Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. ಭಾರತದೊಂದಿಗೆ ನಾಗರಿಕ ಸಂಬಂಧ ಬೆಳೆಸಲು...

ಭಾರತದೊಂದಿಗೆ ನಾಗರಿಕ ಸಂಬಂಧ ಬೆಳೆಸಲು ಸರಕಾರ, ಸೇನೆ ಉತ್ಸುಕ: ಇಮ್ರಾನ್ ಖಾನ್

ವಾರ್ತಾಭಾರತಿವಾರ್ತಾಭಾರತಿ28 Nov 2018 11:30 PM IST
share
ಭಾರತದೊಂದಿಗೆ ನಾಗರಿಕ ಸಂಬಂಧ ಬೆಳೆಸಲು ಸರಕಾರ, ಸೇನೆ ಉತ್ಸುಕ: ಇಮ್ರಾನ್ ಖಾನ್

ಲಾಹೋರ್, ನ. 28: ಭಾರತದೊಂದಿಗೆ ‘ನಾಗರಿಕ ಸಂಬಂಧ’ವನ್ನು ಬೆಳೆಸಲು ನನ್ನ ಸರಕಾರ ಮತ್ತು ಸೇನೆ ಎರಡೂ ಉತ್ಸುಕವಾಗಿವೆ ಹಾಗೂ ಕಾಶ್ಮೀರ ವಿವಾದವನ್ನು ಮಾತುಕತೆ ಮತ್ತು ಮಾನವತೆಗೆ ನೀಡುವ ಗೌರವದ ಮೂಲಕ ಮಾತ್ರ ಪರಿಹರಿಸಬಹುದಾಗಿದೆ ಎಂದು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಬುಧವಾರ ಹೇಳಿದ್ದಾರೆ.

ಸಿಖ್ ಧರ್ಮದ ಸ್ಥಾಪಕ ಗುರು ನಾನಕ್ ದೇವ್‌ರ ಅಂತಿಮ ವಿಶ್ರಾಂತಿ ಸ್ಥಳವಾದ ಪಾಕಿಸ್ತಾನದ ಕರ್ತಾರ್‌ ಪುರವನ್ನು ಭಾರತದ ಪಂಜಾಬ್ ರಾಜ್ಯದಲ್ಲಿರುವ ಗುರುದಾಸ್‌ಪುರ ಜಿಲ್ಲೆಯಲ್ಲಿರುವ ದೇರಾ ಬಾಬಾ ನಾನಕ್ ದೇವಾಲಯಕ್ಕೆ ಸಂಪರ್ಕಿಸುವ ಕರ್ತಾರ್‌ಪುರ ಕಾರಿಡಾರ್‌ನ ಪಾಕಿಸ್ತಾನದ ಭಾಗಕ್ಕೆ ಅಡಿಗಲ್ಲು ಹಾಕಿ ಅವರು ಮಾತನಾಡುತ್ತಿದ್ದರು.

‘‘ನಾನು ಭಾರತಕ್ಕೆ ಹೋಗುವಾಗಲೆಲ್ಲ, ಪಾಕಿಸ್ತಾನಿ ಸೇನೆ ಶಾಂತಿಯಲ್ಲಿ ಆಸಕ್ತಿ ಹೊಂದಿಲ್ಲ ಎಂದು ಜನರು ನನಗೆ ಹೇಳುತ್ತಿದ್ದರು... ಪ್ರಧಾನಿಯಾಗಿರುವ ನಾನು, ನಮ್ಮ ಪಕ್ಷ, ಇತರ ರಾಜಕೀಯ ಪಕ್ಷಗಳು, ನಮ್ಮ ಸೇನೆ- ಎಲ್ಲರೂ ಭಾರತದ ಜೊತೆಗೆ ನಾಗರಿಕ ಸಂಬಂಧವನ್ನು ಬಯಸುತ್ತೇವೆ ಎನ್ನುವುದನ್ನು ಹೇಳಲು ನಾನು ಇಷ್ಟಪಡುತ್ತೇನೆ’’ ಎಂದು ಪಾಕ್ ಪ್ರಧಾನಿ ಹೇಳಿದರು.

ಎರಡು ದೇಶಗಳ ನಡುವೆ ಹಲವಾರು ವರ್ಷಗಳಿಂದ ವೈರತ್ವವಿದೆಯಾದರೂ, ಸಂಬಂಧಪಟ್ಟ ವ್ಯಕ್ತಿಗಳು ಪ್ರಾಮಾಣಿಕವಾಗಿ ಪ್ರಯತ್ನಿಸಿದರೆ ಶಾಂತಿ ಸ್ಥಾಪನೆಯಾಗಲು ಸಾಧ್ಯವಿದೆ ಎಂದರು.

