Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪುಟ್ಟ ಗ್ರಹಕ್ಕೆ ಪುತ್ತೂರಿನ ವಿದ್ಯಾರ್ಥಿ...

ಪುಟ್ಟ ಗ್ರಹಕ್ಕೆ ಪುತ್ತೂರಿನ ವಿದ್ಯಾರ್ಥಿ ಸ್ವಸ್ಥಿಕ್ ಪದ್ಮ ಹೆಸರು

ವಾರ್ತಾಭಾರತಿವಾರ್ತಾಭಾರತಿ1 Dec 2018 9:39 PM IST
share
ಪುಟ್ಟ ಗ್ರಹಕ್ಕೆ ಪುತ್ತೂರಿನ ವಿದ್ಯಾರ್ಥಿ ಸ್ವಸ್ಥಿಕ್ ಪದ್ಮ ಹೆಸರು

ಪುತ್ತೂರು, ಡಿ. 1: ವಿವೇಕಾನಂದ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸ್ವಸ್ತಿಕ್‌ ಪದ್ಮ ಅವರ ಹೆಸರನ್ನು ಪುಟ್ಟ ಗ್ರಹವೊಂದಕ್ಕೆ (ಮೈನರ್‌ ಪ್ಲಾನೆಟ್‌) ಇಡಲಾಗಿದೆ. ಅಂತಾರಾಷ್ಟ್ರೀಯ ಮಟ್ಟದ ಐಎಸ್‌ ಇಎಫ್-2018 (ಇಂಟರ್‌ನ್ಯಾಶ ನಲ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ ಫೇರ್‌- 2018) ರಲ್ಲಿ ಅವರು ಮಾಡಿದ ಸಾಧನೆಯನ್ನು ಪರಿಗಣಿಸಿ ಈ ಗೌರವ ನೀಡಲಾಗಿದೆ.

ಈ ಗೌರವವನ್ನು ಮೆಸಾಚ್ಯುಸೆಟ್‌ ಇನ್‌ಸ್ಟಿಟ್ಯೂಟ್‌ ಆಫ್ ಟೆಕ್ನಾಲಜಿ ಲಿಂಕನ್‌ ಲ್ಯಾಬೋರೇಟರಿ ಆ್ಯಂಡ್‌ ಇಂಟರ್‌ನ್ಯಾಶನಲ್‌ ಆಸ್ಟ್ರೋನಾಮಿಕಲ್‌ ಯೂನಿಯನ್‌ ಪ್ರದಾನ ಮಾಡಿದೆ. 2019ರ ಮೇ ತಿಂಗಳಲ್ಲಿ ನಡೆಯುವ ಗೂಗಲ್‌ ಸೈನ್ಸ್‌ ಫೇರ್‌ನಲ್ಲಿ ಭಾಗವಹಿಸಲು ಸ್ವಸ್ತಿಕ್‌ ಪದ್ಮ  ಅರ್ಹತೆ ಪಡೆದಿದ್ದಾರೆ. ಇದರಲ್ಲಿ "ಡೆಸಾಲ್‌: ಡೆವಲಪ್‌ಮೆಂಟ್‌ ಆಫ್ ಎ ನೋವೆಲ್‌ ಆ್ಯಂಡ್‌ ಫೀಸಿಬಲ್‌ ಡೆಸಾಲಿನೇಶನ್‌ ಡಿವೈಸ್‌' ಎಂಬ ಸಂಶೋಧನ ಪ್ರಬಂಧ ಮಂಡಿಸಲಿದ್ದಾರೆ.

ಈ ಹಿಂದೆ ಎರಡು ಬಾರಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತವನ್ನು ಪ್ರತಿನಿಧಿಸಿದ ಹೆಗ್ಗಳಿಕೆ ಸ್ವಸ್ತಿಕ್‌ ಪದ್ಮ ರದ್ದು. 2017ರಲ್ಲಿ ಇಂಟರ್‌ನ್ಯಾಶನಲ್‌ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ ಫೇರ್‌ನಲ್ಲಿ ಪುನರ್ಬಳಕೆ ಆಗದ ಪ್ಲಾಸ್ಟಿಕ್‌ಗೆ ಸ್ಲ್ಯಾಗ್‌ ಬಳಸಿ ವಸ್ತುವೊಂದನ್ನು ತಯಾರಿಸಿದ್ದರು. 

ಇದು ಕಬ್ಬಿಣಕ್ಕಿಂತಲೂ 24 ಪಟ್ಟು ಬಲಶಾಲಿಯಾಗಿದ್ದು,. ಇದರಲ್ಲಿ ವಿಶೇಷ ಪ್ರಶಸ್ತಿ ಪಡೆದಿದ್ದರು. 2018ರಲ್ಲಿ ಮಕ್ಕಳ ಅಪೌಷ್ಟಿಕತೆಯನ್ನು 6 ತಿಂಗಳು ಮೊದಲೆ ಕಂಡುಹಿಡಿಯುವ ಪೇಪರ್‌ ಸ್ಲಿಪ್‌ ಅನ್ವೇಷಿಸಿದ್ದರು. ಬಾಯಿ ಕ್ಯಾನ್ಸರನ್ನು ಬೇಗನೆ ಪತ್ತೆ ಹಚ್ಚುವ ಪೇಪರ್‌ ಸ್ಲಿಪ್‌ ಸಂಶೋಧಿಸಿದ್ದರು. ಈ ಸಾಧನೆಗಾಗಿ 2018ರ ಅಂತಾರಾಷ್ಟ್ರೀಯ ಸೈನ್ಸ್‌ ಆ್ಯಂಡ್‌ ಎಂಜಿನಿಯರಿಂಗ್‌ ಫೇರ್‌ನಲ್ಲಿ ಸೆಕೆಂಡ್‌ ಗ್ರ್ಯಾಂಡ್‌ ಅವಾರ್ಡ್‌ ಪಡೆದಿದ್ದರು. 2017ರ ನ.14ರಂದು ಭಾರತದ ರಾಷ್ಟ್ರಪತಿ ಅವರಿಂದ ಬಾಲ ಪುರಸ್ಕಾರ ಪಡೆದುಕೊಂಡಿದ್ದರು.

ಎನ್‌ಸಿಎಸ್‌ಸಿ ಯುವ ವಿಜ್ಞಾನಿ ಪ್ರಶಸ್ತಿ, ಅಹ್ಮದಾಬಾದ್‌ನಲ್ಲಿ ನಡೆದ ಪ್ಲಾಸ್ಟಿಕ್‌ ಎಕ್ಸಿಬಿಷನ್‌ನಲ್ಲಿ ಅಂ.ರಾ. ಪ್ಲಾಸ್ಟ್‌ ಐಕಾನ್‌ ಅವಾರ್ಡ್‌ ಪಡೆದಿದ್ದಾರೆ. ಸ್ವಸ್ತಿಕ್‌ ಪದ್ಮ ಅವರು ಬಂಟ್ವಾಳದ ಕೆದಿಲ ಮುರ್ಗಜೆ ಶ್ರೀರಾಮ ಭಟ್‌ ಎಂ. ಮತ್ತು ಮಲ್ಲಿಕಾ ದಂಪತಿ ಪುತ್ರ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X