Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
    • ಕ್ರೈಂ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇಶದಲ್ಲಿ ಏಕ ಸಂಸ್ಕೃತಿ ಹೇರಿಕೆ...

ದೇಶದಲ್ಲಿ ಏಕ ಸಂಸ್ಕೃತಿ ಹೇರಿಕೆ ಕಳವಳಕಾರಿ: ನ್ಯಾ. ನಾಗಮೋಹನದಾಸ್

ಮಂಗಳೂರಿನಲ್ಲಿ ಜನನುಡಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2018 2:07 PM IST
share
ದೇಶದಲ್ಲಿ ಏಕ ಸಂಸ್ಕೃತಿ ಹೇರಿಕೆ ಕಳವಳಕಾರಿ: ನ್ಯಾ. ನಾಗಮೋಹನದಾಸ್

ಮಂಗಳೂರು, ಡಿ.1: ಒಬ್ಬರನ್ನೊಬ್ಬರು ಪ್ರೀತಿಸಿ ಜೀವನ ನಡೆಸುವ ಬಹುತ್ವದ ದೇಶದಲ್ಲಿ ಒಂದೇ ದೇಶ, ಧರ್ಮ, ಭಾಷೆ, ನೀತಿ, ಸಂಸ್ಕೃತಿ, ಆಹಾರ ಪದ್ಧತಿ, ಉಡುಪು ಇರಬೇಕೆಂಬ ಫರ್ಮಾನು ಹೊರಡಿಸುವ ಅಪಾಯಕಾರಿ ಸನ್ನಿವೇಶದಲ್ಲಿ ನಾವಿದ್ದೇವೆ ಎಂದು ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ ದಾಸ್ ಕಳವಳ ವ್ಯಕ್ತಪಡಿಸಿದ್ದಾರೆ.

ಅಭಿಮತ ಮಂಗಳೂರು ವತಿಯಿಂದ ನಗರದ ಶಾಂತಿಕಿರಣ ಸಭಾಂಗಣದಲ್ಲಿ ಇಂದು ಜನನುಡಿ 5ನೆ ಆವೃತ್ತಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಏಕ ಸಂಸ್ಕೃತಿಯ ಮೂಲಕ ಸಂವಿಧಾನೇತರ ಶಕ್ತಿಗಳು ಜನರ ಬದುಕನ್ನು ನಿಯಂತ್ರಿಸಲು ಪ್ರಯತ್ನಿಸುತ್ತಿವೆ. ಬಹುತ್ವವನ್ನು ನಾಶ ಮಾಡಲು ಸಂಚು ನಡೆಸುತ್ತಿವೆ. ಇದಕ್ಕೆ ಅಧಿಕಾರದಲ್ಲಿ ಕುಳಿತವರು ಬೆಂಬಲಿಸುತ್ತಿರುವುದು ಅಪಾಯಕಾರಿ ಎಂದು ಅವರು ಹೇಳಿದರು.

ಈ ಹಿಂದೆ ಸಂವಿಧಾನೇತರ ಶಕ್ತಿಗಳು ಕ್ರೈಸ್ತರು, ಮುಸ್ಲಿಮರು, ದಲಿತರ ಮೇಲೆ ದಾಳಿ ನಡೆಸಿದವು. ಆಗ ಜನರು ಮೌನವಾಗಿದ್ದರು. ಆದರೆ ಈಗ ಸಂವಿಧಾನದ ಮೇಲೆ ಆ ಶಕ್ತಿಗಳು ದಾಳಿ ನಡೆಸುವ ಮೂಲಕ ಅಪಾಯವನ್ನು ಸೃಷ್ಟಿಸಿವೆ. ನಮ್ಮ ಸಂವಿಧಾನ ಸಹಿಷ್ಣುತೆಯ ಪಾಠವನ್ನು ನೀಡುತ್ತದೆಯೇ ಹೊರತು ಸುಡುವ ಅನಾಗರಿಕ ಪ್ರವೃತಿಯನ್ನು ಕಲಿಸುವುದಿಲ್ಲ. ಹಾಗಾಗಿ ಈ ದುಷ್ಟ ಶಕ್ತಿಗಳು ಸಂವಿಧಾನದ ಮೇಲೆ ದಾಳಿ ನಡೆಸುವ ಮೂಲಕ ಅರಾಜಕತೆಯನ್ನು ಸೃಷ್ಟಿಸಲು ಹುನ್ನಾರ ನಡೆಸುತ್ತಿವೆ ಎಂದು ನ್ಯಾ. ನಾಗಮೋಹನ ದಾಸ್ ಕಳವಳ ವ್ಯಕ್ತಪಡಿಸಿದರು.

