Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಾರ್ತಾಭಾರತಿ ವಿಶೇಷ
  3. ಕೃತಿ ಪರಿಚಯ
  4. ನುಡಿಗಳ ಅಳಿವು ಉಳಿವುಗಳ ಕುರಿತಂತೆ.....

ನುಡಿಗಳ ಅಳಿವು ಉಳಿವುಗಳ ಕುರಿತಂತೆ.....

ಈ ಹೊತ್ತಿನ ಹೊತ್ತಿಗೆ

-ಕಾರುಣ್ಯ-ಕಾರುಣ್ಯ30 Nov 2018 12:00 AM IST
share
ನುಡಿಗಳ ಅಳಿವು ಉಳಿವುಗಳ ಕುರಿತಂತೆ.....

 ಕನ್ನಡ ಅರಿವಿನ ಲೋಕದಲ್ಲಿ ಕೆವಿಎನ್ ಎಂದೇ ಹೆಸರುವಾಸಿಯಾಗಿರುವ ಪ್ರೊ. ಕೆವಿ. ನಾರಾಯಣ ಅವರು ಕನ್ನಡದ ಮಹತ್ವದ ಚಿಂತಕರು. ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಅಧ್ಯಕ್ಷರಾಗಿ ಕೆವಿಎನ್ ಅವರು ಅನುವಾದವೆಂಬ ಕ್ರಿಯೆಯನ್ನು ಕೇವಲ ಎರಡು ನುಡಿಗಳ ನಡುವಿನ ಒಂದು ತರ್ಜುಮೆಯ ಚಟುವಟಿಕೆಯನ್ನಾಗಿ ನೋಡದೆ, ಅದನ್ನೊಂದು ಸಾಂಸ್ಕೃತಿಕ ಗ್ರಹಿಕೆಯಾಗಿ ಹಾಗೂ ಬಹುಶಿಸ್ತೀಯ ಜ್ಞಾನ ಮೀಮಾಂಸೆಯನ್ನಾಗಿ ಅರಿಯುವುದಕ್ಕೆ ಬೇಕಾಗಿರುವ ರಚನಾತ್ಮಕ ಕಾರ್ಯ ಯೋಜನೆಗಳನ್ನು ಹಮ್ಮಿಕೊಂಡರು. ಈ ನುಡಿಯ ಅಳಿವು ಉಳಿಯುವಿನ ಹಿಂದಿನ ಸಾಂಸ್ಕೃತಿಕ ಪಲ್ಲಟಗಳನ್ನು ಅವರು ಗುರುತಿಸಿದ್ದಾರೆ. ನುಡಿಯ ಕುರಿತ ಅವರ ಸುದೀರ್ಘ ಕುತೂಹಲದ ಭಾಗವಾಗಿದೆ ‘ನುಡಿಗಳ ಅಳಿವು-ಬೇರೆ ದಿಕ್ಕಿನ ನೋಟ’ ಕೃತಿ. ಲೇಖಕರೇ ಹೇಳುವಂತೆ ನುಡಿಗಳ ಅಳಿವನ್ನು ತಮ್ಮ ಕಾಳಜಿಯನ್ನಾಗಿ ಮಾಡಿಕೊಂಡಿರುವ ಎಲ್ಲರನ್ನೂ ಓದುಗರನ್ನಾಗಿ ಒಳಗೊಳ್ಳಲೆಂದು ಇದನ್ನು ಬರೆಯಲಾಗಿದೆ. ಈ ಪುಟ್ಟ ಕೃತಿ ವಾಗ್ವಾದವನ್ನು ಗುರಿಯಾಗಿರಿಸಿಕೊಂಡು ಬರೆಯಲ್ಪಟ್ಟಿದೆ. ಕನ್ನಡ ಭಾಷೆಯೂ ಸೇರಿದಂತೆ ಪ್ರಾದೇಶಿಕ ನುಡಿಗಳ ಅಳಿವು ಚರ್ಚೆಗೊಳಗಾಗುತ್ತಿರುವ ದಿನಗಳಲ್ಲಿ, ಈ ಪುಟ್ಟ ಕೃತಿ ಅದನ್ನು ಶಾಸ್ತ್ರೀಯವಾಗಿ ಅಧ್ಯಯನ ಮಾಡುತ್ತದೆ. ನುಡಿ ಎಂದರೆ ಏನು ಎನ್ನುವುದರಿಂದ ಹಿಡಿದು, ಅದರ ಉಳಿವಿನ ಅಗತ್ಯ ಮತ್ತು ಉಳಿವಿನ ದಾರಿಯ ಕುರಿತಂತೆಯೂ ಚಿಂತಿಸುತ್ತದೆ.
ನುಡಿಗಳು ಅಳಿಯುವ ಪ್ರಕ್ರಿಯೆಯನ್ನು ಈ ಬರಹ ಅಲ್ಲಗಳೆಯುವುದಿಲ್ಲ. ಆದರೆ ನುಡಿಗಳ ಅಳಿವನ್ನು ಒಟ್ಟು ಮಾನವ ವ್ಯಾಪಾರದಿಂದ ಬೇರೆಯಾಗಿಸಿ ನೋಡುವುದನ್ನು ಒಪ್ಪುವುದಿಲ್ಲ. ನುಡಿಗಳನ್ನು ಆಡುವವರನ್ನು ಮತ್ತು ನುಡಿಗಳನ್ನು ಬೇರೆ ಬೇರೆಯಾಗಿರಿಸಿ ಕೇವಲ ನುಡಿಗಳನ್ನು ಕಾಪಿಡುವ ಯೋಜನೆಗಳನ್ನು ರೂಪಿಸುವ ಯೋಜನೆಗಳ ಕೊರತೆಗಳನ್ನು ಗುರುತಿಸುವುದು ಅಗತ್ಯ ಎಂದು ಕೃತಿ ಅಭಿಪ್ರಾಯಪಡುತ್ತದೆ.
ನುಡಿಗಳ ವ್ಯಾಪಾರ ಕೇವಲ ಮಾತನಾಡುವವರ ಸಂಖ್ಯೆ ಕಡಿಮೆಯಾಗುತ್ತಿರುವ ನುಡಿಗಳಿಗೆ ಮಾತ್ರ ಸಂಬಂಧಪಟ್ಟಿರುವುದಿಲ್ಲ. ಅದೊಂದು ಸಂಕೀರ್ಣವಾದ ಜಗತ್ತು. ಇದರಲ್ಲಿ ಹಲವು ಬಗೆಯ ಪರಸ್ಪರ ಪೂರಕ ಸಂಗತಿಗಳಿರುತ್ತವೆ. ಒಂದಕ್ಕೊಂದು ವಿರೋಧವೆನಿಸುವ ಸಂಗತಿಗಳೂ ಇರುತ್ತವೆ. ಇವೆಲ್ಲವನ್ನು ಒಟ್ಟಿಗಿರಿಸಿ ನೋಡಬೇಕಾಗಿದೆ ಎಂದು ಲೇಖಕರು ಬಯಸುತ್ತಾರೆ.
ಅಹರ್ನಿಶಿ ಪ್ರಕಾಶನ ಹೊರತಂದಿರುವ ಕೃತಿಯ ಒಟ್ಟು ಪುಟಗಳು 88. ಮುಖಬೆಲೆ 100 ರೂಪಾಯಿ. ಆಸಕ್ತರು 94491 74662 ದೂರವಾಣಿಯನ್ನು ಸಂಪರ್ಕಿಸಬಹುದು.

share
-ಕಾರುಣ್ಯ
-ಕಾರುಣ್ಯ
Next Story
X