Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಐಎಸ್‌ಐ ವರದಿ ಬಳಿಕ ಮತಗಟ್ಟೆಗಳನ್ನು...

ಐಎಸ್‌ಐ ವರದಿ ಬಳಿಕ ಮತಗಟ್ಟೆಗಳನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ: ಚುನಾವಣಾ ಆಯೋಗ

ವಾರ್ತಾಭಾರತಿವಾರ್ತಾಭಾರತಿ1 Dec 2018 9:53 PM IST
share
ಐಎಸ್‌ಐ ವರದಿ ಬಳಿಕ ಮತಗಟ್ಟೆಗಳನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ: ಚುನಾವಣಾ ಆಯೋಗ

ಹೊಸದಿಲ್ಲಿ,ಡಿ.1: ವಿವಿಪ್ಯಾಟ್ ಚೀಟಿಗಳನ್ನು ಇವಿಎಂ ಫಲಿತಾಂಶಗಳೊಂದಿಗೆ ತಾಳೆ ನೋಡಲು ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸುವಂತೆ ರಾಜಕೀಯ ಪಕ್ಷಗಳ ಬೇಡಿಕೆಗಳ ನಡುವೆಯೇ ನಿವೃತ್ತರಾಗುತ್ತಿರುವ ಮುಖ್ಯ ಚುನಾವಣಾ ಆಯುಕ್ತ ಒ.ಪಿ.ರಾವತ್ ಅವರು,ಭಾರತೀಯ ಅಂಕಿಅಂಶ ಸಂಸ್ಥೆ(ಐಎಸ್‌ಐ)ಯು ತನ್ನ ವರದಿಯನ್ನು ಸಲ್ಲಿಸಿದ ಬಳಿಕ ಆಯೋಗವು ಈ ಬಗ್ಗೆ ಅಂತಿಮ ನಿರ್ಧಾರವನ್ನು ಕೈಗೊಳ್ಳಲಿದೆ ಎಂದು ಶನಿವಾರ ಇಲ್ಲಿ ತಿಳಿಸಿದರು.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಗಳು ಮುಗಿದ ಬಳಿಕ ಐಎಸ್‌ಐ ವರದಿಯನ್ನು ಸಲ್ಲಿಸಲಿದೆ ಮತ್ತು ಆ ಬಳಿಕವೇ ನಿರ್ಧಾರವೊಂದನ್ನು ಕೈಗೊಳ್ಳಲು ಆಯೋಗಕ್ಕೆ ಸಾಧ್ಯವಾಗಲಿದೆ ಎಂದು ಸುದ್ದಿಸಂಸ್ಥೆಯೊಂದಿಗೆ ಮಾತನಾಡಿದ ಅವರು ಹೇಳಿದರು.

ವಿವಿಪ್ಯಾಟ್ ಚೀಟಿಗಳನ್ನು ತಾಳೆ ನೋಡುವ ಮತಗಟ್ಟೆಗಳ ಸಂಖ್ಯೆ ಹೆಚ್ಚಲಿದೆಯೇ ಎಂಬ ಪ್ರಶ್ನೆಗೆ,ಅದು ಹೆಚ್ಚುತ್ತದೋ ಯಥಾಸ್ಥಿತಿಯಲ್ಲಿರುತ್ತದೋ ಅಥವಾ ಕಡಿಮೆಯಾಗುತ್ತದೋ ಎನ್ನುವುದನ್ನು ತಾನು ಹೇಳಲು ಸಾಧ್ಯವಿಲ್ಲ. ಅದು ಐಎಸ್‌ಐ ವರದಿಯನ್ನು ಅವಲಂಬಿಸಿದೆ ಎಂದು ರಾವತ್ ಉತ್ತರಿಸಿದರು.

ಮತಗಟ್ಟೆಗಳಲ್ಲಿ ಅಕ್ರಮಗಳು ನಡೆದಿಲ್ಲ ಎನ್ನುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಇವಿಎಂಗಳು ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿವೆ ಮತ್ತು ಅವುಗಳನ್ನು ತಿರುಚಲಾಗಿಲ್ಲ ಎಂದು ಮತದಾರರಲ್ಲ್ಲಿ ಭರವಸೆ ಮೂಡಿಸಲು ಪ್ರತಿ ಕ್ಷೇತ್ರದಲ್ಲಿ ಶೇ.10ರಿಂದ ಶೇ.30ಷ್ಟು ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಚೀಟಿಗಳನ್ನು ಫಲಿತಾಂಶದೊಂದಿಗೆ ತಾಳೆ ಹಾಕಬೇಕು ಎಂದು ಪಕ್ಷಗಳು ಆಗ್ರಹಿಸಿವೆ.

