Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ವಾರ್ತಾಭಾರತಿ ಅಂಕಣಕಾರ ಜಿ.ಎನ್.ರಂಗನಾಥ...

ವಾರ್ತಾಭಾರತಿ ಅಂಕಣಕಾರ ಜಿ.ಎನ್.ರಂಗನಾಥ ರಾವ್ ಗೆ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Nov 2018 8:32 PM IST
share
ವಾರ್ತಾಭಾರತಿ ಅಂಕಣಕಾರ ಜಿ.ಎನ್.ರಂಗನಾಥ ರಾವ್ ಗೆ ರಾಜ್ಯೋತ್ಸವ ಪ್ರಶಸ್ತಿ

ಬೆಂಗಳೂರು, ನ.28: ರಾಜ್ಯ ಸರಕಾರವು 2018ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಿಸಿದ್ದು, ಹಿರಿಯ ಪತ್ರಕರ್ತ, ವಾರ್ತಾಭಾರತಿ ಅಂಕಣಕಾರ ಜಿ.ಎನ್.ರಂಗನಾಥ್‌ ರಾವ್ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. 

ಹಿರಿಯ ಪತ್ರಕರ್ತರಾದ ಜಿ.ಎನ್.ರಂಗನಾಥರಾವ್ ‘ಸಂಯುಕ್ತ ಕರ್ನಾಟಕ’ ಬೆಂಗಳೂರು ಆವೃತ್ತಿಯಲ್ಲಿ 1962ರಲ್ಲಿ ಉಪಸಂಪಾದಕರಾಗಿ ತಮ್ಮ ವೃತ್ತಿ ಜೀವನ ಆರಂಭಿಸಿದವರು, ಮುಂದೆ ‘ಪ್ರಜಾವಾಣಿ’ ಪತ್ರಿಕೆಗೆ ಸೇರ್ಪಡೆಯಾದರು. ಹಂತ ಹಂತವಾಗಿ ಮೇಲೇರಿ ಆ ಪತ್ರಿಕಾ ಸಮೂಹದ ‘ಕಾರ್ಯನಿರ್ವಾಹಕ ಸಂಪಾದಕ’ ಹುದ್ದೆಗೇರಿ ನಿವೃತ್ತರಾದರು. ಅವರು ‘ಪ್ರಜಾವಾಣಿ’ಯ ಸಾಪ್ತಾಹಿಕ ಪುರವಣಿಯ ಉಸ್ತುವಾರಿ ವಹಿಸಿಕೊಂಡ ಸಮಯದಲ್ಲಿ ಹಾಗೂ ಸುಧಾ ವಾರ ಪತ್ರಿಕೆಯ ನೇತೃತ್ವ ವಹಿಸಿದ್ದ ಸಂದರ್ಭದಲ್ಲಿ ನೂರಾರು ಹೊಸ ಬರಹಗಾರರಿಗೆ ಉತ್ತೇಜನ ನೀಡಿದ್ದರು. 

ಜಿ.ಎನ್.ಆರ್. ಅವರದು ಬಹುಮುಖ ಪ್ರತಿಭೆ. ‘ನವರಂಗ’ ಎಂಬ ಕಾವ್ಯನಾಮದಲ್ಲಿ ಕಾದಂಬರಿ, ವಿಡಂಬನಾ ಬರಹ, ಕತೆಗಳನ್ನು ರಚಿಸಿದ್ದಾರೆ. ನಾಟಕಗಳನ್ನು ಬರೆದಿದ್ದಾರೆ, ವಿಮರ್ಶೆಗಳನ್ನು ಮಂಡಿಸಿದ್ದಾರೆ. ಕಾವ್ಯಪ್ರೇಮಿಯಾದ ಜಿ.ಎನ್.ಆರ್. ಕವಿಗಳಿಗೆ ಮಾರ್ಗದರ್ಶಕರಾಗಿದ್ದಾರೆ. ಪತ್ರಕರ್ತರ ಕಾಲೇಜುಗಳಲ್ಲಿ ಬೋಧಿಸುವುದರ ಜತೆಗೆ ಅವರ ಅನುಕೂಲಕ್ಕೆ ಪಠ್ಯ ಪುಸ್ತಕಗಳನ್ನು ರಚಿಸಿದ್ದಾರೆ. ಇಂದಿಗೂ ಕನ್ನಡ ಸಾಂಸ್ಕೃತಿಕ ಸಮಾರಂಭಗಳಿಗೆ ತಪ್ಪದೇ ಹಾಜರಿ ಹಾಕುವ ಜಿ.ಎನ್.ಆರ್. ತಮ್ಮ ಆಪ್ತ ಲೇಖಕ ಬಳಗಕ್ಕೆ ಸ್ಫೂರ್ತಿ ತುಂಬುವ ಸಹೃದಯಿ. ಶ್ರೀಯುತರಿಗೆ 2009 ರಲ್ಲಿ ಖಾದ್ರಿ ಶಾಮಣ್ಣ ಪ್ರಶಸ್ತಿಯ ಗೌರವ ಸಂದಿದೆ. ಸದ್ಯ ಅವರು ವಾರ್ತಾಭಾರತಿಯ 'ನೇಸರ ನೋಡು, ನೇಸಾರ ನೋಡು' ಅಂಕಣಕದಲ್ಲಿ ಬರೆಯುತ್ತಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X