Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನೋಟು ಅಮಾನ್ಯೀಕರಣವು ವಿತ್ತೀಯ...

ನೋಟು ಅಮಾನ್ಯೀಕರಣವು ವಿತ್ತೀಯ ವ್ಯವಸ್ಥೆಗೆ ನೀಡಿದ ದೊಡ್ಡ ಆಘಾತ: ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯನ್

ವಾರ್ತಾಭಾರತಿವಾರ್ತಾಭಾರತಿ29 Nov 2018 11:28 AM IST
share
ನೋಟು ಅಮಾನ್ಯೀಕರಣವು ವಿತ್ತೀಯ ವ್ಯವಸ್ಥೆಗೆ ನೀಡಿದ ದೊಡ್ಡ  ಆಘಾತ: ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಸುಬ್ರಹ್ಮಣ್ಯನ್

ಹೊಸದಿಲ್ಲಿ, ನ.29: ನೋಟು ರದ್ದತಿ ಕ್ರಮವು ಕಠಿಣ ಹಾಗೂ ಭಾರೀ ಆರ್ಥಿಕ ಆಘಾತವಾಗಿದ್ದು, ಇದರಿಂದ ಶೇ.8ರಷ್ಟಿದ್ದ ಆರ್ಥಿಕ ಅಭಿವೃದ್ಧಿಯ ದರ ಪತನದ ದಾರಿಯಲ್ಲಿ ಸಾಗಿ ಶೇ.6.8ಕ್ಕೆ ಕುಸಿಯುವಂತಾಯಿತು ಎಂದು ಮಾಜಿ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ಅರವಿಂದ್ ಸುಬ್ರಮಣಿಯನ್ ಹೇಳಿದ್ದಾರೆ.

ಇಂತಹ ನಿರ್ಧಾರಗಳನ್ನು ಕೈಗೊಳ್ಳುವಾಗ ಪ್ರಧಾನಿ ಮೋದಿ, ಪ್ರಮುಖವಾಗಿ ಅನೌಪಚಾರಿಕ ಕ್ಷೇತ್ರದಲ್ಲಿ ಜನಹಿತ ಕಾರ್ಯದ ವೆಚ್ಚವು ಗಣನೀಯವಾಗಿದೆ ಎಂಬುದನ್ನು ಹೊರತುಪಡಿಸಿ ಬೇರೆ ಯಾವುದೇ ಪ್ರಬಲ ಪ್ರಾಯೋಗಿಕ ದೃಷ್ಟಿಕೋನವನ್ನು ಹೊಂದಿರಲಿಲ್ಲ ಎಂದವರು ಹೇಳಿದ್ದಾರೆ.

 ‘ಆಫ್ ಕೌನ್ಸೆಲ್: ದಿ ಚಾಲೆಂಜಸ್ ಆಫ್ ದಿ ಮೋದಿ-ಜೇಟ್ಲಿ ಇಕಾನಮಿ’ ಎಂಬ ತನ್ನ ಮುಂಬರುವ ಕೃತಿಯಲ್ಲಿ ಒಂದು ಅಧ್ಯಾಯವನ್ನು ನೋಟು ರದ್ದತಿಯ ಕುರಿತು ಮೀಸಲಿಟ್ಟಿರುವ ಸುಬ್ರಮಣಿಯನ್ , ನೋಟು ರದ್ದತಿ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯ ಸಂದರ್ಭ ತನ್ನೊಡನೆ ಸಮಾಲೋಚಿಸಲಾಗಿದೆಯೇ ಎಂಬ ಪ್ರಶ್ನೆಯ ಕುರಿತು ತನ್ನ ಮೌನವನ್ನು ಮುಂದುವರಿಸಿದ್ದಾರೆ.

