Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಲಯನ್ ಏರ್ ವಿಮಾನ ಪತನಕ್ಕೂ ಮುನ್ನ 26...

ಲಯನ್ ಏರ್ ವಿಮಾನ ಪತನಕ್ಕೂ ಮುನ್ನ 26 ಬಾರಿ ಈ ಘಟನೆ ನಡೆದಿತ್ತು…

ಹರಸಾಹಸ ಪಟ್ಟಿದ್ದ ಪೈಲಟ್ ಗಳು

ವಾರ್ತಾಭಾರತಿವಾರ್ತಾಭಾರತಿ28 Nov 2018 11:10 PM IST
share
ಲಯನ್ ಏರ್ ವಿಮಾನ ಪತನಕ್ಕೂ ಮುನ್ನ 26 ಬಾರಿ ಈ ಘಟನೆ ನಡೆದಿತ್ತು…

 ಜಕಾರ್ತ, ನ. 28: ಇತ್ತೀಚೆಗೆ ಜಾವಾ ಸಮುದ್ರದಲ್ಲಿ ಪತನಗೊಳ್ಳುವ ಮೊದಲು, ಇಂಡೋನೇಶ್ಯದ ಲಯನ್ ಏರ್ ವಿಮಾನವನ್ನು ನಿಯಂತ್ರಣದಲ್ಲಿಡಲು ಪೈಲಟ್‌ಗಳು ಕಷ್ಟಪಡುತ್ತಿದ್ದರು ಹಾಗೂ ವಿಮಾನವು ಸ್ವಯಂಚಾಲಿತ ಚಾಲನಾ ವ್ಯವಸ್ಥೆಯಲ್ಲಿದ್ದಾಗ ಅದರ ಮೂತಿ ಪದೇ ಪದೇ ಕೆಳಗೆ ವಾಲುತ್ತಿತ್ತು ಎನ್ನುವುದು ತಿಳಿದು ಬಂದಿದೆ.

ಅಕ್ಟೋಬರ್ 29ರಂದು ಸಂಭವಿಸಿದ ಬೋಯಿಂಗ್ 737 ಮ್ಯಾಕ್ಸ್ 8 ವಿಮಾನದ ಪತನದ ಬಗ್ಗೆ ತನಿಖೆ ನಡೆಸುತ್ತಿರುವ ಇಂಡೋನೇಶ್ಯದ ಅಧಿಕಾರಿಗಳು ಸಿದ್ಧಪಡಿಸಿದ ಕರಡು ಪ್ರಾಥಮಿಕ ವರದಿ ಈ ವಿಷಯವನ್ನು ಬಹಿರಂಗಪಡಿಸಿದೆ.

ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ 189 ಮಂದಿ ಮೃತಪಟ್ಟಿದ್ದಾರೆ.

ಸೆನ್ಸರ್‌ಗಳಿಂದ ಬರುತ್ತಿದ್ದ ತಪ್ಪು ಮಾಹಿತಿಗಳಿಂದಾಗಿ ವಿಮಾನದ ಸ್ವಯಂಚಾಲಿತ ವ್ಯವಸ್ಥೆಯು ಮೂತಿಯನ್ನು ಕೆಳಗೆ ತಳ್ಳುತ್ತಿತ್ತೆ ಎಂಬ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

 ಬೋಯಿಂಗ್ ಕಂಪೆನಿಯ ಜನಪ್ರಿಯ 737 ಜೆಟ್‌ಲೈನರ್ ಸರಣಿಯ ನೂತನ ಮಾದರಿಯ ‘ಮ್ಯಾಕ್ಸ್’ ವಿಮಾನವು ಸ್ವಯಂಚಾಲಿತ ವ್ಯವಸ್ಥೆಯೊಂದನ್ನು ಹೊಂದಿದೆ. ವಿಮಾನದ ಮೂತಿಯು ತೀರಾ ಮೇಲಕ್ಕೆ ಚಾಚಿರುವುದನ್ನು ಸೆನ್ಸರ್‌ಗಳು ಪತ್ತೆಹಚ್ಚಿದರೆ ಸ್ವಯಂಚಾಲಿತ ವ್ಯವಸ್ಥೆಯು ಅದನ್ನು ಕೆಳಗೆ ತಳ್ಳುತ್ತದೆ.

ಭಯಾನಕ ಕಣ್ಣಾಮುಚ್ಚಾಲೆ ಆಟ

ಅಲ್ಲೊಂದು ‘ಭಯಾನಕ ಕಣ್ಣಾಮುಚ್ಚಾಲೆ ಆಟ’ವೇ ನಡೆಯುತ್ತಿತ್ತು ಎಂಬುದಾಗಿ ವಾಯುಯಾನ ಮತ್ತು ಉಪಗ್ರಹ ಸಂವಹನ ಪರಿಣತ ಪೀಟರ್ ಲೆಮ್ ತನ್ನ ಬ್ಲಾಗ್‌ನಲ್ಲಿ ಬರೆದಿದ್ದಾರೆ.

