Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಇದು ನನ್ನ ಬದುಕಿನ ಕರಾಳ ದಿನ: ಮಿಥಾಲಿ...

ಇದು ನನ್ನ ಬದುಕಿನ ಕರಾಳ ದಿನ: ಮಿಥಾಲಿ ರಾಜ್

ವಾರ್ತಾಭಾರತಿವಾರ್ತಾಭಾರತಿ29 Nov 2018 11:42 PM IST
share
ಇದು ನನ್ನ ಬದುಕಿನ ಕರಾಳ ದಿನ: ಮಿಥಾಲಿ ರಾಜ್

ಹೊಸದಿಲ್ಲಿ, ನ.29: ಕೋಚ್ ರಮೇಶ್ ಪೊವಾರ್ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಭಾರತದ ವನಿತೆಯರ ಏಕದಿನ ತಂಡದ ನಾಯಕಿ ಮಿಥಾಲಿ ರಾಜ್ ಅವರು ಇದು ನನ್ನ ಬದುಕಿನ ಕರಾಳ ದಿನವಾಗಿದೆ ಎಂದು ಹೇಳಿದ್ದಾರೆ.

 ‘‘ನನ್ನ ವಿರುದ್ಧ ಮಾಡಿರುವ ಆರೋಪಗಳಿಂದ ಅತೀವ ನೋವುಂಟಾಗಿದ್ದು, ದೇಶಕ್ಕಾಗಿ ಎರಡು ದಶಕಗಳ ಕಾಲ ಕ್ರಿಕೆಟ್ ಆಡಿರುವುದು , ನನ್ನ ಬದ್ಧತೆ ಎಲ್ಲವೂ ವ್ಯರ್ಥವಾಗಿದೆ ’’ಎಂದು ಮಿಥಾಲಿ ರಾಜ್ ಟ್ವೀಟ್ ಮಾಡಿದ್ದಾರೆ.

‘‘ ಇಂದು ನನ್ನ ಕೊಡುಗೆಯನ್ನು , ಕೌಶಲ್ಯವನ್ನು , ದೇಶಭಕ್ತಿಯನ್ನು ಸಂಶಯದಿಂದ ನೋಡಲಾಗುತ್ತಿದೆ . ನನಗೆ ಎದುರಾಗಿರುವ ಕಷ್ಟಗಳನ್ನು ಎದುರಿಸಲು ದೇವರು ಶಕ್ತಿ ನೀಡಲಿ’’ ಎಂದು ಮಿಥಾಲಿ ಹೇಳಿದ್ದಾರೆ.

ಕೋಚ್ ಪೊವಾರ್ ಬುಧವಾರ ಬಿಸಿಸಿಐ ಪ್ರಧಾನ ಕಚೇರಿಯಲ್ಲಿ ಬಿಸಿಸಿಐ ಸಿಇಒ ರಾಹುಲ್ ಜೊಹ್ರಿ ಮತ್ತು ಕಾರ್ಯಾಚರಣೆಯ ಜನರಲ್ ಮ್ಯಾನೇಜರ್ ಸಾಬಾ ಕರೀಂ ಅವರನ್ನು ಭೇಟಿಯಾಗಿ 10 ಪುಟಗಳ ಪ್ರವಾಸ ವರದಿಯನ್ನು ಒಪ್ಪಿಸಿದ್ದರು. ಮಿಥಾಲಿ ರಾಜ್ ವಿರುದ್ಧ ಪೊವಾರ್ ನಾನಾ ಆರೋಪ ಮಾಡಿದ್ದರು. ಉದಾಸೀನ ಪ್ರವೃತ್ತಿಯ ಮಿಥಾಲಿ ರಾಜ್ ಸ್ವಹಿತಾಸಕ್ತಿ ಕಡೆಗೆ ಗಮನ ನೀಡುತ್ತಿದ್ದಾರೆ. ತಂಡದ ಹಿತ ಅವರಿಗೆ ಮುಖ್ಯವಲ್ಲ ಎಂದು ಆರೋಪ ಮಾಡಿದ್ದರು. ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೂ ಮೊದಲು ಮಿಥಾಲಿ ರಾಜ್ ಅವರಲ್ಲಿ ಕೇಳಿಯೇ ಬ್ಯಾಟಿಂಗ್ ಕ್ರಮಾಂಕವನ್ನು ಬದಲಾವಣೆ ಮಾಡಲಾಗಿತ್ತು. ಆದರೆ ಬಳಿಕ ಇದರಿಂದ ಅಸಮಾಧಾನಗೊಂಡು ನಿವೃತ್ತಿಯ ಬೆದರಿಕೆ ಹಾಕಿದ್ದರು. ಗಂಟುಮೂಟೆ ಕಟ್ಟಿಕೊಂಡು ತವರಿಗೆ ತೆರಳಲು ತಯಾರಿ ನಡೆಸಿದ್ದರು. ಈ ವಿಚಾರವನ್ನು ವೀಡಿಯೊ ವಿಶ್ಲೇಷಕರಾದ ಪುಷ್ಕರ್ ಸಾವಂತ್ ತಮಗೆ ತಿಳಿಸಿರುವುದಾಗಿ ಪೊವಾರ್ ವರದಿಯಲ್ಲಿ ವಿವರಿಸಿದ್ದಾರೆ.

35ರ ಹರೆಯದ ಮಿಥಾಲ್ ರಾಜ್ ಅವರನ್ನು ಇಂಗ್ಲೆಂಡ್ ವಿರುದ್ಧದ ಸೆಮಿಫೈನಲ್ ಪಂದ್ಯಕ್ಕೆ ಅಂತಿಮ ಹನ್ನೊಂದರ ಬಳಗದಿಂದ ಕೈ ಬಿಡಲಾಗಿತ್ತು. ಭಾರತ ಈ ಪಂದ್ಯದಲ್ಲಿ 8 ವಿಕೆಟ್‌ಗಳ ಸೋಲು ಅನುಭವಿಸುವುದರೊಂದಿಗೆ ವಿಶ್ವಕಪ್ ಅಭಿಯಾನವನ್ನು ಕೊನೆಗೊಳಿಸಿತ್ತು. ಮಿಥಾಲ್ ರಾಜ್ ಕೈ ಬಿಟ್ಟಿರುವ ವಿಚಾರ ಸಂಶಯಕ್ಕೆ ಕಾರಣವಾಗಿತ್ತು.

ಮಿಥಾಲಿರಾಜ್ ಈ ವಿಚಾರದಲ್ಲಿ ಕೋಚ್ ರಮೇಶ್ ಪೊವಾರ್ ವಿರುದ್ಧ ವಾಗ್ದಾಳಿ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X