟನಾ ಗೋಷ್ಠಿಯ ಮುಖ್ಯ ಅತಿಥಿಯಾಗಿ ಬಹುಭಾಷಾ ನಟ ಪ್ರಕಾಶ್ ರೈ ಭಾಗವಹಿಸಲಿದ್ದಾರೆ.

ಚಿಂತಕರಾದ ಡಾ.ಹಸೀನಾ ಖಾದ್ರಿ, ದಲಿತ ಹೋರಾಟಗಾರ ಎಂ.ದೇವದಾಸ್ ಉಪಸ್ಥಿತರಿರುವರು. ‘ಭವಿಷ್ಯದ ಭಾರತ: ಮಾರ್ಕ್ಸ್- ಅಂಬೆಂಡ್ಕರ್- ಗಾಂಧಿ- ಲೋಹಿಯಾ’ ಎಂಬ ವಿಷಯದಲ್ಲಿ ಮೊದಲ ಗೋಷ್ಠಿಯಲ್ಲಿ ಜಿ.ರಾಜಶೇಖರ, ಡಾ.ಪುರುಷೋತ್ತಮ ಬಿಳಿಮಲೆ, ಡಾ.ಮುಝಫರ್ ಅಸ್ಸಾದಿ, ಡಾ.ಡಿ.ಡೊಮಿನಿಕ್ ವಿಚಾರ ಮಂಡನೆ ಮಾಡಲಿದ್ದಾರೆ.

‘ಭಾರತದ ಮುಸ್ಲಿಮರು’ ಗೋಷ್ಠಿಯಲ್ಲಿ ಹಿರಿಯ ಪತ್ರಕರ್ತ, ವಾರ್ತಾಭಾರತಿ ದೈನಿಕದ ಪ್ರಧಾನ ಸಂಪಾದಕ ಅಬ್ದುಸ್ಸಲಾಂ ಪುತ್ತಿಗೆ ಉಪನ್ಯಾಸ ನೀಡಲಿದ್ದಾರೆ. ಮೊದಲ ದಿನದ ಸಂಜೆ ಕೊರಗರ ಗಜಮೇಳ, ಬ್ಯಾರಿ ಸಮುದಾಯದ ದಫ್ ಕುಣಿತ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ದಲಿತ ಹೋರಾಟಗಾರ್ತಿ ಸುಶೀಲಾ ನಾಡ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಎರಡನೇ ದಿನವಾದ ಡಿ.2ರಂದು ಬೆಳಗ್ಗೆ ಕವಿಗೋಷ್ಠಿ ನಡೆಯಲಿದ್ದು, ಮುಹಮ್ಮದ್ ಬಡ್ಡೂರ್, ವಿಲ್ಸನ್ ಕಟೀಲ್, ಹಾರೊಹಳ್ಳಿ ರವೀಂದ್ರ, ಸಹ್ಯಾದ್ರಿ ನಾಗರಾಜ್, ಸಂದೀಪ್ ಈಶಾನ್ಯ, ಪಿ.ಕೆ.ನವಲಗುಂದ, ಶ್ರೀಹರಿ ದೂಪದ, ವಿರೇಶ್ ನಾಯಕ, ಭುವನಾ ಹಿರೇಮಠ, ಸುನೈಫ್, ರಾಜಪ್ಪಭರಮಸಾಗರ, ದುರುಗೇಶ್ ಪೂಜಾರ್, ಸೌಮ್ಯಾ ಸಾಮಂತ್ರಿ, ಖಂಡು ಬಂಜಾರ ಯಾದಗಿರಿ, ಶೇಖರ್ ನಾಯಕ ಕನಕಗಿರಿ, ದೊಡ್ಡಕಲ್ಲಹಳ್ಳಿ ನಾರಾಯಣಪ್ಪ, ಚಾಂದ್ ಪಾಶ ಬೆಂಗಳೂರು, ಜ್ಯೋತಿ ಹಿಟ್ನಾಳ್, ರುಕ್ಮಿಣಿ ನಾಗಣ್ಣನವರ್, ಫೆಲ್ಸಿ ಲೋಬೊ ಕವನ ವಾಚನ ವಾಚನ ಮಾಡಲಿದ್ದಾರೆ. ಈ ಕವಿಗೋಷ್ಠಿಗೆ ಚಿದಂಬರ ನರೇಂದ್ರ ಚಾಲನೆ ನೀಡಲಿದ್ದಾರೆ.

‘ಹೊರಳುನೋಟ’ ಎಂಬ ಗೋಷ್ಠಿಯಲ್ಲಿ ಮಹೇಂದ್ರ ಕುಮಾರ್, ಸುಧೀರ್ ಕುಮಾರ್ ಮುರೊಳ್ಳಿ, ನಿಕೇತ್ ರಾಜ್ ಮೌರ್ಯ ವಿಷಯ ಮಂಡನೆ ಮಾಡಲಿದ್ದಾರೆ.

‘ದಲಿತ ಭಾರತ’ ಎಂಬ ಸಂವಾದಗೋಷ್ಠಿಯ ಅಧ್ಯಕ್ಷತೆಯನ್ನು ಹಿರಿಯ ದಲಿತ ಚಿಂತಕ ಡಾ. ಎಂ.ನಾರಾಯಣ ಸ್ವಾಮಿ ವಹಿಸುವರು. ರವಿಕುಮಾರ್ ಟೆಲೆಕ್ಸ್, ಡಾ.ಪುಷ್ಪಾ ಅಮರೇಶ್ ವಿಚಾರ ಮಂಡನೆ ಮಾಡಲಿದ್ದಾರೆ.

‘ಮಹಿಳಾ ಭಾರತ’ ಸಂವಾದಗೋಷ್ಠಿಯ ಅಧ್ಯಕ್ಷತೆಯನ್ನು ಡಾ.ಎಚ್.ಎಸ್.ಅನುಪಮಾ ನಡೆಸಿಕೊಡಲಿದ್ದು, ಡಾ.ಚಮನ್ ಫರ್ಝಾನ, ಸೌಮ್ಯಾ ವಿಷಯ ಮಂಡನೆ ಮಾಡಲಿದ್ದಾರೆ.

ಸಂಜೆ ನಡೆಯಲಿರುವ ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಹಿರಿಯ ಪತ್ರಕರ್ತ ದಿನೇಶ್ ಅಮಿನ್ ಮಟ್ಟು ವಹಿಸುವರು. ಪ್ರೊ.ವಲೇರಿಯನ್ ರೊಡ್ರಿಗಸ್ ಸಮಾರೋಪ ಭಾಷಣ ಮಾಡಲಿದ್ದಾರೆ.

ಹಿರಿಯ ದಲಿತ ಚಳವಳಿಗಾರ ಮಾವಳ್ಳಿ ಶಂಕರ್, ಎಸ್.ವರಲಕ್ಷ್ಮೀ ಸಹಿತ ಹಲವು ಖ್ಯಾತನಾಮರು ಉಪಸ್ಥಿತರಿರುವರು ಎಂದು ಅಭಿಮತ ಮಂಗಳೂರು ಪ್ರಕಟನೆಯಲ್ಲಿ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X