 ವಿಮಾನದ ‘ಫ್ಲೈಟ್ ಡಾಟಾ ರೆಕಾರ್ಡರ್’ನಿಂದ ಪಡೆದ ಮಾಹಿತಿಗಳ ವಿಶ್ಲೇಷಣೆ ನಡೆಸಿದ ಬಳಿಕ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ.

ವಿಮಾನದ ಸ್ವಯಂಚಾಲಿತ ವ್ಯವಸ್ಥೆಯು ವಿಮಾನದ ಮೂತಿಯನ್ನು ಕೆಳಗೆ ತಳ್ಳುತ್ತಿತ್ತು. ಆಗ ಪೈಲಟ್‌ಗಳು ಮಧ್ಯಪ್ರವೇಶಿಸಿ ವಿಮಾನದ ಮೂತಿಯನ್ನು ಮೇಲಕ್ಕೆತ್ತುತ್ತಿದ್ದರು. ಆದರೆ, ಐದು ಸೆಕಂಡ್‌ಗಳ ಬಳಿಕ ಮತ್ತೆ ವಿಮಾನದ ಮೂತಿ ಕೆಳಗೆ ವಾಲುತ್ತಿತ್ತು ಹಾಗೂ ಪೈಲಟ್‌ಗಳು ಅದನ್ನು ಮೇಲಕ್ಕೆ ಎತ್ತುತ್ತಿದ್ದರು.

ಹೀಗೆ 26 ಬಾರಿ ಆಗಿತ್ತು. ಆದರೆ, ಏನಾಗುತ್ತಿದೆ ಎನ್ನುವುದು ಪೈಲಟ್‌ಗಳಿಗೆ ತಿಳಿಯಲಿಲ್ಲ. ಹಾಗಾಗಿ, ಸ್ವಯಂಚಾಲಿತ ಸುರಕ್ಷಾ ವ್ಯವಸ್ಥೆಯು ತನ್ನಿಂತಾನೆ ಚಾಲನೆಗೊಳ್ಳುವುದನ್ನು ನಿಲ್ಲಿಸುವಲ್ಲಿ ಅವರು ವಿಫಲರಾದರು ಎಂಬುದಾಗಿ ಲೆಮ್ ಹೇಳಿದ್ದಾರೆ.

ಹಿಂದಿನ ಹಾರಾಟದ ಸಮಸ್ಯೆ ಪೈಲಟ್‌ಗಳಿಗೆ ಗೊತ್ತಿರಲಿಲ್ಲ

ಸೆನ್ಸರ್ ನೀಡುವ ಮಾಹಿತಿಯು ಸರಿಯಾಗಿದೆಯೇ ಎಂಬುದನ್ನು ಪರಿಶೀಲಿಸುವ ಸುಲಭ ವಿಧಾನಗಳು ಲಭ್ಯವಿಲ್ಲದಿರುವುದು ದೊಡ್ಡ ದುರಂತಕ್ಕೆ ಕಾರಣವಾಯಿತು ಎಂಬುದಾಗಿ ವಾಯುಯಾನ ಮತ್ತು ಉಪಗ್ರಹ ಸಂವಹನ ಪರಿಣತ ಪೀಟರ್ ಲೆಮ್ ಹೇಳುತ್ತಾರೆ.

ಅದೂ ಅಲ್ಲದೆ, ಹಿಂದಿನ ಹಾರಾಟಗಳಲ್ಲಿ ಇಂಥದೇ ಸಮಸ್ಯೆಗಳು ತಲೆದೋರಿತ್ತು ಹಾಗೂ ಅದನ್ನು ಸರಿಪಡಿಸಲಾಗಿಲ್ಲ ಎಂಬ ಎಚ್ಚರಿಕೆಯನ್ನು ವಿಮಾನದ ಪೈಲಟ್‌ಗಳಿಗೆ ನೀಡಿರುವಂತೆ ತೋರುತ್ತಿಲ್ಲ ಎಂದು ಅವರು ಹೇಳಿದ್ದಾರೆ.

‘‘ಈ ಸಮಸ್ಯೆಗಳನ್ನು ಸರಿಪಡಿಸಿದ್ದರೆ ವಿಮಾನ ಸಮುದ್ರದಲ್ಲಿ ಪತನಗೊಳ್ಳುತ್ತಿರಲಿಲ್ಲ’’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X