Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸುಜ್ಲಾನ್ ಕಂಪೆನಿಯ ಕಾರ್ಮಿಕರಿಗೆ...

ಸುಜ್ಲಾನ್ ಕಂಪೆನಿಯ ಕಾರ್ಮಿಕರಿಗೆ ರಾಜಸ್ಥಾನಕ್ಕೆ ವರ್ಗಾವಣೆ: ಬೇಡಿಕೆ ಈಡೇರದಿದ್ದಲ್ಲಿ ಮುಷ್ಕರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ30 Nov 2018 10:53 PM IST
share
ಸುಜ್ಲಾನ್ ಕಂಪೆನಿಯ ಕಾರ್ಮಿಕರಿಗೆ ರಾಜಸ್ಥಾನಕ್ಕೆ ವರ್ಗಾವಣೆ: ಬೇಡಿಕೆ ಈಡೇರದಿದ್ದಲ್ಲಿ ಮುಷ್ಕರ ಎಚ್ಚರಿಕೆ

ಪಡುಬಿದ್ರಿ, ನ. 30: ಕಳದ ವರ್ಷ ನಷ್ಟವೆಂದು ಲಾಕ್‍ಔಟ್ ಘೋಷಿಸಿ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದ್ದ ಸುಜ್ಲಾನ್ ಪವನ ವಿದ್ಯುತ್ ಯಂತ್ರ ತಯಾರಿಕಾ ಘಟಕವು ಇದೀಗ ಮತ್ತೊಂದು ವಿವಾದಕ್ಕೆ ಕಾರಣವಾಗಿದೆ.

ಇಲ್ಲಿ ಕಾರ್ಮಿಕರಾಗಿ ದುಡಿಯುತಿದ್ದ 326 ಕಾರ್ಮಿಕರನ್ನು ಪೂರ್ವಮಾಹಿತಿ ನೀಡದೆ ರಾಜಸ್ಥಾನದ ಜೈಸಲ್ಮೇರ್ ಘಟಕಕ್ಕೆ ವರ್ಗಾವಣೆ ಮಾಡುವ ಮೂಲಕ ಮತ್ತೊಮ್ಮೆ ಕಾರ್ಮಿಕರ ಆಕ್ರೋಶಕ್ಕೆ ತುತ್ತಾಗಿದೆ. 

ಈ ವರ್ಗಾವಣೆಯ ಬಳಿಕ ಇಂಟಕ್ ಸಂಘಟನೆ ಮಧ್ಯ ಪ್ರವೇಶಿಸಿ ಕಂಪನಿಯೊಂದಿಗೆ ಎರಡು ಬಾರಿ ಸಭೆ ನಡೆಸಿ ಶರ್ತಬದ್ಧ ವರ್ಗಾವಣೆಗೆ ಒಪ್ಪಿಗೆ ನೀಡಿದ್ದರು. ಈಗಿರುವ ವೇತನದ ಶೇ. 30ರಷ್ಟು ಹೆಚ್ಚಳ, ವಸತಿ ಸೌಲಭ್ಯ ಮತ್ತು ಸೆಕ್ಯುರಿಟಿ ನೀಡಿದಲ್ಲಿ ಸಾಮೂಹಿಕ ವರ್ಗಾವಣೆಗೆ ಕಾರ್ಮಿಕರು ಒಪ್ಪಿಗೆ ನೀಡಿದ್ದರು. ಆದರೆ ಆಡಳಿತ ವರ್ಗ ನಷ್ಟದ ನೆಪ ಹೇಳಿ ಕೇವಲ ಶೆ.5 ವೇತನ ಹೆಚ್ಚಳಕ್ಕೆ ಮಾತ್ರ ಒಪ್ಪಿಗೆ ನೀಡಿದ್ದರು. ಇದಕ್ಕೊಪ್ಪದ ಕಾರ್ಮಿಕರಿಗೆ ನ.19ರಂದು ಶೋಕಾಸ್ ನೋಟೀಸ್ ಜಾರಿ ಮಾಡಿ ನ.22ಕ್ಕೆ ಜೈಸಲ್ಮೇರ್‍ಗೆ ಹೋಗಿ ಕೆಲಸಕ್ಕೆ ಸೇರಲು ಆದೇಶ ನೀಡಿತ್ತು. ತಪ್ಪಿದಲ್ಲಿ ಕಾರ್ಮಿಕರ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ತಿಳಿಸಿತ್ತು.