‘‘70 ವರ್ಷಗಳ ಕಾಲ ನಾವು ಜಗಳವಾಡುತ್ತಿದ್ದೇವೆ. ಇದಕ್ಕೆ ಕಾರಣ ಭಾರತ ಎಂಬುದಾಗಿ ಪಾಕಿಸ್ತಾನ ಹೇಳುತ್ತಿದೆ ಹಾಗೂ ಭಾರತ ಪಾಕಿಸ್ತಾನದತ್ತ ಬೆಟ್ಟು ಮಾಡುತ್ತಿದೆ. ಎರಡು ಕಡೆಗಳಿಂದಲೂ ತಪ್ಪುಗಳು ನಡೆದಿವೆ. ಆದರೆ, ಎಷ್ಟು ಸಮಯ ಹೀಗೆಯೇ ನಾವು ಆರೋಪ-ಪ್ರತ್ಯಾರೋಪಗಳನ್ನು ಮಾಡುತ್ತಾ ಇರಲು ಸಾಧ್ಯ? ಒಂದು ಹೆಜ್ಜೆ ಮುಂದಿಡಲು ನಾವು ಪ್ರಯತ್ನಿಸಿದಾಗಲೆಲ್ಲ, ನಾವು ಎರಡು ಹೆಜ್ಜೆ ಹಿಂದೆ ಇರಿಸುವಂತೆ ಮಾಡುವ ಏನಾದರೂ ಘಟನೆ ಸಂಭವಿಸುತ್ತದೆ’’ ಎಂದು ಇಮ್ರಾನ್ ಹೇಳಿದರು.

ಈ ಕಾರಿಡಾರ್‌ನಲ್ಲಿ ಭರವಸೆ ಇದೆ: ಸಿಧು

‘‘ಈ ಕಾರಿಡಾರ್ ಎರಡು ದೇಶಗಳನ್ನು ಸನಿಹಕ್ಕೆ ತರುವ ಭರವಸೆಯನ್ನು ಹೊಂದಿದೆ’’ ಎಂದು ಪಂಜಾಬ್ ಸಚಿವ ಹಾಗೂ ಮಾಜಿ ಕ್ರಿಕೆಟಿಗ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

ಕರ್ತಾರ್‌ಪುರ ಕಾರಿಡಾರ್‌ನ ಪಾಕಿಸ್ತಾನ ಭಾಗಕ್ಕೆ ಅಡಿಪಾಯ ಹಾಕುವ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.

‘‘ರಕ್ತಪಾತ ನಿಲ್ಲಬೇಕು, ನೋವು ಕೊನೆಗೊಳ್ಳಬೇಕು, ಶಾಂತಿ ಮರಳಬೇಕು... ನಾವು ಇವುಗಳಿಗೆ ದೊಡ್ಡ ಬೆಲೆಯನ್ನು ತೆತ್ತಿದ್ದೇವೆ. ಈ ಬೆಂಕಿಯನ್ನು ಯಾರಾದರೂ ಆರಿಸಬೇಕು. ಈ ಕಾರಿಡಾರ್ ಸಂಪೂರ್ಣ ಭರವಸೆಯನ್ನು ಹೊಂದಿದೆ. ಇದು ಎರಡು ದೇಶಗಳನ್ನು ಹತ್ತಿರಕ್ಕೆ ತರುತ್ತದೆ’’ ಎಂದರು.

ಭಾರತ-ಪಾಕ್ ಯುದ್ಧವನ್ನು ಮೂರ್ಖರು ಮಾತ್ರ ನಿರೀಕ್ಷಿಸಲು ಸಾಧ್ಯ: ಸಿಧು

 ಭಾರತ ಮತ್ತು ಪಾಕಿಸ್ತಾನಗಳಂಥ ಪರಮಾಣು ಶಕ್ತ ದೇಶಗಳ ನಡುವೆ ಯುದ್ಧವನ್ನು ಮೂರ್ಖರು ಮಾತ್ರ ನಿರೀಕ್ಷಿಸಲು ಸಾಧ್ಯ ಎಂದು ನವಜೋತ್ ಸಿಂಗ್ ಸಿಧು ಹೇಳಿದರು.

‘‘ಪರಮಾಣು ಯುದ್ಧದಲ್ಲಿ ಪ್ರತಿಯೊಬ್ಬರೂ ಸೋಲುತ್ತಾರೆ. ದ್ವೇಷದಿಂದ ನಾವು ಏನನ್ನೂ ಸಾಧಿಸುವುದಿಲ್ಲ’’ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X