Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಸಮಾಜ ಸೇವೆಗಾಗಿ ಸ್ವಯಂ ಪ್ರೇರಿತವಾಗಿ...

ಸಮಾಜ ಸೇವೆಗಾಗಿ ಸ್ವಯಂ ಪ್ರೇರಿತವಾಗಿ ಬಡತನ ಅಪ್ಪಿಕೊಂಡೆ: ಎಚ್.ಎಸ್.ದೊರೆಸ್ವಾಮಿ

‘ಗಾಂಧಿ ಅಂಗಳದಲ್ಲಿ ಗಾಂಧಿ ಚಿಂತಕರು’ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Nov 2018 10:40 PM IST
share
ಸಮಾಜ ಸೇವೆಗಾಗಿ ಸ್ವಯಂ ಪ್ರೇರಿತವಾಗಿ ಬಡತನ ಅಪ್ಪಿಕೊಂಡೆ: ಎಚ್.ಎಸ್.ದೊರೆಸ್ವಾಮಿ

ಬೆಂಗಳೂರು, ನ.30: ಸಮಾಜ ಸೇವೆ ಮಾಡುವವರು ಬಡತವನ್ನು ಸ್ವಯಂ ಪ್ರೇರಿತವಾಗಿ ಅಪ್ಪಿಕೊಳ್ಳಬೇಕೆಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ಅವರ ಮಾತಿನಂತೆ ಬಡತನದಿಂದಲೆ ನನ್ನ ಜೀವನವನ್ನು ಇಲ್ಲಿಯವರೆಗೂ ನಡೆಸಿಕೊಂಡು ಬಂದಿದ್ದೇನೆ ಎಂದು ಹಿರಿಯ ಸ್ವಾತಂತ್ರ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ತಿಳಿಸಿದರು.

ಶುಕ್ರವಾರ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ವತಿಯಿಂದ ನಗರದ ಗಾಂಧಿ ಭವನದಲ್ಲಿ ಮಹಾತ್ಮ ಗಾಂಧೀಜಿಯ 150ನೆ ವರ್ಷಾಚರಣೆಯ ಪ್ರಯುಕ್ತ ಆಯೋಜಿಸಿದ್ದ ‘ಗಾಂಧಿ ಅಂಗಳದಲ್ಲಿ ಗಾಂಧಿ ಚಿಂತಕರು’ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಅವರು ತಮ್ಮ ಜೀವನದ ಅನುಭವಗಳನ್ನು ಹಂಚಿಕೊಂಡರು.

ಬಿಎಸ್ಸಿ ವಿದ್ಯಾರ್ಥಿಯಾಗಿರುವಾಗಲೆ ಸ್ವಾತಂತ್ರ ಹೋರಾಟದಲ್ಲಿ ತೊಡಗಿದ್ದೆ. ವಿದ್ಯಾರ್ಥಿ ಜೀವನದ ನಂತರ ಗಾಂಧೀಜಿ ಚಿಂತನೆಯ ಪ್ರೇರಣೆಯಿಂದ ಜನರ ಸೇವೆಯಲ್ಲಿ ತೊಡಗಿದೆ. ಆದರೆ, ನನ್ನ ವೈಯಕ್ತಿಕ ಜೀವನ ಹೇಗಿರಬೇಕೆಂದು ಚಿಂತಿಸಿದಾಗ, ಬಡತನದಿಂದಲೆ ನನ್ನ ಜೀವನವನ್ನು ರೂಪಿಸಿಕೊಳ್ಳಲು ನಿರ್ಧರಿಸಿದೆ ಎಂದು ಅವರು ನೆನೆಪು ಮಾಡಿಕೊಂಡರು.

ನನ್ನ ಮದುವೆಯ ನಂತರ ಜೀವನೋಪಾಯಕ್ಕಾಗಿ ಪುಸ್ತಕ ಪ್ರಕಾಶನ ಸಂಸ್ಥೆಯನ್ನು ನಡೆಸಲು ಮುಂದಾದೆ. ಪುಸ್ತಕಗಳ ಮಾರಾಟದಿಂದ ಬಂದ ಹಣದಿಂದಲೆ 50ವರ್ಷ ಜೀವನ ನಡೆಸಿದ್ದೇನೆ. ನನ್ನ ಹೆಂಡತಿ ಹಾಗೂ ಮಕ್ಕಳು ನನ್ನೊಂದಿಗೆ ಸರಳವಾಗಿ ಜೀವನ ಸಾಗಿಸಿದರು ಎಂದು ಅವರು ಹೇಳಿದರು.

