Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಭಾರತದೊಡನೆ ಸೌಹಾರ್ದ ಸಂಬಂಧ ಬೇಕಿದ್ದರೆ...

ಭಾರತದೊಡನೆ ಸೌಹಾರ್ದ ಸಂಬಂಧ ಬೇಕಿದ್ದರೆ ಭಯೋತ್ಪಾದನೆಯನ್ನು ಹತ್ತಿಕ್ಕಿ ಮತ್ತು ಜಾತ್ಯತೀತ ರಾಷ್ಟ್ರವಾಗಿ

ಪಾಕ್‌ಗೆ ಜ.ರಾವತ್ ಕಿವಿಮಾತು

ವಾರ್ತಾಭಾರತಿವಾರ್ತಾಭಾರತಿ30 Nov 2018 10:34 PM IST
share
ಭಾರತದೊಡನೆ ಸೌಹಾರ್ದ ಸಂಬಂಧ ಬೇಕಿದ್ದರೆ ಭಯೋತ್ಪಾದನೆಯನ್ನು ಹತ್ತಿಕ್ಕಿ ಮತ್ತು ಜಾತ್ಯತೀತ ರಾಷ್ಟ್ರವಾಗಿ

ಪುಣೆ, ನ. 30: ಪಾಕಿಸ್ತಾನವು ಭಾರತದೊಂದಿಗೆ ಸೌಹಾರ್ದ ಸಂಬಂಧವನ್ನು ಬಯಸುತ್ತಿದ್ದರೆ ಅದು ತನ್ನ ನೆಲದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಹತ್ತಿಕ್ಕಬೇಕು ಮತ್ತು ತನ್ನನ್ನು ಜಾತ್ಯತೀತ ರಾಷ್ಟ್ರವಾಗಿ ರೂಪಿಸಿಕೊಳ್ಳಬೇಕು ಎಂದು ಭೂಸೇನಾ ಮುಖ್ಯಸ್ಥ ಜ.ಬಿಪಿನ್ ರಾವತ್ ಅವರು ಶುಕ್ರವಾರ ಇಲ್ಲಿ ಹೇಳಿದರು.

ನ್ಯಾಷನಲ್ ಡಿಫೆನ್ಸ್ ಅಕಾಡಮಿಯಲ್ಲಿ 135ನೇ ತಂಡದ ಪಾಸಿಂಗ್ ಔಟ್ ಪರೇಡ್‌ನ ನೇಪಥ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದ ಅವರು,ಭಾರತವು ಒಂದು ಹೆಜ್ಜೆಯನ್ನು ಮುಂದಿರಿಸಿದರೆ ಎರಡು ಹೆಜ್ಜೆಗಳನ್ನು ಮುಂದಿರಿಸಲು ತನ್ನ ದೇಶವು ಸಿದ್ಧವಿದೆ ಎಂಬ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರ ಹೇಳಿಕೆಯ ಕುರಿತು ಪ್ರಶ್ನೆಗೆ, ಅದು ತನ್ನ ನೆಲದಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಮಟ್ಟಹಾಕಲು ಮೊದಲ ಹೆಜ್ಜೆಗಳನ್ನಿರಿಸಬೇಕು ಎಂದು ಉತ್ತರಿಸಿದರು.

ಜರ್ಮನಿ ಮತ್ತು ಫ್ರಾನ್ಸ್‌ಗಳು ಒಳ್ಳೆಯ ನೆರೆಕರೆ ದೇಶಗಳಾಗಲು ಸಾಧ್ಯವಿದ್ದರೆ ಭಾರತ ಮತ್ತು ಪಾಕಿಸ್ತಾನಗಳೇಕೆ ಸ್ನೇಹಿತರಾಗಬಾರದು ಎಂಬ ಖಾನ್ ಹೇಳಿಕೆ ಕುರಿತಂತೆ ಅವರು,ಪಾಕಿಸ್ತಾನವು ಮೊದಲು ತನ್ನ ಆಂತರಿಕ ಸ್ಥಿತಿಯನ್ನು ನೋಡಿಕೊಳ್ಳುವ ಅಗತ್ಯವಿದೆ. ಅವರು ಪಾಕಿಸ್ತಾನವನ್ನು ಇಸ್ಲಾಮಿಕ್ ದೇಶವನ್ನಾಗಿ ಪರಿವರ್ತಿಸಿದ್ದಾರೆ. ಅವರು ಭಾರತದ ಜೊತೆಗೆ ಸೌಹಾರ್ದಯುತ ಸಂಬಂಧವನ್ನು ಬಯಸುತ್ತಿದ್ದರೆ ತಮ್ಮನ್ನು ಜಾತ್ಯತೀತ ದೇಶವನ್ನಾಗಿ ರೂಪಿಸಿಕೊಳ್ಳಬೇಕು ಎಂದರು.

ಸಶಸ್ತ್ರ ಪಡೆಗಳಲ್ಲಿ ಮಹಿಳೆಯರನ್ನು ಹೋರಾಟಕ್ಕೆ ನಿಯೋಜಿಸುವ ಕುರಿತಂತೆ ಜ.ರಾವತ್ ಅವರು, ನಾವು ಅದಕ್ಕಿನ್ನೂ ಸಿದ್ಧರಾಗಿಲ್ಲ. ಸಶಸ್ತ್ರ ಪಡೆಗಳಲ್ಲಿ ಅಂತಹ ವಾತಾವರಣವನ್ನು ಇನ್ನಷ್ಟೇ ಸೃಷ್ಟಿಸಬೇಕಿದೆ ಮತ್ತು ಮಹಿಳೆಯರೂ ಅಂತಹ ಕಷ್ಟದ ಪಾತ್ರಗಳನ್ನು ನಿರ್ವಹಿಸಲು ಸಿದ್ಧರಾಗಬೇಕಿದೆ. ಅದು ಅಷ್ಟೊಂದು ಸುಲಭವಲ್ಲ. ನಮ್ಮನ್ನು ಪಾಶ್ಚಾತ್ಯ ದೇಶಗಳೊಂದಿಗೆ ಹೋಲಿಸಬೇಡಿ. ಅವು ಹೆಚ್ಚು ಮುಕ್ತವಾಗಿವೆ ಎಂದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X