Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ‘ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ...

‘ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಪ್ರೊ.ಷ.ಷಟ್ಟರ್ ಆಯ್ಕೆ: ಡಾ.ವಸುಂಧರಾ ಭೂಪತಿ

ವಾರ್ತಾಭಾರತಿವಾರ್ತಾಭಾರತಿ30 Nov 2018 10:03 PM IST
share
‘ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ’ಗೆ ಪ್ರೊ.ಷ.ಷಟ್ಟರ್ ಆಯ್ಕೆ: ಡಾ.ವಸುಂಧರಾ ಭೂಪತಿ

ಬೆಂಗಳೂರು, ನ. 30: ಅತ್ಯುತ್ತಮ ಪ್ರಕಾಶನ-ವಿದ್ಯಾನಿಧಿ ಪ್ರಕಾಶನ-ಗದಗ, ಡಾ. ಎಂ.ಎಂ.ಕಲಬುರ್ಗಿ ಮಾನವಿಕ ಅಧ್ಯಯನ ಪ್ರಶಸ್ತಿ-ಪ್ರೊ.ಷ.ಷಟ್ಟರ್, ಡಾ.ಜಿ.ಪಿ. ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ-ನ.ರವಿಕುಮಾರ್ ಹಾಗೂ ಡಾ.ಅನುಪಮಾ ನಿರಂಜನ ವೈದ್ಯಕೀಯ ಸಾಹಿತ್ಯ ಪ್ರಶಸ್ತಿ-ಡಾ.ಎಚ್.ಗಿರಿಜಮ್ಮ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷೆ ಡಾ.ವಸುಂಧರಾ ಭೂಪತಿ ತಿಳಿಸಿದ್ದಾರೆ.

ಶುಕ್ರವಾರ ಕನ್ನಡ ಭವನದಲ್ಲಿನ ಪ್ರಾಧಿಕಾರದ ಕಚೇರಿಯಲ್ಲಿ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇಲ್ಕಂಡ ಪ್ರಶಸ್ತಿಗಳು ಕ್ರಮವಾಗಿ 1ಲಕ್ಷ ರೂ., 75 ಸಾವಿರ ರೂ., 50 ಸಾವಿರ ರೂ. ಹಾಗೂ 25ಸಾವಿರ ರೂ.ನಗದು ಪುರಸ್ಕಾರ ಒಳಗೊಂಡಿದೆ ಎಂದು ಹೇಳಿದರು.

ಪುಸ್ತಕ ಸೊಗಸು: ‘ಕರುನಾಡ ಕೋಟೆಗಳ ಸುವರ್ಣ ನೋಟ’ ಸಂ: ವಿಶ್ವನಾಥ ಸುವರ್ಣ ಸುವರ್ಣ ಪಬ್ಲಿಕೇಷನ್, ಬೆಂಗಳೂರು ಮೊದಲ ಬಹುಮಾನ-25 ಸಾವಿರ ರೂ., ‘ಯುಗಪುರುಷ ಮಹಾವೀರ ಮಹಾರಾಣಾ ಪ್ರತಾಪ್’ ಲೇ: ಡಾ.ಎನ್.ಗುರುಮೂರ್ತಿ, ಭವತಾರಿಣಿ ಪ್ರಕಾಶನ-ಬೆಂಗಳೂರು-ಎರಡನೆ ಬಹುಮಾನ 20 ಸಾವಿರ ರೂ., ‘ಬಾಬಾ ಸಾಹೇಬರೆಡೆಗೆ ಖರ್ಗೆ ಜೀವನ ಕಥನ’ ಲೇ: ಪ್ರೊ.ಎಚ್.ಟಿ. ಪೋತೆ-ಸಿವಿಜಿ ಬುಕ್ಸ್ ಬೆಂಗಳೂರು-ಮೂರನೆ ಬಹುಮಾನ-10ಸಾವಿರ ರೂ.ಗಳು ಎಂದರು.

ಮಕ್ಕಳ ಪುಸ್ತಕ ಸೊಗಸು: ‘ಪುಟ್ಟಿಯ ಗಿರಗಟ್ಟೆ’ ಲೇ: ಬಾಗೂರು ಮಾರ್ಕಂಡೇಯ, ಎಸ್‌ಎಲ್ಎನ್ ಪಬ್ಲಿಕೇಷನ್ ಬೆಂಗಳೂರು 8 ಸಾವಿರ ರೂ., ಮುಖಪುಟ ಚಿತ್ರ ವಿನ್ಯಾಸಕ್ಕೆ ‘ಕರಿ ಕಣಗಿಲ’ ಕೃತಿ, ಇ.ಮೂ.ಲೇ: ಕೆ.ಪುರುಷೋತ್ತಮ ಅನುವಾದ: ಡಾ. ಎಚ್.ಎಸ್.ಅನುಪಮಾ, ಬಹುಮಾನಿತ ಕಲಾವಿದರು ಅರುಣ್‌ಕುಮಾರ ಜಿ., ಕೃಷ್ಣ ಗಿಳಿಯಾರ್-10 ಸಾವಿರ ರೂ.

