Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಅಸತ್ಯವನ್ನು ಬರೆದು ಜನತೆ-ಸರಕಾರದ ಮಧ್ಯೆ...

ಅಸತ್ಯವನ್ನು ಬರೆದು ಜನತೆ-ಸರಕಾರದ ಮಧ್ಯೆ ಕಂದಕ ಸೃಷ್ಟಿಸಬೇಡಿ: ಪತ್ರಕರ್ತರಿಗೆ ಕುಮಾರಸ್ವಾಮಿ ಮನವಿ

ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭ

ವಾರ್ತಾಭಾರತಿವಾರ್ತಾಭಾರತಿ29 Nov 2018 11:24 PM IST
share
ಅಸತ್ಯವನ್ನು ಬರೆದು ಜನತೆ-ಸರಕಾರದ ಮಧ್ಯೆ ಕಂದಕ ಸೃಷ್ಟಿಸಬೇಡಿ: ಪತ್ರಕರ್ತರಿಗೆ ಕುಮಾರಸ್ವಾಮಿ ಮನವಿ

ಬೆಂಗಳೂರು, ನ.29: ವಾಸ್ತವಾಂಶ ಬರೆಯುವುದು ಪತ್ರಕರ್ತರ ಹಕ್ಕು, ಅಸತ್ಯವಾದದ್ದನ್ನು ಬರೆಯುವ ಮೂಲಕ ಜನತೆ ಹಾಗೂ ಸರಕಾರ ಮಧ್ಯೆ ಕಂದಕವನ್ನು ಸೃಷ್ಟಿ ಮಾಡಬೇಡಿ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಗುರುವಾರ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಏರ್ಪಡಿಸಿದ್ದ, ರಾಜ್ಯೋತ್ಸವ ಪ್ರಶಸ್ತಿ ಸಮಾರಂಭದಲ್ಲಿ ನಾಡಿನ 63 ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಪತ್ರಕರ್ತರು ಸರಕಾರ ಹಾಗೂ ಜನತೆಯ ಕೊಂಡಿಯಾಗುವ ಮೂಲಕ ಸತ್ಯಾಂಶಗಳನ್ನು ಜನತೆಗೆ ತಿಳಿಸಬೇಕು. ಅದು ನಿಮ್ಮ ಹಕ್ಕು, ಯಾರೂ ಅದನ್ನು ತಡೆಯುವುದಿಲ್ಲ. ಆದರೆ, ಜನತೆಯಲ್ಲಿ ಸರಕಾರದ ಬಗ್ಗೆ ಅಪನಂಬಿಕೆ ಮೂಡಿಸಬೇಡಿ ಎಂದು ಹೇಳಿದರು.

ಮೈತ್ರಿ ಸರಕಾರ ಹೊಸ ಚಿಂತನೆಗಳನ್ನು ಇಟ್ಟುಕೊಂಡು ರಚನೆಯಾಗಿದ್ದು, ಸರಕಾರ ಯಾವುದೇ ಒಂದು ಪ್ರದೇಶಕ್ಕೆ ಸೀಮಿತವಾಗಿಲ್ಲ. ರಾಜ್ಯದ ಎಲ್ಲ ಕ್ಷೇತ್ರಗಳಿಗೂ ಸಮಾನ ಮಾನ್ಯತೆಯನ್ನು ನೀಡಲಾಗುತ್ತಿದೆ. ಸರಕಾರದ ಬಗ್ಗೆ ಜನತೆಯಲ್ಲಿ ಅಸಮಾಧಾನವಿಲ್ಲ. ರಾಜ್ಯದ ಜನತೆ ಒಂದು ಕುಟುಂಬದಂತೆ ಇದ್ದು, ಅಭಿವೃದ್ಧಿಗೆ ಪೂರಕವಾಗಿ ಆಶೀರ್ವಾದ ಮಾಡಿದ್ದಾರೆ ಎಂದು ತಿಳಿಸಿದರು.

ಸರಕಾರ ಎಲ್ಲ ವರ್ಗದವರನ್ನು ಗೌರವಿಸುತ್ತದೆ. ಯಾವುದೇ ಜಾತಿ, ಮತ, ವರ್ಗಕ್ಕೆ ಪ್ರಶಸ್ತಿ ನೀಡದೆ, ತಾರತಮ್ಯ ಮಾಡದೆ ಎಲ್ಲ ಜಿಲ್ಲೆಯವರಿಗೂ ಪ್ರಶಸ್ತಿ ನೀಡುವಂತೆ ಸಲಹೆ ಮಾಡಿದೆ. ಅಲ್ಲದೆ, ನಾಡಿಗೆ ಸೇವೆ ಸಲ್ಲಿಸಿದವರನ್ನು ಆಯ್ಕೆ ಮಾಡುವುದು ಕಠಿಣ. ಪ್ರಶಸ್ತಿ ಆಯ್ಕೆಯಲ್ಲಿ ಎಲ್ಲ ಗೊಂದಲಗಳನ್ನು ನಿವಾರಿಸಿದ ಡಿ.ಕೆ. ಶಿವಕುಮಾರ್‌ರವರಿಗೆ ಅಭಿನಂದನೆ ತಿಳಿಸಿದರು.

