Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮೂಡಿಗೆರೆ: ಟಿಪ್ಪು ಸುಲ್ತಾನ್ ಜಯಂತಿ...

ಮೂಡಿಗೆರೆ: ಟಿಪ್ಪು ಸುಲ್ತಾನ್ ಜಯಂತಿ ಸಾರ್ವಜನಿಕ ಆಚರಣೆಗೆ ಅವಕಾಶ ನೀಡಲು ಒತ್ತಾಯ

ಬಿಎಸ್‍ಪಿ, ಮುಸ್ಲಿಂ, ದಲಿತ ಸಂಘಟನೆಗಳಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ30 Nov 2018 11:28 PM IST
share
ಮೂಡಿಗೆರೆ: ಟಿಪ್ಪು ಸುಲ್ತಾನ್ ಜಯಂತಿ ಸಾರ್ವಜನಿಕ ಆಚರಣೆಗೆ ಅವಕಾಶ ನೀಡಲು ಒತ್ತಾಯ

ಮೂಡಿಗೆರೆ,ನ.30: ದೇಶೀ ಸಂಸ್ಕೃತಿ ಮತ್ತು ಪರಂಪರೆಗಳನ್ನು ಮೈಸೂರು ರಾಜ್ಯದಲ್ಲಿ ಹುಟ್ಟುಹಾಕಿ ಪ್ರಜೆಗಳಿಗೆ ಸೌಹಾರ್ದತೆಯ ಪಾಠ ಕಲಿಸಿದ ಮಹಾನ್ ಚೇತನ ಟಿಪ್ಪು ಸುಲ್ತಾನ್ ಅವರ ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸಲು ರಾಜ್ಯ ಸರ್ಕಾರ ಅವಕಾಶ ನೀಡಬೇಕು ಎಂದು ಬಿಎಸ್‍ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಝಾಕೀರ್ ಹುಸೇನ್ ಒತ್ತಾಯಿಸಿದರು.

ಅವರು ಶುಕ್ರವಾರ ಬಿಎಸ್‍ಪಿ, ಮುಸ್ಲಿಂ ಹಿತರಕ್ಷಣಾ ಒಕ್ಕೂಟ ಮತ್ತು ದಲಿತ ಸಂಘರ್ಷ ಸಮಿತಿಯಿಂದ ಆಯೋಜಿಸಿದ್ದ ಟಿಪ್ಪು ಸುಲ್ತಾನ್ ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸಬೇಕೆಂದು ಸರ್ಕಾರ ಅನುಮತಿ ನೀಡಬೇಕೆಂದು ಒತ್ತಾಯಿಸಿ ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದರು.
ದೇಶದಲ್ಲಿ ಹಿಂದಿನ ಕಾಲದಲ್ಲಿದ್ದ ಒಟ್ಟು 550 ರಾಜರ ಪೈಕಿ, 530 ರಾಜರು ಸರ್ವಾಧಿಕಾರಿ ಆಡಳಿತವನ್ನೇ ನೀಡಿದ್ದಾರೆ. ಟಿಪ್ಪು ಸುಲ್ತಾನ್ ಮಾತ್ರ ತನ್ನ ಮಕ್ಕಳನ್ನೇ ಒತ್ತೆಯಿರಿಸಿ, ರಾಜ್ಯವನ್ನೂ ಹಾಗೂ ರಾಜ್ಯದ ನೆಲ ಜಲವನ್ನೂ, ಪ್ರಾರ್ಥನಾ ಮಂದಿರಗಳನ್ನೂ ಉಳಿಸಿದ್ದರು. ಅವರ ಜಯಂತಿಯನ್ನು 15 ವರ್ಷಗಳಿಂದ ಬಿಎಸ್‍ಪಿ ಆಚರಿಸುತ್ತಾ ಬಂದಿದೆ. ಈಗ ಸರ್ಕಾರ ತಡೆಯೊಡ್ಡುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಿಎಸ್‍ಪಿ ಮುಖಂಡ ಮರಗುಂದ ಪ್ರಸನ್ನ ಮಾತನಾಡಿ, ಸರ್ಕಾರ ಕೋಮುವಾದಿಗಳ ಕೈಗೊಂಬೆಯಾಗಿದೆ. ಸರ್ಕಾರ ಆಚರಿಸುವ ಜಯಂತಿಯಲ್ಲಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯಾದಿಯಾಗಿ ಕೆಲ ಸಚಿವರು ಕಾರ್ಯಕ್ರಮದಿಂದ ಪಲಾಯಾನಗೈದು ಈಗ ಸಾರ್ವಜನಿಕವಾಗಿ ಆಚರಿಸಲು ಅವಕಾಶ ನೀಡದೆ, ದರ್ಪ ತೋರುತ್ತಿದ್ದಾರೆ ಎಂದು ದೂರಿದರು. 