ಮಹಾತ್ಮ ಗಾಂಧೀಜಿ ಕೆಲಕಾಲ ಚಿಕ್ಕಬಳ್ಳಾಪುರದ ನಂದಿ ಬೆಟ್ಟದಲ್ಲಿ ವಿಶ್ರಾಂತಿಗಾಗಿ ತಂಗಿದ್ದರು. ಆ ಸಂದರ್ಭದಲ್ಲಿ ನಾನು ಅವರನ್ನು ಕಾಣಲು ಹೋಗಿದ್ದೆ. ಅವರು ರಾಜ್ಯದಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ ಎಂಬುದೆ ನಮಗೆ ದೊಡ್ಡ ಹೆಮ್ಮೆ ಎನಿಸುತ್ತಿತ್ತು. ವಿಶ್ರಾಂತಿಯ ಸಂದರ್ಭದಲ್ಲೂ ಗಾಂಧೀಜಿ ಹರಿಜನ ಪತ್ರಿಕೆಗೆ ಬರೆಯುವುದು, ಸ್ವಾತಂತ್ರ ಹೋರಾಟಗಾರರೊಂದಿಗೆ ಪತ್ರ ವ್ಯವಹಾರಗಳನ್ನು ನಿರಂತರವಾಗಿ ಮಾಡುತ್ತಿದ್ದರು ಎಂದು ಅವರು ಹೇಳಿದರು.

ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ವೂಡೇ ಪಿ.ಕೃಷ್ಣ ಮಾತನಾಡಿ, ದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಹಗಲಿರುಳು ದುಡಿಯುತ್ತಿರುವವರು ನಮ್ಮ ಸುತ್ತಮುತ್ತಲೆ ಇದ್ದಾರೆ. ಆದರೆ, ಅವರ ಪರಿಚಯ ಯುವ ಜನತೆಗೆ ಇರುವುದಿಲ್ಲ. ಹೀಗಾಗಿ ಅಂತಹವರನ್ನು ವಿದ್ಯಾರ್ಥಿಗಳಿಗೆ ಮುಖಾಮುಖಿಯಾಗಿಸುವ ಹಾಗೂ ಸಂವಾದ ನಡೆಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದರು.

ಈ ವೇಳೆ ಕರ್ನಾಟಕ ಗಾಂಧಿ ಸ್ಮಾರಕ ನಿಧಿಯ ಗೌರವ ಕಾರ್ಯದರ್ಶಿ ಇಂದಿರಾ ಕೃಷ್ಣಪ್ಪ, ಸಾಹಿತಿ ಬೇ.ಗೂ.ರಮೇಶ್, ಹಿರಿಯ ಪರಿಸರವಾದಿ ನಾರಾಯಣ ರೆಡ್ಡಿ ಮತ್ತಿತರರಿದ್ದರು.

ಇಂದಿನ ಮಕ್ಕಳ ಜವಾಬ್ದಾರಿ ಹೆಚ್ಚಿದೆ. ಸ್ವಾತಂತ್ರ ಭಾರತದ ಕನಸು ಇನ್ನೂ ನನಸಾಗಿಲ್ಲ. ಬಡತನ, ಅನಾರೋಗ್ಯ, ಜಾತೀಯತೆ, ಮೌಢ್ಯತೆ ಹೊಸ ಹೊಸ ರೂಪಗಳನ್ನು ಪಡೆದುಕೊಂಡು ಶೋಷಣೆ ಹೆಚ್ಚಾಗುತ್ತಿದೆ. ಇಂತಹ ಸಂದರ್ಭದಲ್ಲಿ ವಿದ್ಯಾರ್ಥಿಗಳು ಗಾಂಧೀಜಿ, ಅಂಬೇಡ್ಕರ್ ಸೇರಿದಂತೆ ದೇಶಕ್ಕಾಗಿ ದುಡಿದವರ, ದುಡಿಯುತ್ತಿರುವವರ ಹಾದಿಯಲ್ಲಿ ಸಾಗಬೇಕು.

-ಎಚ್.ಎಸ್.ದೊರೆಸ್ವಾಮಿ, ಹಿರಿಯ ಸ್ವಾತಂತ್ರ ಹೋರಾಟಗಾರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X