ಈಗ ಎಲ್ಲ ಮತಗಟ್ಟೆಗಳಲ್ಲಿ ವಿವಿಪ್ಯಾಟ್ ಯಂತ್ರಗಳನ್ನು ಬಳಸಲಾಗುತ್ತಿದೆ ಮತ್ತು ಪ್ರತಿ ಮತಕ್ಷೇತ್ರದಲ್ಲಿ ಚೀಟಿಗಳನ್ನು ಎಣಿಕೆ ಮಾಡಲಾಗುತ್ತದೆ. ಮತದಾರ ಮತದಾನ ಮಾಡಿರುವ ಪಕ್ಷದ ಚಿಹ್ನೆಯನ್ನು ಹೊಂದಿರುವ ಚೀಟಿಯನ್ನು ಈ ಯಂತ್ರವು ಪ್ರದರ್ಶಿಸುತ್ತದೆ. ಏಳು ಸೆಕೆಂಡ್‌ಗಳ ಕಾಲ ಯಂತ್ರದಲ್ಲಿನ ಪುಟ್ಟ ಕಿಂಡಿಯಲ್ಲಿ ಕಾಣುವ ಈ ಚೀಟಿಯು ಬಳಿಕ ಪೆಟ್ಟಿಗೆಯೊಂದನ್ನು ಸೇರುತ್ತದೆ. ಮತದಾರ ಅದನ್ನು ಒಯ್ಯುವಂತಿಲ್ಲ.

ವಿವಿಪ್ಯಾಟ್ ಯಂತ್ರಗಳನ್ನು ಎಲ್ಲ ಮತಗಟೆಗಳಲ್ಲಿ ಬಳಸಲಾಗುತ್ತಿದೆಯಾದರೂ ಪ್ರತಿ ಕ್ಷೇತ್ರದ ಒಂದು ಮತಗಟ್ಟೆಯಲ್ಲಿನ ಇವಿಎಂ ಫಲಿತಾಂಶವನ್ನು ಮಾತ್ರ ವಿವಿಪ್ಯಾಟ್ ಚೀಟಿಗಳೊಂದಿಗೆ ತಾಳೆ ಹಾಕಲಾಗುತ್ತಿದೆ.

ನಿರ್ದಿಷ್ಟ ರಾಜಕೀಯ ಪಕ್ಷಕ್ಕೆ ಅನುಕೂಲವಾಗುವಂತೆ ಇವಿಎಮ್‌ಗಳನ್ನು ತಿರುಚಲಾಗುತ್ತಿದೆ ಎಂಬ ಬಗ್ಗೆ ಮತದಾರರಲ್ಲಿಯ ಭೀತಿಯನ್ನು ನಿವಾರಿಸಲು ಇಂತಹ ಮತಗಟ್ಟೆಗಳ ಸಂಖ್ಯೆಗಳನ್ನು ಹೆಚ್ಚಿಸಬೇಕು ಎನ್ನುವುದು ರಾಜಕೀಯ ಪಕ್ಷಗಳ ಬೇಡಿಕೆಯಾಗಿದೆ. ಚುನಾವಣಾ ಆಯೋಗವೂ ಮತಗಟ್ಟೆಗಳ ಸಂಖ್ಯೆಯನ್ನು ಹೆಚ್ಚಿಸಲು 2016ರಿಂದಲೂ ಚಿಂತನೆಯನ್ನು ನಡೆಸುತ್ತಿದೆ. ಆಗಿನ ಮುಖ್ಯ ಚುನಾವಣಾ ಆಯುಕ್ತ ನಸೀಂ ಝೈದಿ ಅವರು ಈ ಬಗ್ಗೆ ಶೀಘ್ರ ನಿರ್ಣಯಕ್ಕಾಗಿ ಒತ್ತು ನೀಡಿದ್ದರಾದರೂ ಹೆಚ್ಚಿನ ಪ್ರಗತಿಯುಂಟಾಗಿಲ್ಲ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X