Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ದಾನಶೂರ, ಸಮಾಜ ಸೇವಕನಿಗೆ ಒಲಿದ...

ಉಡುಪಿ: ದಾನಶೂರ, ಸಮಾಜ ಸೇವಕನಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ವಾರ್ತಾಭಾರತಿವಾರ್ತಾಭಾರತಿ28 Nov 2018 9:59 PM IST
share
ಉಡುಪಿ: ದಾನಶೂರ, ಸಮಾಜ ಸೇವಕನಿಗೆ ಒಲಿದ ರಾಜ್ಯೋತ್ಸವ ಪ್ರಶಸ್ತಿ

ಉಡುಪಿ, ನ.28: ಕೋಟ ಎಂಬ ಊರು ಡಾ. ಕೋಟ ಶಿವರಾಮ ಕಾರಂತರಿಂದಾಗಿ ಜಗತ್ಪ್ರಸಿದ್ಧವಾದರೆ, ಈ ಊರಿನ ಹೆಸರನ್ನು ತಮ್ಮ ಸಮಾಜ ಮುಖಿ ಕಾರ್ಯ, ಪರಿಸರದ ಕುರಿತ ಕಾಳಜಿಯಿಂದ ಎಲ್ಲಡೆ ಪಸರಿಸುತ್ತಿರುವವರು ಇಂದು ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಆನಂದ ಸಿ.ಕುಂದರ್.

ಕೋಟ ಪರಿಸರದಲ್ಲಿ ಸಾಂಸ್ಕೃತಿಕ, ಶೈಕ್ಷಣಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ತೊಡಗಿಸಿಕೊಂಡು, ದಾನ ಧರ್ಮಗಳ ಮೂಲಕ ಮನೆ ಮಾತಾಗಿರುವ ಕೋಟದ ಜನತಾ ಫಿಶ್ ಮೀಲ್‌ನ ಮಾಲಕರು ಹಾಗೂ ತನ್ನ ಸಮಾಜಮುಖಿ ಕಾರ್ಯಗಳಿಗೆ ಸ್ಥಾಪಿಸಿದ ಗೀತಾನಂದ ಪೌಂಡೇಶನ್‌ನ ಪ್ರವರ್ತಕರು ಆಗಿರುವರು ಆನಂದ್ ಸಿ ಕುಂದರ್.

ಆರಂಭದಿಂದಲೂ ಉದ್ಯಮ ಕ್ಷೇತ್ರದಲ್ಲಿ ತನ್ನನ್ನು ಗುರುತಿಸಿಕೊಂಡ ಆನಂದ ಸಿ.ಕುಂದರ್, ತನ್ನದೆ ಆದ ಸಾಧನೆಯ ಮೈಲ್ಲುಗಲ್ಲು ಸಾಧಿಸಿದವರು. ಉದ್ಯಮದಲ್ಲಿ ಬಂದ ಲಾಭವನ್ನು ಸಾಮಾಜಿಕ, ಶೈಕ್ಷಣಿಕ ಕ್ಷೇತ್ರಗಳಿಗೆ ವಿನಿಯೋಗಿಸುತ್ತಿರುವ ಇವರು, ಪರಿಸರದ ಹತ್ತು ಹಲವು ದೇವಸ್ಥಾನಗಳ ಜೀರ್ಣೋದ್ಧಾರಕ್ಕೆ ಮುಂಚೂಣಿಯಲ್ಲಿ ನಿಂತು ಸಹಾಯ ಮಾಡಿದವರು. ಇದರಿಂದ ಕೋಟದ ಅಮೃತೇಶ್ವರಿ ಹಲವು ಮಕ್ಕಳ ತಾಯಿ ದೇವಸ್ಥಾನ, ಕೋಡಿ ಕನ್ಯಾನದ ಮಹಾಸತೀಶ್ವರಿ, ಮಣೂರು ಜಟ್ಟಿಗೇಶ್ವರ, ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನ, ಬಗ್ವಾಡಿ ಮಹಿಷಿಮರ್ದನಿ, ಬೆಣ್ಣೆಕುದ್ರು ಹೀಗೆ ಇನ್ನೂ ಹಲವು ದೇವಸ್ಥಾನಗಳು ಪುನರ್ ನವಿಕರಣಗೊಂಡವು.

