Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಇನ್ನು ಮುಂದೆ ಅಂಗಾಂಗ ರವಾನೆಗೆ...

ಇನ್ನು ಮುಂದೆ ಅಂಗಾಂಗ ರವಾನೆಗೆ ಆಸ್ಪತ್ರೆಗಳಲ್ಲಿ ಡ್ರೋನ್ ಬಂದರು

ವಾರ್ತಾಭಾರತಿವಾರ್ತಾಭಾರತಿ30 Nov 2018 11:44 PM IST
share
ಇನ್ನು ಮುಂದೆ ಅಂಗಾಂಗ ರವಾನೆಗೆ ಆಸ್ಪತ್ರೆಗಳಲ್ಲಿ ಡ್ರೋನ್ ಬಂದರು

ಹೊಸದಿಲ್ಲಿ, ನ. 30: ಸಂಚಾರ ದಟ್ಟಣೆಯಿಂದ ತುಂಬಿರುವ ಭಾರತದ ನಗರಗಳಲ್ಲಿ ಇನ್ನು ಮುಂದೆ ಒಂದು ಆಸ್ಪತ್ರೆಯಿಂದ ಇನ್ನೊಂದು ಆಸ್ಪತ್ರೆಗೆ ಅಂಗಾಂಗಳನ್ನು ತ್ವರಿತವಾಗಿ ರವಾನೆ ಮಾಡಲು ಗ್ರೀನ್ ಕಾರಿಡಾರ್ ಅಥವಾ ವಿಶೇಷ ರಸ್ತೆ ವ್ಯವಸ್ಥೆ ಬೇಕಾಗಿಲ್ಲ. ಡ್ರೋನ್‌ಗಳು ಈ ಕೆಲಸವನ್ನು ಮಾಡಲಿವೆ. ಅದಕ್ಕಾಗಿ ಆಸ್ಪತ್ರೆಗಳಲ್ಲಿ ಡ್ರೋನ್ ಬಂದರು ಆರಂಭವಾಗಲಿದೆ.

ನಾವು ಡಿಸೆಂಬರ್ 1ರಿಂದು ಡ್ರೋನ್‌ಗಳ ನೋಂದಣಿ ಆರಂಭಿಸಲಿದ್ದೇವೆ. ಭಾರತದಲ್ಲಿ ಡ್ರೋನ್‌ಗಳಿಗೆ ಕಾನೂನಾತ್ಮಕ ಸ್ಥಾನ ನೀಡಲು ಮುಂದಿನ ತಿಂಗಳಿಂದ ಅಗತ್ಯವಿರುವ ಪರವಾನಿಗೆ ನೀಡಲಾಗುವುದು. ಆಸ್ಪತ್ರೆಗಳಲ್ಲಿ ಡ್ರೋನ್ ಬಂದರು ರೂಪಿಸಲು ಚಿಂತಿಸುತ್ತಿದ್ದೇವೆ ಎಂದು ಕೇಂದ್ರದ ವೈಮಾನಿಕ ಖಾತೆಯ ಸಹಾಯಕ ಸಚಿವ ಜಯಂತ್ ಸಿನ್ಹಾ ತಿಳಿಸಿದ್ದಾರೆ.

ಇತ್ತೀಚೆಗೆ ಘೋಷಿಸಲಾಗಿರುವ ಡ್ರೋನ್ 2.0 ನೀತಿ ಅಡಿಯಲ್ಲಿ ಆಸ್ಪತ್ರೆಗಳಲ್ಲಿರುವ ಡ್ರೋನ್ ಬಂದರುಗಳು ಸ್ವೀಕರಿಸುವವರಿಗೆ ಶೀಘ್ರದಲ್ಲಿ ಅಂಗಾಂಗಗಳನ್ನು ತಲುಪಿಸುವಲ್ಲಿ ನೆರವಾಗಲಿದೆ. ನಾಗರಿಕ ವೈಮಾನಿಕ ಅವಶ್ಯಕತೆಗಳ ಕುರಿತ ಕರಡನ್ನು ಸಮಾಲೋಚನೆಗಾಗಿ ಮುಂಬೈಯಲ್ಲಿ ಜನವರಿ 15ರಂದು ನಡೆಯಲಿರುವ ಜಾಗತಿಕ ವೈಮಾನಿಕ ಶೃಂಗದಲ್ಲಿ ಪ್ರಕಟಿಸಲಾಗುವುದು ಎಂದು ಸಿನ್ಹಾ ತಿಳಿಸಿದ್ದಾರೆ.

ಡ್ರೋನ್‌ಗಳ ಬಳಕೆಗಾಗಿ ವಿಶೇಷ ಡಿಜಿಟಲ್ ವಾಯು ಅವಕಾಶ ಸೃಷ್ಟಿಸಲಾಗುವುದು. ಮುಂದಿನ ಹಂತದಲ್ಲಿ ಓರ್ವ ಪೈಲೆಟ್ ಹಲವು ಡ್ರೋನ್‌ಗಳನ್ನು ನಿರ್ವಹಿಸಲು ಅವಕಾಶ ನೀಡಲು ಡ್ರೋನ್ ನೀತಿಯಲ್ಲಿ ಮಹತ್ತರ ಬದಲಾವಣೆ ಮಾಡಲಾಗುವುದು. ಈ ಬಗ್ಗೆ ಶೀಘ್ರ ಶ್ವೇತ ಪತ್ರ ಹೊರಡಿಸಲಾಗುವುದು ಎಂದು ಸಿನ್ಹಾ ಹೇಳಿದ್ದಾರೆ.

ದೊಡ್ಡ ಡ್ರೋನ್ ಅನ್ನು ಕಾರ್ಯಾಚರಿಸಲು ಪರವಾನಿಗೆ ಪಡೆಯಲು 25 ಸಾವಿರ ರೂ. ವೆಚ್ಚವಾಗಲಿದೆ. ಡ್ರೋನ್‌ನಂತಹ ರಿಮೋಟ್ ಮೂಲಕ ನಿಯಂತ್ರಿಸುವ ವಿಮಾನ ವ್ಯವಸ್ಥೆ (ಆರ್‌ಪಿಎಎಸ್)ಗೆ ನಾಗರಿಕ ವಿಮಾನ ಯಾನದ ಪ್ರಧಾನ ನಿರ್ದೇಶನಾಲಯ (ಡಿಜಿಸಿಎ) ಕಾನೂನುಗಳನ್ನು ರೂಪಿಸಿದೆ. ಅದು ಈ ಡ್ರೋನ್‌ಗಳಲ್ಲಿ ನ್ಯಾನೊ (250 ಗ್ರಾಂ ತೂಕದ ವರೆಗೆ), ಮೈಕ್ರೊ (250 ಗ್ರಾಂ.ನಿಂದ 2 ಕಿ.ಗ್ರಾಂ.), ಹಾಗೂ 2ರಿಂದ 25 ಕಿ.ಗ್ರಾಂ.ನ ಸಣ್ಣ, 25ರಿಂದ 150 ಕಿ.ಗ್ರಾಂ.ನ ಮಧ್ಯಮ ಹಾಗೂ 150 ಕಿ.ಗ್ರಾಂ.ನ ದೊಡ್ಡ ಡ್ರೋನ್‌ಗಳೆಂದು ವಿಭಾಗ ಮಾಡಿದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X