Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಂಡವಾಳಶಾಹಿ ವಿರುದ್ಧ ಹೋರಾಟ ಅಗತ್ಯ:...

ಬಂಡವಾಳಶಾಹಿ ವಿರುದ್ಧ ಹೋರಾಟ ಅಗತ್ಯ: ಚಿಂತಕ ಜಿ. ರಾಜಶೇಖರ್

ಜನನುಡಿ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ1 Dec 2018 6:07 PM IST
share
ಬಂಡವಾಳಶಾಹಿ ವಿರುದ್ಧ ಹೋರಾಟ ಅಗತ್ಯ: ಚಿಂತಕ ಜಿ. ರಾಜಶೇಖರ್

ಮಂಗಳೂರು, ಡಿ.1: ಬಂಡವಾಳಶಾಹಿಗಳು ಹಗಲು ದರೋಡೆ ಮಾಡುವ ಮೂಲಕ ಸಂಪತ್ತನ್ನು ಕೊಳ್ಳೆ ಹೊಡೆಯುತ್ತಿದ್ದು, ಶೋಷಿತರ ಹೋರಾಟದಿಂದ ಇದು ಕೊನೆಗೊಳ್ಳಬೇಕು. ಆಗ ಹೊಸ ಸಮಾಜ ಹುಟ್ಟುಹಾಕಲು ಸಾಧ್ಯವಾಗುತ್ತದೆ ಎಂದು ಚಿಂತಕ ಜಿ. ರಾಜಶೇಖರ್ ಅಭಿಪ್ರಾಯಪಟ್ಟರು.

ನಗರದ ನಂತೂರು ಶಾಂತಿಕಿರಣ ಸಭಾಂಗಣದಲ್ಲಿ ಅಭಿಮತ ಮಂಗಳೂರು ವತಿಯಿಂದ ಶನಿವಾರ ಹಮ್ಮಿಕೊಳ್ಳಲಾದ ಜನನುಡಿ 5ನೇ ಆವೃತ್ತಿಯ ‘ಭವಿಷ್ಯದ ಭಾರತ: ಮಾರ್ಕ್ಸ್- ಅಂಬೇಡ್ಕರ್- ಗಾಂಧಿ- ಲೋಹಿಯಾ’ ಎಂಬ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಪ್ರತಿಯೊಬ್ಬ ಮನುಷ್ಯ ಸಾಮಾಜಿಕ ಜೀವಿಯಷ್ಟೇ ಅಲ್ಲ, ಬುದ್ಧಿಜೀವಿಯೂ ಹೌದು. ಬುದ್ಧಿ ಬಲದಿಂದಲೇ ಎಲ್ಲ ವ್ಯವಹಾರಗಳನ್ನು ನಡೆಸುತ್ತಾನೆ. ಯಾರದೋ ಶ್ರಮದ, ಬೆವರಲ್ಲಿ ಮತ್ತೊಬ್ಬರು ಬದುಕುತ್ತಿದ್ದಾರೆ. ದೇಶದ ಸಂಪತ್ತಿನ ಹಂಚಿಕೆಯಲ್ಲಿ ತಾರತಮ್ಯ ಅನುಸರಿಸಲಾಗುತ್ತಿದೆ. ಎಲ್ಲಡೆಯೂ ಸಮಾನತೆ ಕಾಣಬೇಕೆಂದರೆ ಮಾರ್ಕ್ಸ್‌ವಾದದ ಅವಶ್ಯಕತೆ ಇದೆ ಎಂದು ಹೇಳಿದರು.

ನೊಂದವರು, ಬಡವರು, ಶೋಷಿತರ ಹೋರಾಟದ ಉಜ್ವಲ ಪರಂಪರೆಗೆ ಸಾವಿರಾರು ವರ್ಷಗಳ ಹಿನ್ನೆಲೆಯಿದೆ. ದಲಿತರ ಮೇಲೆ ಹಲ್ಲೆಗಳು ನಡೆಯುತ್ತಾ ಬಂದಿದೆ. ತಿರುವೇಮಣಿ ದುರಂತದಲ್ಲಿ ಹಲವು ಮಂದಿ ಪ್ರಾಣ ಕಳೆದುಕೊಂಡರು. ಅವರನ್ನು ಉಳ್ಳವರು ಮನೆಯಲ್ಲಿ ಕೂಡಿಹಾಕಿ ಬೆಂಕಿ ಇಟ್ಟರು. ಹೊತ್ತಿ ಉರಿಯುತ್ತಿದ್ದ ಬೆಂಕಿಯಿಂದ ಹೊರಬಂದವರನ್ನು ಮತ್ತೆ ಬೆಂಕಿಯಲ್ಲೇ ತಳ್ಳಲಾಯಿತು. ಇದು ಐತಿಹಾಸಿಕ ದುರಂತದ ಘಟನೆಯಾಗಿದೆ. ಕರ್ನಾಟಕದಲ್ಲೂ ಕಂಬಾಲಪಲ್ಲಿಯಲ್ಲಿ ಇಂತಹದ್ದೇ ಘಟನೆ ನಡೆಯಿತು ಎಂದು ವಿವರಿಸಿದರು.

ಬಂಡವಾಳಶಾಹಿ ವ್ಯವಸ್ಥೆಯು ಶೋಷಿತ ವರ್ಗಗಳನ್ನು ನಂಬಿಸಿದೆ, ನಂಬಿಸುತ್ತಾ ಮೋಸ ಮಾಡುತ್ತಿದೆ. ಬಂಡವಾಳಶಾಹಿತ್ವದ ಕಾರ್ಯವೈಖರಿಯಲ್ಲಿ ಹಿಂಸೆ ನೇರವಾಗಿರುವುದಿಲ್ಲ. ದಬ್ಬಾಳಿಕೆ ನಿರಂಕುಶವಾದಕ್ಕಿಂತ ಸೂಕ್ಷ್ಮವಾಗಿರುತ್ತದೆ. ಮನುಷ್ಯ- ಮನುಷ್ಯನ ನಡುವೆ ಕಂದಕವನ್ನು ಉಂಟು ಮಾಡುತ್ತಾ ಮನಸುಗಳನ್ನು ಒಡೆಯುತ್ತಾರೆ ಎಂದು ಹೇಳಿದರು.

ಬರಹಗಾರ ಡಾ.ಡಿ.ಡೊಮಿನಿಕ್ ಮಾತನಾಡಿ, ಲೋಹಿಯಾ ಅವರ ಬದುಕು, ಬರಹ, ವಾಗ್ವಾದಗಳನ್ನು ಚಿಂತನೆ ಮಾಡುವ ಅಗತ್ಯವಿದೆ. ಲೋಹಿಯಾ ಅವರ ಲೇಖನಗಳು ಓದುಗರನ್ನು ಹೆಚ್ಚು ಆಕರ್ಷಿಸುತ್ತವೆ ಎಂದು ಲೋಹಿಯಾ ಅವರ ಜೀವನದ ಬಗ್ಗೆ ವಿವರಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X