ರಾಜ್ಯಮಟ್ಟ ಹಾಗೂ ರಾಷ್ಟ್ರಮಟ್ಟದಲ್ಲಿ ನಾಡಿನ ಖ್ಯಾತಿಗೆ ಭಾಜನರಾಗಿರುವ ಹಾಗೂ ಗ್ರಾಮೀಣ ಕಲೆ, ಸಮಾಜ ಸೇವೆ, ರಂಗಭೂಮಿ, ಪತ್ರಿಕಾರಂಗ, ವೈದ್ಯಕೀಯ ಸೇರಿದಂತೆ ಅನೇಕ ಕ್ಷೇತ್ರಗಳ ಸಾಧಕರಿಗೆ ನಮ್ಮ ಸರಕಾರದಿಂದ ಪ್ರಶಸ್ತಿ ನೀಡುತ್ತಿರುವುದು ತುಂಬಾ ಪ್ರಶಂಸನೀಯ. ಪ್ರಶಸ್ತಿ ದೊರೆಯದೆ ಇರುವ ಸಾಧಕರಿಗೆ ಮುಂದಿನ ವರ್ಷ ಪ್ರಶಸ್ತಿ ಸಿಗಲಿ ಎಂದು ಹಾರೈಸಿದರು.

ಕನ್ನಡ ಮತ್ತು ಸಂಸ್ಕೃತಿ ಸಚಿವೆ ಜಯಮಾಲ ಮಾತನಾಡಿ, ಬಸವಣ್ಣ, ಕುವೆಂಪು, ಸಂತ ಶಿಶುನಾಳ ಷರೀಪ್, ಕಿಟ್ಟೆಲ್ ರವರು ಸೇರಿದಂತೆ ಅನೇಕ ಗಣ್ಯರು ಕನ್ನಡ ಕಟ್ಟಿ ಬೆಳೆಸಿದ್ದಾರೆ. ಕಲೆಯಲ್ಲಿ ಅನೇಕ ಪ್ರಕಾರಗಳಿವೆ. ಹಾಗಾಗಿ ಎಲ್ಲರನ್ನೂ ಆಯ್ಕೆ ಮಾಡಲು ಸಾಧ್ಯವಾಗಿಲ್ಲ. ಕೇವಲ 63 ರತ್ನಗಳು ಇಲ್ಲಿವೆ. ಸಾವಿರಾರು ಪತ್ರಗಳು ಆಯ್ಕೆ ಸಮಿತಿಗೆ ಬಂದರೂ, ಶ್ರೇಷ್ಠ ಸಾಧಕರನ್ನೇ ಗುರುತಿಸಿರುವುದು ಹೆಗ್ಗಳಿಕೆಯಾಗಿದೆ. ಅಲ್ಲದೆ, ಡಿ.ಕೆ. ಶಿವಕುಮಾರ್ ಕೃಷ್ಣ ಪರಮಾತ್ಮ ಇದ್ದಂತೆ, ಅವರು ಸಮಿತಿಯ ಬೆಂಬಲಕ್ಕೆ ಇರುತ್ತಾರೆ ಎಂದು ಸಿಎಂ ಕುಮಾರಸ್ವಾಮಿ ಹೇಳಿದ್ದರು ಎಂದರು.

ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಮಾತನಾಡಿ, ಪ್ರಶಸ್ತಿಯ ಆಯ್ಕೆಯಲ್ಲಿ ಅನೇಕ ಒತ್ತಡ ಇರುತ್ತೆ. ಎಲ್ಲ ರಂಗದಲ್ಲೂ ಅನೇಕ ಸಾಧಕರಿರುತ್ತಾರೆ. ಆಯ್ಕೆ ಮಾಡುವುದು ಸುಲಭವಲ್ಲ. ಆಯ್ಕೆಯ ಸಂದರ್ಭದಲ್ಲಿ ಅನೇಕರನ್ನು ವೈರಿಗಳನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಲ್ಲದೆ, ಮುಖ್ಯಮಂತ್ರಿ ಕುಮಾರಸ್ವಾಮಿಯವರು ಯಾವುದೇ ಹೆಸರನ್ನೂ ಸೂಚಿಸದೆ ಪ್ರಶಸ್ತಿ ಆಯ್ಕೆ ಮಾಡಲು ತಿಳಿಸಿದರು ಎಂದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 25ರಿಂದ 103 ವಯೋಮಾನದ 63 ಸಾಧಕರಿಗೆ ಪ್ರಶಸ್ತಿಯನ್ನು ನೀಡಲಾಯಿತು. ಪ್ರಶಸ್ತಿಯು 1ಲಕ್ಷ ನಗದು, 25 ಗ್ರಾಂ ಚಿನ್ನದ ಪದಕವನ್ನು ಒಳಗೊಂಡಿತ್ತು.

ರಾಜ್ಯೋತ್ಸವ ಪ್ರಶಸ್ತಿಯನ್ನು ಹಂಬಲ ಎಂದು ತಿಳಿಯಬೇಡಿ, ತಾಯಿ ನೆಲಕ್ಕೆ ಸಲ್ಲಿಸಿದ ಸೇವೆಗಾಗಿ ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಲಾಗುತ್ತಿದ್ದು, ಸಾಧಕರನ್ನು ತನ್ನ ನೆಲದಲ್ಲೇ ಗುರುತಿಸುವುದು ಸರ್ವಶ್ರೇಷ್ಠ.

-ಜಯಮಾಲ, ಕನ್ನಡ ಮತ್ತು ಸಂಸ್ಕೃತಿ ಸಚಿವೆ

ಎಲ್ಲ ಕ್ಷೇತ್ರದವರಿಗೂ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. ಪ್ರತಿಯೊಬ್ಬರೂ ತಮ್ಮದೇ ಕ್ಷೇತ್ರದಲ್ಲಿ ಕಾಯ-ವಾಚಾ-ಮನಸಾ ಕರ್ತವ್ಯ ಮಾಡಿದ್ದೇವೆ.

-ಜಿ.ಎನ್.ರಂಗನಾಥ್‌ರಾವ್, ಹಿರಿಯ ಪತ್ರಕರ್ತರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X