ನ್ಯಾಯಾಂಗದ ಮೇಲೂ ಬಾಹ್ಯ ಒತ್ತಡ ಹೇರಲಾಗುತ್ತಿದೆ. ಇದೇ ರೀತಿಯ ತೀರ್ಪು ನೀಡಬೇಕು, ವಿರುದ್ಧವಾದ ತೀರ್ಪು ನೀಡಿದರೆ ಒಪ್ಪುವುದಿಲ್ಲ ಎಂಬ ಬೆದರಿಕೆಗಳನ್ನು ಹಾಕಲಾಗುತ್ತಿದೆ. ಅಯೋಧ್ಯೆಯ ಪ್ರಕರಣದಲ್ಲೂ ಹೀಗೆಯೇ ಒತ್ತಡ ಹೇರಲಾಗುತ್ತಿದೆ ಎಂದು ಅವರು ಹೇಳಿದರು.

ಪ್ರಜಾಪ್ರಭುತ್ವ ಆಧಾರ ಸ್ತಂಭಗಳಂತೆ ಇರುವ ಸಂಸ್ಥೆಗಳನ್ನು ನಾಶ ಮಾಡುವ ಪ್ರಯತ್ನ ಆರಂಭವಾಗಿದೆ. ಭಿನ್ನ ಧ್ವನಿಗಳನ್ನು ಅಡಗಿಸಲು ಅಧಿಕಾರವನ್ನು ದುರ್ಬಳಕೆ ಮಾಡಲಾಗುತ್ತಿದೆ. ಅಘೋಷಿತ ತುರ್ತು ಪರಿಸ್ಥಿತಿಯನ್ನು ನಾವು ಎದುರಿಸುತ್ತಿದ್ದೇವೆ. ಆದರೆ ಇತಿಹಾಸ ಮರೆತವರು ಇತಿಹಾಸವನ್ನು ಸೃಷ್ಟಿಸಲಾರರು. ದೇಶದ ಜನ ಈ ಹಿಂದೆಯೂ ಇತಿಹಾಸ ಮರೆತವರಿಗೆ ಪಾಠ ಕಲಿಸಿದ್ದಾರೆ. ಮುಂದೆಯೂ ಕಲಿಸುತ್ತಾರೆ. ಏಕ ಸಂಸ್ಕೃತಿ ಹೇರಿಕೆಗೆ ಬಹುತ್ವವನ್ನು ಪ್ರೀತಿಸುವ ಜನ ಎಂದೂ ಬಿಡುವುದಿಲ್ಲ. ಅವರು ಈ ಏಕ ಸಂಸ್ಕೃತಿ ವಿರುದ್ಧ ಸಿಡಿದೆದ್ದು ನಿಲ್ಲುವ ವಾತಾವರಣ ನಿರ್ಮಾಣವಾಗಲಿದೆ ಎಂದು ಒಬ್ಬರನ್ನೊಬ್ಬರು ಪ್ರೀತಿಸಿ ಜೀವನ ನಡೆಸುವುದೇ ಬಹುತ್ವ ಎಂದವರು ಸ್ಪಷ್ಟಪಡಿಸಿದರು.