 ಒಂದು ಅನಿರೀಕ್ಷಿತ, ಏಕಾಏಕಿ ನಿರ್ಧಾರದ ಮೂಲಕ ಚಲಾವಣೆಯಲ್ಲಿದ್ದ ಶೇ.86ರಷ್ಟು ಕರೆನ್ಸಿಗಳನ್ನು ಹಿಂಪಡೆಯಲಾಯಿತು. ನೋಟು ರದ್ದತಿ ವಾಸ್ತವಿಕ ಜಿಡಿಪಿ ಅಭಿವೃದ್ಧಿಯ ದರದ ಮೇಲೆ ಪರಿಣಾಮ ಬೀರಿತು. ಮೊದಲೇ ನಿಧಾನಗತಿಯಲ್ಲಿದ್ದ ಅಭಿವೃದ್ಧಿಯ ದರ ಮತ್ತಷ್ಟು ಕಡಿಮೆಯಾಗುತ್ತಾ ಹೋಯಿತು. ನೋಟು ರದ್ದತಿಯ ಮೊದಲಿನ ಆರು ತ್ರೈಮಾಸಿಕ ಅವಧಿಗಳಲ್ಲಿ ಅಭಿವೃದ್ಧಿಯ ದರ ಸರಾಸರಿ ಶೇ.8ರಷ್ಟಿತ್ತು. ಬಳಿಕದ ಏಳು ತ್ರೈಮಾಸಿಕ ಅವಧಿಯಲ್ಲಿ ಅಭಿವೃದ್ಧಿಯ ಸರಾಸರಿ ದರ ಶೇ.6.8 ಆಗಿದೆ ಎಂದು ‘ದಿ ಟು ಫಝಲ್ಸ್ ಆಫ್ ಡಿಮಾನಿಟೈಸೇಷನ್-ಪೊಲಿಟಿಕಲ್ ಆ್ಯಂಡ್ ಇಕನಾಮಿಕ್’ ಎಂಬ ಅಧ್ಯಾಯದಲ್ಲಿ ಅವರು ವಿವರಿಸಿದ್ದಾರೆ.

ನೋಟು ರದ್ದತಿಯಿಂದ ಜಿಡಿಪಿ ಅಭಿವೃದ್ಧಿ ದರ ಕುಸಿದಿದೆಯೇ ಎಂಬುದು ಇಲ್ಲಿ ಚರ್ಚೆಯ ವಿಷಯವಲ್ಲ, ಎಷ್ಟು ಪ್ರಮಾಣದಲ್ಲಿ ಕುಸಿದಿದೆ ಎಂಬುದು ಚರ್ಚೆಯ ವಿಷಯವಾಗಿದೆ . ಇದೇ ವೇಳೆ ಅಧಿಕ ಬಡ್ಡಿದರ, ಜಿಎಸ್‌ಟಿ ಅನುಷ್ಠಾನ ಮುಂತಾದ ಕೆಲವು ಉಪಕ್ರಮಗಳೂ ಜಿಡಿಪಿ ಅಭಿವೃದ್ಧಿ ದರದ ಮೇಲೆ ಪ್ರಭಾವ ಬೀರಿವೆ ಎಂದು ಹೇಳಿದ್ದಾರೆ. ನೋಟು ರದ್ದಾದ ಬಳಿಕ ಅನೌಪಚಾರಿಕ ಸಾಲವನ್ನು ಹೆಚ್ಚಿಸುವ ಮೂಲಕ ಉತ್ಪಾದನೆಯನ್ನು ಯಥಾಸ್ಥಿತಿ ಉಳಿಸಿಕೊಳ್ಳಬಹುದು ಎಂದು ಜನತೆ ಭಾವಿಸಿದ್ದರು. ಅಂತಿಮವಾಗಿ ಸ್ವಲ್ಪ ಮಟ್ಟಿಗೆ ನಗದು ವ್ಯವಹಾರದಿಂದ ಡಿಜಿಟಲ್ ಪಾವತಿ ಕ್ರಮಕ್ಕೆ ಜನತೆ ಪರಿವರ್ತನೆಗೊಂಡರು. ನೋಟು ರದ್ದತಿಯಿಂದ ಆಗಿರುವ ಇನ್ನೂ ಕೆಲವು ಪರಿಣಾಮಗಳ ವಿವರಣೆ ನನ್ನ ಕೃತಿಯಲ್ಲಿ ತಪ್ಪಿಹೋಗಿರಬಹುದು ಎಂದು ಹೇಳಿದ್ದಾರೆ.

ಬಡಜನರ ಪಾಡನ್ನು ಗಮನಿಸಿದರೆ, ನನ್ನ ಆಡು ಹೋಯಿತು. ಆದರೆ ಅವರು(ಶ್ರೀಮಂತರು) ಹಲವು ಹಸುಗಳನ್ನು ಕಳೆದುಕೊಂಡರು ಎಂದು ಸಮಾಧಾನ ಪಟ್ಟುಕೊಳ್ಳುವಂತಾಗಿದೆ. ಶ್ರೀಮಂತರು ಅಕ್ರಮವಾಗಿ ಸಂಪಾದಿಸಿದ ಹಣವನ್ನು ಕಳೆದುಕೊಂಡರು ಎಂಬ ಭ್ರಮೆಯಲ್ಲಿ ಬಡಜನತೆ ತಮಗಾದ ಸಂಕಷ್ಟವನ್ನು ಮರೆಯುವಂತಾಗಿದೆ ಎಂದು ಸುಬ್ರಮಣಿಯನ್ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X