ಅಮಿಷ: ಕೆಲವು ಕಾರ್ಮಿಕರನ್ನು ಸಂಪರ್ಕಿಸಿದ ಕಂಪನಿಯು ಶಾಶ್ವತ ಕೆಲಸಕ್ಕೆ ರಾಜೀನಾಮೆ ನೀಡಿ ಗುತ್ತಿಗೆ ಆಧಾರದಲ್ಲಿ ಮತ್ತೆ ಕೆಲಸಕ್ಕೆ ಸೇರುವಂತೆ ಆಮಿಷ ಒಡ್ಡಿತ್ತು. ವರ್ಗಾವಣೆಯಾಗಲು ಇಷ್ಟವಿಲ್ಲದಿದ್ದರೆ ಅತೀ ಕಡಿಮೆ ಮೊತ್ತದ ಸಪರೇಶನ್ ಪ್ಯಾಕೇಜ್ ಆಮಿಷವನ್ನೂ ಒಡ್ಡಿತ್ತು ಎಂದು ಕಾರ್ಮಿಕರು ಆರೋಪಿಸಿದ್ದಾರೆ. 

ಸಭೆ: ಶನಿವಾರ ಸುಜ್ಲಾನ್ ಕಾರ್ಮಿಕ ಸಂಘಟನೆಯ ಮಹಾಸಭೆಯು ಪಡುಬಿದ್ರಿಯಲ್ಲಿ ಇಂಟಕ್ ಮುಖಂಡರು ಭಾಗವಹಿಸಿ ಕಾರ್ಮಿಕರಿಗೆ ಧೈರ್ಯ ತುಂಬಿದರು.

ದಕ ಜಿಲ್ಲಾ ಇಂಟಕ್ ಅಧ್ಯಕ್ಷ ಮನೋಹರ ಶೆಟ್ಟಿ ಕಾರ್ಮಿಕರನ್ನುದ್ದೇಶಿಸಿ ಮಾತನಾಡಿ, ಕಂಪನಿಯು ಈಗಾಗಲೇ ಭೂಮಾಫಿಯಾ ಹುನ್ನಾರ ನಡೆಸುತ್ತಿದೆ. ಬೇರೆಯವರಿಗೆ ಜಾಗ ಮಾರಾಟಕ್ಕೆ ಮುಂದಡಿಯಿಟ್ಟಿದೆ. ಅಲ್ಲಿ ಬೇರೆ ಘಟಕ ಬಂದಲ್ಲಿ ಇದೇ ಕಾರ್ಮಿಕರಿಗೆ ಉದ್ಯೋಗದ ಭರವಸೆ ನೀಡಬೇಕು. ತಪ್ಪಿದಲ್ಲಿ ಜೈಸಲ್ಮೇರ್‍ಗೆ ಹೋಗಲು ಅವರು ಕೇಳಿಕೊಂಡ ಬೇಡಿಕೆಗಳನ್ನು ಈಡೇರಿಸಬೇಕು. ಇಲ್ಲದಿದ್ದರೆ ಕಾರ್ಮಿಕ ಸಂಘಟನೆಗಳೊಂದಿಗೆ ಎಲ್ಲಾ ಸಂಘ ಸಂಸ್ಥೆಗಳನ್ನು ಒಗ್ಗೂಡಿಸಿ ಘಟಕದೆದುರು ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದರು.

ಬೇಡಿಕೆ ಈಡೇರದಿದ್ದಲ್ಲಿ ಮುಷ್ಕರ: ಜೈಸಲ್ಮೇರ್‍ಗೆ ಹೋಗುವ ತನಕ ಕಾರ್ಮಿಕರಿಗೆ ಸರಿಯಾಗಿ ವೇತನ ನೀಡಬೇಕು. ಡಿ. 1ರಂದು ವೇತನ ಪಾವತಿಯಾಗ ದಿದ್ದಲ್ಲಿ ಡಿ.7ರವರೆಗೆ ಕಾದು ಡಿಸೆಂಬರ್ 9ರಂದು ಘಟಕದ ಮುಂಭಾಗದಲ್ಲಿ ತೀವ್ರ ಮುಷ್ಕರ ಆರಂಭಿಸಲಾಗುವುದು ಎಂದವರು ಎಚ್ಚರಿಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನವೀನ್‍ಚಂದ್ರ ಜೆ.ಶೆಟ್ಟಿ, ಉಡುಪಿ ಜಿಲ್ಲಾ ಇಂಟಕ್ ಅಧ್ಯಕ್ಷ ಗಣೇಶ್ ಕೋಟ್ಯಾನ್, ಇಂಟಕ್ ರಾಜ್ಯ ಸಂಘಟನೆಯ ಕಾರ್ಯದರ್ಶಿ ಸುರೇಶ್ ಮಾತನಾಡಿದರು. 

ಕಾರ್ಮಿಕರ ವಿವಾದ ಪರಿಹರಿಸಲು ಮಧ್ಯಪ್ರವೇಶಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡೀಸ್ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X