ಕೃತಿ ‘ಹಲಗೆ ಮತ್ತು ಮೆದುಬೆರಳು’ ಲೇ: ಕಾದಂಬಿನಿ ಬಹುಮಾನಿತ ಕಲಾವಿದ- ಗಿರಿಧರ ಕಾರ್ಕಳ-8 ಸಾವಿರ ರೂ., ‘ವಚನ ಮಾರ್ಗ’ ಪ್ರ.ಸಂ.: ಡಾ.ಶಿವಮೂರ್ತಿ ಮುರುಘಾ ಶರಣರು ಮುದ್ರಣಾಲಯ: ಸ್ವ್ಯಾನ್ ಪ್ರಿಂಟರ್ಸ್‌, ಬೆಂಗಳೂರು-5 ಸಾವಿರ ರೂ.ನಗದು ಬಹುಮಾನ ನೀಡಲಾಗುವುದು ಎಂದು ತಿಳಿಸಿದರು.

ಚೊಚ್ಚಲ ಕೃತಿಗೆ ಪ್ರೋತ್ಸಾಹ: 2017ನೆ ಸಾಲಿನ ಯುವ ಬರಹಗಾರರ ಚೊಚ್ಚಲ ಕೃತಿ ಪ್ರೋತ್ಸಾಹಧನಕ್ಕೆ ಒಟ್ಟು 136 ಹಸ್ತಪ್ರತಿಗಳು ಬಂದಿದ್ದು, ಆ ಪೈಕಿ ‘ಮೊದಲ ಮೊಗ್ಗು’ರಜನಿ ರೆಡ್ಡಿ-ರಾಯಚೂರು, ‘ಮೌನ ಮಾತಾಡಿದಾಗ’ ಮಮತಾ ಡಿ.ಎಲ್. ಚಾಮರಾಜನಗರ, ‘ಒಲವಿನೊರತೆ’ -ವಿದ್ಯಾಧರ ಎಪಿಎಮ್-ದಾವಣಗೆರೆ, ‘ಡಾ.ಬಂಜಗೆರೆ ಜಯಪ್ರಕಾಶ್ ಅವರ ಕಾವ್ಯ ವಿಮರ್ಶೆ’ ನಾಗೇಂದ್ರಪ್ಪ ಶಿವಶರಣಪ್ಪಮೈಲಾರಿ-ಕಲಬುರಗಿ ಸೇರಿದಂತೆ ಒಟ್ಟು 53 ಹಸ್ತಪ್ರತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ದಲಿತ ಸಾಹಿತಿಗಳ ಕೃತಿಗೆ ನೆರವು: ಮೊದಲ ಬಾರಿಗೆ ದಲಿತ ಸಾಹಿತ್ಯ ಕೃತಿ ಪ್ರಕಟಣೆ ಧನಸಹಾಯ ಕೋರಿ 104 ಹಸ್ತಪ್ರತಿಗಳು ಬಂದಿದ್ದು, ಆ ಪೈಕಿ ‘ತಳ ಸಮುದಾಯದ ಸಾಂಸ್ಕೃತಿಕ ಪದಕೋಶ’ ಎಸ್.ಚಂದ್ರಕಿರಣ್-ಕುಳವಾಡಿ, ಬಾಬಾ ಸಾಹೇಬರ ಬೆಳಕಿನಲ್ಲಿ.. -ರಘೋತ್ತಮ ಹೊ.ಬ., ಸಾಮಾಜಿಕ ಒಳನೋಟ-ಗುಂಡಪ್ಪ ದೇ.ಕಾಮತ-ಬಾಗಲಕೋಟ, ಗವಿಗಂಧ-ಡಾ. ಶರಣಪ್ಪಕವಡೆ-ಕಲಬುರಗಿ, ನೀಲಿ ಮಿಂಚು-ಪರಶುರಾಮ ಶಿವಶರಣ, ಚಾಕಣದ ಸುಭದ್ರೆ-ಸಿ.ಸುವರ್ಣ ಶಿವಪ್ರಸಾದ್, ಆಡಾಡ್ತ ಆಕಾಶ-ಡಾ.ಗಿರೀಶ್ ಮೂಗ್ತಿಹಳ್ಳಿ ಇವರು ಸೇರಿದಂತೆ 51 ಹಸ್ತಪ್ರತಿಗಳನ್ನು ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X