ಡಿಎಸ್‍ಎಸ್ ಮುಖಂಡ ಯು.ಬಿ.ಮಂಜಯ್ಯ ಮಾತನಾಡಿ, ಟಿಪ್ಪು ಸುಲ್ತಾನ್ ಸೇನೆಯಲ್ಲಿ ಶೇ.90ರಷ್ಟು ಮಂದಿ ಹಿಂದು ಸೈನಿಕರಿದ್ದರು. ಓಪ್ಪು ಸುಲ್ತಾನ್ ಹಿಂದು ವಿರೋಧಿಯಾಗಿ ಮುಸ್ಲಿಮರನ್ನು ಮೆಚ್ಚಿಸಿ, ಹಿಂದುಗಳನ್ನೇ ಕೊಂದು ಹಾಕಿದ್ದರೆ ಕರ್ನಾಟಕ ಮುಸ್ಲಿಂ ರಾಜ್ಯವಾಗುತ್ತಿತ್ತು. ಈಗ ಕರ್ನಾಟಕದಲ್ಲಿ ಮುಸ್ಲಿಮರು ಅಲ್ಪಸಂಖ್ಯಾತರೆಂದು ಸರ್ಕಾರವೇ ಘೋಷಿಸಿದೆ. ಒಂದು ವೇಳೆ ಮುಸ್ಲಿಮರು ಹೆಚ್ಚಾಗಿದ್ದರೆ ಅಲ್ಪಸಂಖ್ಯಾತರಾಗುತ್ತಿದ್ದರೇ ಎಂದು ಪ್ರಶ್ನಿಸಿದ ಅವರು, ಟಿಪ್ಪು ಸುಲ್ತಾನ್ ದೇವಸ್ಥಾನಗಳನ್ನು, ಮಠ-ಮಂದಿರಗಳನ್ನು ಕಟ್ಟಿದ್ದಾರೆಯೇ ಹೊರತು ಮಸೀದಿಗಳನ್ನು ನಿರ್ಮಿಸಿದ ಉದಾಹರಣೆಯಿಲ್ಲ. ಕೋಮುವಾದಿಗಳ ಕಣ್ಣಿಗೆ ಮಾತ್ರ ಟಿಪ್ಪು ಸುಲ್ತಾನ್ ಕಳನಾಯಕನಾಗಿ ಕಾಣುತ್ತಿರುವುದು ದುರಂತ ಎಂದು ಹೇಳಿದರು. 

ಮುಸ್ಲಿಂ ಮುಖಂಡ ಅಲ್ತಾಫ್ ಬಿಳಗುಳ ಮಾತನಾಡಿ, ದೇಶ ಕಂಡ ಅಪ್ರತಿಮ ದೊರೆಯ ಜಯಂತಿಯನ್ನು ಸಾರ್ವಜನಿಕವಾಗಿ ಆಚರಿಸಲು ರಾಜ್ಯ ಸರ್ಕಾರ ತಡೆಯೊಡ್ಡುತ್ತಿರುವುದು ಸರಿಯಲ್ಲ. ಇಂತಹ ಧೋರಣೆಯಿಂದ ಸರ್ಕಾರ ಹಿಂದೆ ಸರಿದು, ಸಾರ್ವಜನಿಕರಿಗೆ ಜಯಂತಿ ಆಚರಿಸಲು ಅವಕಾಶ ಮಾಡಿಕೊಡಬೇಕೆಂದು ಒತ್ತಾಯಿಸಿದರು. 

ಪ್ರಾರಂಭದಲ್ಲಿ ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಸಾಗಿ ತಾಲೂಕು ಕಚೇರಿಯಲ್ಲಿ ಸಮಾವೇಶಗೊಂಡು ತಹಶೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನೆಯಲ್ಲಿ ಮುಖಂಡರಾದ ಲೋಕವಳ್ಳಿ ರಮೇಶ್, ಶಬ್ಬೀರ್ ಅಹ್ಮದ್ ಬೇಗ್, ಅಲ್ತಾಫ್ ಬಿಳಗುಳ, ಎ.ಸಿ.ಅಯೂಬ್ ಹಾಜಿ, ಬಿ.ರಾಮ, ಸಬ್ಬೇನಹಳ್ಳಿ ಹಸನಬ್ಬ, ಚಂದ್ರಶೇಖರ್‍ನಾಯ್ಕ್, ಪಿ.ಕೆ.ಮಂಜುನಾಥ್, ಶ್ರೀಕಾಂತ್, ಹಮೀದ್, ರತನ್ ಊರುಬಗೆ, ವಕೀಲ ಚಂದ್ರು, ಯಾಕೂಬ್ ಗೋಣಿಗದ್ದೆ, ಝಾಕಿರ್ ಹುಸೇನ್, ಡಿ.ವೈ.ಅಬ್ದುಲ್ ಖಾದರ್ ಮತ್ತಿತರರು ಇದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X