ಸಾಂಸ್ಕ್ರತಿಕ ಕ್ಷೇತ್ರ:  ಯಕ್ಷಗಾನದ ಕಲಾ ಸಂಸ್ಥೆಗಳಲ್ಲಿ ತೊಡಗಿಸಿಕೊಂಡ ಇವರು ಕಾರಂತ ಹುಟ್ಟೂರ ಪ್ರತಿಷ್ಠಾನದ ರೂವಾರಿಗಳಲ್ಲೊಬ್ಬರು. ಸಾಮಾಜಿಕವಾದ ಹಲವಾರು ವಿಚಾರಗಳಿಗೆ ಕೊಡುಗೈ ದಾನಿಯಾಗಿ, ಬಡವರ ಕಣ್ಣಿರನ್ನು ಒರಸುವ ಸಲುವಾಗಿ ತಮ್ಮದೇ ಗೀತಾನಂದ ಪೌಂಡೇಶನ್ ಪ್ರಾರಂಭಿಸಿ ಅದರಲ್ಲಿ ಹತ್ತು ಹಲವು ಸಮಾಜ ಮುಖಿ ಕಾರ್ಯಗಳನ್ನು ಹಮ್ಮಿಕೊಂಡರು.

ಸರಳ ಸಜ್ಜನಿಕೆಯ ಸಾಕಾರ ಮೂರ್ತಿಯಾಗಿ ಸಾಮಾಜಿಕ ಅಭಿವೃಧ್ಧಿಯ ಹರಿಕಾರರಾಗಿ ಕೋಟ ಪರಿಸರದ ಹೆಚ್ಚಿನೆಲ್ಲಾ ಕಾರ್ಯಕ್ರಮಗಳ ಆಶ್ರಯದಾತ ರಾಗಿ ಎಲ್ಲರ ಪ್ರೀತಿಗೆ ಪಾತ್ರರಾಗಿರುವ ಆನಂದ್ ಕುಂದರ್ ಚಿಕ್ಕ ಮಕ್ಕಳೊಂದಿಗೆ ಕೂಡಾ ವಿನಯಶೀಲರಾಗಿ ವ್ಯವಹರಿಸುವವರು. ಕೋಟ ಪರಿಸರದಲ್ಲಿ ತನ್ನಣ್ಣ ಉಡುಪಿ ಜಿಲ್ಲಾ ಪರಿಷತ್‌ನ ಮಾಜಿ ಅಧ್ಯಕ್ಷ ದಿ.ಕೆ.ಸಿ.ಕುಂದರ್‌ರ ಹೆಸರನ್ನು ಚಿರಸ್ಥಾಯಿಗೊಳಿಸಲು ಅನೇಕ ಕಾರ್ಯಕ್ರಮಗಳನ್ನು ಹಾಕಿಕೊಂಡು ಜನಪ್ರಿಯತೆ ಪಡೆದಿದ್ದಾರೆ.

ಮುಂಬೈಯಲ್ಲಿ ಕಾರ್ಯನಿರ್ವಹಿಸುತಿದ್ದ ಆನಂದ್ ಸಿ ಕುಂದರ್, ಅಣ್ಣ ಕೆ.ಸಿ.ಕುಂದರ್‌ರ ಒತ್ತಾಸೆಯಂತೆ ಕೋಟಕ್ಕೆ ಮರಳಿ ತನ್ನ ಕುಲಕಸುಬಾದ ಮತ್ಯೋದ್ಯಮ ಕ್ಷೇತ್ರದಲ್ಲಿ ತೊಡಗಿಕೊಂಡರು. ಈ ಮೂಲಕ ಪರಿಸರದ ನೂರಾರು ಯುವಕರಿಗೆ ಉದ್ಯೋಗವನ್ನು ನೀಡಿದ ತೃಪ್ತಿಯನ್ನು ಪಡೆದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X