ವೇದಿಕೆಯಲ್ಲಿ ಅತಿಥಿಗಳಾಗಿ ನಟ, ಸಾಮಾಜಿಕ ಕಾರ್ಯಕರ್ತ ಪ್ರಕಾಶ್ ರೈ, ಡಾ. ಹಸೀನಾ ಖಾದ್ರಿ, ಎಂ. ದೇವದಾಸ್ ಉಪಸ್ಥಿತರಿದ್ದರು. ವಿನಯಾ ವಕ್ಕುಂದ ಅಧ್ಯಕ್ಷತೆ ವಹಿಸಿದ್ದರು. ಸತ್ಯಾ ಎಸ್. ಕಾರ್ಯಕ್ರಮ ನಿರೂಪಿಸಿದರು.

ದೇಶದಲ್ಲಿ ಸಾಮಾಜಿಕ, ಆರ್ಥಿಕ ಭಯೋತ್ಪಾದನೆ

ದೇಶದಲ್ಲಿ ಈಗ ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆ ಮೂಲಕ ಅಸಮಾನತೆ ಸೃಷ್ಟಿಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ನ್ಯಾ. ಎಚ್.ಎನ್. ನಾಗಮೋಹನ ದಾಸ್, ಹದಗೆಟ್ಟಿರುವ ನಮ್ಮ ಸಂಸದೀಯ ವ್ಯವಸ್ಥೆಯನ್ನು ಉಳಿಸಬೇಕಾದರೆ ಸಜ್ಜನರು, ಜನಪರರು ಹಾಗೂ ಸಂವಿಧಾನದ ಬಗ್ಗೆ ನಂಬಿಕೆ ಇರುವವರನ್ನು ನಾವು ಪಾರ್ಲಿಮೆಂಟಿಗೆ ಆಯ್ಕೆ ಮಾಡಿ ಕಳುಹಿಸಬೇಕಾಗಿದೆ ಎಂದರು.

ಸಂಪತ್ತಿನ ಶೇಖರಣೆಗೆ ಸರ್ಕಾರವೇ ಬೆಂಬಲ ನೀಡುತ್ತಿದೆ. ಜನರ ಸಂಪತ್ತಿನ ರಕ್ಷಣೆ ಮಾಡಬೇಕಾದ ಬ್ಯಾಂಕ್‌ಗಳು ಲೂಟಿಕೋರರ ಬೆಂಬಲಕ್ಕೆ ನಿಂತಿವೆ. ಆರ್‌ಬಿಐ, ಸಿಬಿಐ, ಮಾತ್ರವಲ್ಲದೆ ಐಟಿ ವ್ಯವಸ್ಥೆಯೂ ಇಂದು ಹದಗೆಟ್ಟಿದ್ದು, ವಿಪಕ್ಷವಿರುವಲ್ಲಿ ಅದನ್ನು ದಮನಿಸಲು ದಾಳಿ ನಡೆಸುವ ವ್ಯವಸ್ಥೆಗಳಾಗಿ ಮಾರ್ಪಟ್ಟಿವೆ ಎಂದು ಅವರು ಹೇಳಿದರು.

ಆರ್ಥಿಕ ಮತ್ತು ಸಾಮಾಜಿಕ ಭಯೋತ್ಪಾದನೆಗೆ ಕಡಿವಾಣ ಹಾಕದಿದ್ದರೆ ದೇಶ ಅರಾಜಕತೆಯತ್ತ ಸಾಗುವ ಸಂಭವವಿದೆ. ಆಗ ಇಡೀ ರಾಷ್ಟ್ರ ಮೂಲಭೂತವಾದಿಗಳು ಮತ್ತು ಕೋಮುವಾದಿಗಳ ಕೈಗೆ ಸಿಲುಕಿ ನಲುಗಿ ಹೋಗಲಿದೆ. ಇಂತಹ ಅಪಾಯ ಎದುರಾಗದಂತೆ ಜನರು ಎಚ್ಚರ ವಹಿಸಬೇಕು ಎಂದು ಅವರು ಕರೆ ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X