Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವಿಗ್ರಹ ಕಳವು ಪ್ರಕರಣ: ಟಿವಿಎಸ್ ಸಮೂಹದ...

ವಿಗ್ರಹ ಕಳವು ಪ್ರಕರಣ: ಟಿವಿಎಸ್ ಸಮೂಹದ ಅಧ್ಯಕ್ಷರಿಗೆ ನಿರೀಕ್ಷಣಾ ಜಾಮೀನು ಮಂಜೂರು

ವಾರ್ತಾಭಾರತಿವಾರ್ತಾಭಾರತಿ29 Nov 2018 10:53 PM IST
share

ಚೆನ್ನೈ, ನ.29: ವಿಗ್ರಹ ಕಳವು ಪ್ರಕರಣವೊಂದರಲ್ಲಿ ಶಂಕಿತ ಆರೋಪಿಯಾಗಿರುವ ಟಿವಿಎಸ್ ಮೋಟರ್ಸ್‌ನ ಅಧ್ಯಕ್ಷ ವೇಣು ಶ್ರೀನಿವಾಸನ್ ಅವರಿಗೆ ಮದ್ರಾಸ್ ಉಚ್ಚ ನ್ಯಾಯಾಲಯವು ಬುಧವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ತಮಿಳುನಾಡಿನ ಮುಖ್ಯ ಶಿಲ್ಪಿ ಎಂ.ಮುತ್ತಯ್ಯ ಹಾಗೂ ಹಿಂದು ಧಾರ್ಮಿಕ ಮತ್ತು ದತ್ತಿಗಳ ಇಲಾಖೆಯ ಮಾಜಿ ಆಯಕ್ತ ಪಿ.ಧನಪಾಲ ಅವರಿಗೂ ನ್ಯಾಯಮೂರ್ತಿ ಗಳಾದ ಆರ್.ಮಹಾದೇವನ್ ಮತ್ತು ಪಿ.ಡಿ.ಆದಿಕೇಶವಲು ಅವರ ವಿಶೇಷ ವಿಭಾಗೀಯ ಪೀಠವು ನಿರೀಕ್ಷಣಾ ಜಾಮೀನುಗಳನ್ನು ಮಂಜೂರು ಮಾಡಿತು. ಆದರೆ ಇಲಾಖೆಯ ಹೆಚ್ಚುವರಿ ಆಯುಕ್ತ ಎನ್.ತಿರುಮಗಳ್ ಅವರು ಪ್ರಕರಣದೊಂದಿಗೆ ನೇರ ಸಂಬಂಧ ಹೊಂದಿದ್ದಾರೆಂದು ಇಲಾಖೆಯ ಮೂವರು ಜಂಟಿ ಆಯುಕ್ತರು ಹೇಳಿಕೆಗಳಲ್ಲಿ ದೃಢೀಕರಿಸಿರುವ ಹಿನ್ನೆಲೆಯಲ್ಲಿ ಅವರಿಗೆ ನಿರೀಕ್ಷಣಾ ಜಾಮೀನು ನೀಡಲು ನ್ಯಾಯಾಲಯವು ನಿರಾಕರಿಸಿತು.

ಪ್ರಕರಣವು ಮೈಲಾಪುರದ ಪ್ರಸಿದ್ಧ ಕಪಿಲೇಶ್ವರ ದೇವಸ್ಥಾನದಿಂದ ಕಾಣೆಯಾಗಿರುವ ಮೂರು ಪ್ರಾಚೀನ ವಿಗ್ರಹಗಳಿಗೆ ಸಂಬಂಧಿಸಿದೆ.

ರಾಹು,ಕೇತು ಮತ್ತು ನವಿಲು ಅಮ್ಮನ್ ವಿಗ್ರಹಗಳು ದೇವಸ್ಥಾನದಿಂದ ಕಾಣೆಯಾಗಿವೆ ಎಂದು ಆರೋಪಿಸಿ ಭಕ್ತರೋರ್ವರು ಸಲ್ಲಿಸಿದ್ದ ದೂರಿನ ಮೇರೆಗೆ ಸಿಐಡಿಯ ವಿಗ್ರಹ ಘಟಕವು ಶ್ರೀನಿವಾಸನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿತ್ತು. ಆರೋಪಿಗಳು ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿಗಳನ್ನು ಸಲ್ಲಿಸಿದ್ದರು.2004ರಲ್ಲಿ ದೇವಸ್ಥಾನದಲ್ಲಿ ಕುಂಭಾಭಿಷೇಕ ನಡೆದ ಸಂದರ್ಭದಲ್ಲಿ ಈ ವಿಗ್ರಹಗಳು ಕಾಣೆಯಾಗಿದ್ದವು.

ತಿರುಮಗಳ್ ಅವರು ಪ್ರಾಚೀನ ವಿಗ್ರಹಗಳಿದ್ದ ಜಾಗದಲ್ಲಿ ಹೊಸ ವಿಗ್ರಹಗಳನ್ನಿರಿಸುತ್ತಿದ್ದನ್ನು ಅರ್ಚಕರು ನೋಡಿದ್ದರು ಮತ್ತು ಅವುಗಳಿಗೆ ಪೂಜೆ ಮಾಡಲು ನಿರಾಕರಿಸಿದ್ದರು ಎಂದೂ ನ್ಯಾಯಾಲಯವು ಅವರ ಅರ್ಜಿಯ ನಿರಾಕರಣೆ ವೇಳೆ ತಿಳಿಸಿತು.

ಇತರ ಮೂವರಿಗೆ ಜಾಮೀನು ನೀಡಿಕೆಯನ್ನು ವಿರೋಧಿಸಿದ ಪೊಲೀಸರು, ವಿಚಾರಣೆ ವೇಳೆ ಈ ಮೂವರು ವಿಗ್ರಹಗಳ ನಾಪತ್ತೆಯಲ್ಲಿ ಭಾಗಿಯಾಗಿರುವುದಕ್ಕೆ ತಿರುಮಗಳ್ ಸಾಕ್ಷಗಳನ್ನು ಒದಗಿಸಿದರೆ ಇವರನ್ನು ಬಂಧಿಸುವುದು ಕಷ್ಟವಾಗಲಿದೆ ಎಂದು ಹೇಳಿದಾಗ ನ್ಯಾಯಾಲಯವು,ಅಂತಹ ಸ್ಥಿತಿಯಲ್ಲಿ ಜಾಮೀನು ರದ್ದುಗೊಳಿಸುವಂತೆ ಕೋರಲು ಪೊಲೀಸರು ಸ್ವತಂತ್ರರಿದ್ದಾರೆ ಎಂದು ಭರವಸೆ ನೀಡಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X