Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಮೌಖಿಕ ಕಾವ್ಯ ಅನುವಾದದ ವೇಳೆ ಸಂದಾನ...

ಮೌಖಿಕ ಕಾವ್ಯ ಅನುವಾದದ ವೇಳೆ ಸಂದಾನ ಸೂತ್ರ ಅಗತ್ಯ: ವಿಮರ್ಶಕ ಸಿ.ಎನ್.ರಾಮಚಂದ್ರನ್

ವಾರ್ತಾಭಾರತಿವಾರ್ತಾಭಾರತಿ30 Nov 2018 10:21 PM IST
share
ಮೌಖಿಕ ಕಾವ್ಯ ಅನುವಾದದ ವೇಳೆ ಸಂದಾನ ಸೂತ್ರ ಅಗತ್ಯ: ವಿಮರ್ಶಕ ಸಿ.ಎನ್.ರಾಮಚಂದ್ರನ್

ಬೆಂಗಳೂರು, ನ.30: ವೌಖಿತ ಕಾವ್ಯ ಪರಂಪರೆಗಳ ಪಠ್ಯಗಳು ನಿರಂತರವಾಗಿ ಬದಲಾಗುತ್ತಿರುತ್ತದೆ. ಹೀಗಾಗಿ ಈ ಕಾವ್ಯಗಳನ್ನು ಇತರೆ ಭಾಷೆಗಳಿಗೆ ಅನುವಾದ ಮಾಡುವಾಗ ಸಂದಾನ ಸೂತ್ರಗಳನ್ನು ಪಾಲಿಸುವುದು ಅಗತ್ಯವಿದೆ ಎಂದು ಹಿರಿಯ ವಿಮರ್ಶಕ ಸಿ.ಎನ್.ರಾಮಚಂದ್ರನ್ ತಿಳಿಸಿದರು.

ಶುಕ್ರವಾರ ಶಬ್ದನಾ ಭಾಷಾಂತರ ಕೇಂದ್ರವು ನಗರದ ಕೇಂದ್ರ ಸಾಹಿತ್ಯ ಅಕಾಡೆಮಿಯಲ್ಲಿ ಆಯೋಜಿಸಿದ್ದ ‘ಮೌಖಿಕ ಸಾಹಿತ್ಯಾನುವಾದದ ಸವಾಲುಗಳು’ ಕುರಿತು ಅವರು ಮಾತನಾಡಿದರು.

ಮಲೆಮಹದೇಶ್ವರ, ಜುಂಜಪ್ಪ, ಮಂಟೆಸ್ವಾಮಿ ಸೇರಿದಂತೆ ಮೌಖಿಕ ಕಾವ್ಯಗಳು ನಿರಂತರವಾಗಿ ಬದಲಾಗುತ್ತಲೇ ಇರುತ್ತದೆ. ಹಾಡುಗಾರರಿಂದ ಹಾಡುಗಾರರಿಗೆ, ಪ್ರದರ್ಶನದಿಂದ ಪ್ರದರ್ಶನಕ್ಕೆ ಹಾಗೂ ಮೌಖಿಕ ಕಾವ್ಯಗಳನ್ನು ಕೇಳುವ ಪ್ರೇಕ್ಷಕರು, ಪ್ರದರ್ಶನಗೊಳ್ಳುವ ಸಮಯಕ್ಕೆ ಅನುಗುಣವಾಗಿ ನಿರಂತರವಾಗಿ ಬದಲಾಗುತ್ತಿರುತ್ತದೆ. ಇವೆಲ್ಲವುಗಳ ಬಗ್ಗೆ ಅನುವಾದಕನಿಗೆ ಸ್ಪಷ್ಟ ಅರಿವಿರಬೇಕು ಎಂದು ಅವರು ಹೇಳಿದರು.

ಹಾಡುಗಾರರು ಮೌಖಿಕ ಕಾವ್ಯಗಳನ್ನು ಪ್ರೇಕ್ಷಕರ ಮುಂದೆ ಕಥನವಾಗಿ ಹಾಡುವ ಸಂದರ್ಭದಲ್ಲಿ ಸಮಯದ ಅನುಸಾರವಾಗಿ ಕಥನವನ್ನು ಕುಗ್ಗಿಸುವುದು ಹಾಗೂ ಹಿಗ್ಗಿಸುವುದನ್ನು ಮಾಡುತ್ತಾರೆ. ಹಾಗೂ ಕಾವ್ಯಗಳ ಪ್ರದರ್ಶನದ ವೇಳೆ ಹಾಡುಗಾರರು ವೈಯಕ್ತಿಕ ಆಸಕ್ತಿಗಳ ಮೇರೆಗೆ ಉಪಕತೆಗಳನ್ನು ಹೇಳುತ್ತಿರುತ್ತಾರೆ. ಹೀಗಾಗಿ ಮೌಖಿಕ ಕಾವ್ಯಗಳನ್ನು ಅನುವಾದ ಮಾಡುವಾಗ ಕಾವ್ಯಗಳಲ್ಲಿರುವ ಉಪಕತೆಗಳು ಬೇಕೆ, ಬೇಡವೆ ಎಂಬುದನ್ನು ಪರಿಶೀಲಿಸಬೇಕು ಎಂದು ಅವರು ಹೇಳಿದರು.

ವಿಮರ್ಶಕ ಸುರೇಶ್ ನಾಗಲಮಡಿಕೆ ಮಾತನಾಡಿ, ದೇಶದ ವಿವಿಧ ರಾಜ್ಯಗಳಲ್ಲಿರುವ ವೌಖಿಕ ಕಾವ್ಯಗಳು ಹಾಗೂ ಜನಪದೀಯ ಕಥನಗಳು ಇಂಗ್ಲಿಷ್ ಭಾಷೆಗೆ ಅನುವಾದವಾಗಿರುಷ್ಟು ದೇಶಿಯ ಇತರೆ ಭಾಷೆಗಳಿಗೆ ಅನುವಾದವಾಗಿಲ್ಲ. ಈ ಬಗ್ಗೆ ಅನುವಾದಕರು ಗಮನ ವಹಿಸಬೇಕಾದ ಅಗತ್ಯವಿದೆ ಎಂದು ತಿಳಿಸಿದರು.

ರಾಜ್ಯ ಇಲ್ಲವೆ ದೇಶದ ಯಾವುದೆ ಭಾಗದ ಮೌಖಿಕ ಕಾವ್ಯ ಪರಂಪರೆಗಳು ಯಾವುದೆ ಒಂದು ಜಾತಿಗೆ ಸಂಬಂಧಿಸಿಲ್ಲ. ಕಾವ್ಯಗಳು, ಪುರಾಣಗಳು ಆಯಾ ಪ್ರದೇಶದಲ್ಲಿ ವಾಸಿಸುವ ಎಲ್ಲ ಜಾತಿ, ಸಮುದಾಯದ ಸಮ್ಮಿಶ್ರಣದಿಂದ ರೂಪು ತಾಳಿರುತ್ತದೆ. ಹೀಗಾಗಿ ಮೌಖಿಕ ಕಾವ್ಯಗಳು ಸೀಮಿತ ಚೌಕಟ್ಟಿಗೆ ಸಿಲುಕಿಸದೆ, ವಿಶಾಲಾರ್ಥದಲ್ಲಿ ವಿಶ್ಲೇಷಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು. ಈ ವೇಳೆ ಲೇಖಕಿ ವತ್ಸಲಾ ಮೋಹನ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X