Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಪಿಎಚ್.ಡಿ ನೋಂದಣಿ ಪ್ರಕ್ರಿಯೆ ವಿಳಂಬ;...

ಪಿಎಚ್.ಡಿ ನೋಂದಣಿ ಪ್ರಕ್ರಿಯೆ ವಿಳಂಬ; ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಕೆ

ಎಲ್ಲ ವಿವಿಗಳಲ್ಲೂ ಏಕಕಾಲದಲ್ಲಿ ಪಿಎಚ್‌ಡಿ ನೋಟಿಫಿಕೇಷನ್ ಹೊರಡಿಸಲು ಚಿಂತನೆ

ವಾರ್ತಾಭಾರತಿವಾರ್ತಾಭಾರತಿ1 Dec 2018 9:55 PM IST
share

ಬೆಂಗಳೂರು, ಡಿ.1: ಪಿಎಚ್.ಡಿ ನೋಂದಣಿ ಪ್ರಕ್ರಿಯೆಗಳು ಇಷ್ಟೊತ್ತಿಗಾಗಲೇ ಅಥವಾ ಡಿಸೆಂಬರ್ ಮೊದಲ ವಾರದಲ್ಲೇ ಆರಂಭವಾಗಬೇಕಿತ್ತು. ಆದರೆ, ರಾಜ್ಯ ಸರಕಾರ ಅನುಮತಿಯನ್ನು ನೀಡದೇ ಇರುವುದರಿಂದ ಪ್ರಸಕ್ತ ಸಾಲಿನ ನೋಟಿಫಿಕೇಷನ್ ಇನ್ನಷ್ಟು ವಿಳಂಬವಾಗುವ ಸಾಧ್ಯತೆ ಇದೆ.

ರಾಜ್ಯದ ವಿವಿಧ ವಿವಿಗಳು 2018-19ನೇ ಸಾಲಿನ ಪಿಎಚ್.ಡಿ ನೋಟಿಫಿಕೇಷನ್‌ಗೆ ಅನುಮತಿ ಕೋರಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ತಿಂಗಳುಗಳೇ ಕಳೆದಿವೆ. ಸರಕಾರದಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಹೀಗಾಗಿ ವಿವಿಯ ಅಧಿಕಾರಿಗಳಿಗೆ ಪಿಎಚ್.ಡಿ ನೋಟಿಫಿಕೇಷನ್ ಹೊರಡಿಸಲು ಸಾಧ್ಯವಾಗುತ್ತಿಲ್ಲ.

ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳಿಗೂ ಏಕಕಾಲದಲ್ಲಿ ಪಿಎಚ್.ಡಿ ನೋಟಿಫಿಕೇಷನ್ ಹೊರಡಿಸಲು ಅನುಮತಿ ನೀಡುವ ಬಗ್ಗೆ ಸರಕಾರದ ಹಂತದಲ್ಲಿ ಯೋಚನೆ ನಡೆಯುತ್ತಿದೆ. ಹೀಗಾಗಿ, ವಿವಿಧ ವಿವಿಗಳಿಂದ ನೀಡಿರುವ ಪಿಎಚ್.ಡಿ ನೋಟಿಫಿಕೇಷನ್ ಪ್ರಸ್ತಾವನೆಯನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದಾರೆ. ಪಿಎಚ್.ಡಿ ನೋಟಿಫಿಕೇಷನ್‌ಗೆ ಅವಕಾಶ ನೀಡಿ ಎಂದು ಹಲವು ವಿಶ್ವವಿದ್ಯಾಲಯಗಳಿಂದ ಪ್ರಸ್ತಾವನೆ ಸಲ್ಲಿಕೆಯಾಗಿ ತಿಂಗಳುಗಳೇ ಉರುಳಿದ್ದು, ಏಕಕಾಲದಲ್ಲಿ ಅನುಮತಿ ನೀಡುವ ಬಗ್ಗೆ ಸರಕಾರ ಈಗ ಯೋಚನೆ ಮಾಡುತ್ತಿದೆ.

ಪ್ರಸ್ತುತ ನೋಟಿಫಿಕೇಷನ್ ಆಧಾರ: ಸ್ನಾತಕೋತ್ತರ ಪಡೆದ ಯಾರು ಬೇಕಾದರೂ ಪದವಿ, ಸ್ನಾತಕೋತ್ತರ ಪದವಿ ಕೋರ್ಸ್‌ನ ವಿದ್ಯಾರ್ಥಿಗಳಿಗೆ ಬೋಧನೆ ಮಾಡಬಹುದು. ಆದರೆ, ಸರ್ಕಾರಿ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಲು ನೆಟ್, ಸ್ಲೆಟ್‌ ಅಥವಾ ಪಿಎಚ್.ಡಿ ಅತಿಮುಖ್ಯ. ನೆಟ್ ಉತ್ತೀರ್ಣರಾಗಿ ಪಿಎಚ್.ಡಿ ಪದವಿ ಪಡೆದಿದ್ದರೆ ಮೊದಲ ಆದ್ಯತೆ ನೀಡಲಾಗುತ್ತದೆ. ಪ್ರತಿ ವಿಶ್ವವಿದ್ಯಾಲಯದಲ್ಲೂ ಪ್ರತಿ ವರ್ಷ ಲಭ್ಯವಿರುವ ಸೀಟುಗಳ ಆಧಾರದಲ್ಲಿ ಪಿಎಚ್.ಡಿ ನೋಟಿಫಿಕೇಷನ್ ಹೊರಡಿಸಲಾಗುತ್ತದೆ.

ರಾಜ್ಯಪಾಲರಿಂದ ಈವರೆಗೆ ಸರಕಾರಕ್ಕೆ ಈ ಸಂಬಂಧ ಯಾವುದೇ ನಿರ್ದೇಶನ ಬಂದಿಲ್ಲ. ಹೀಗಾಗಿ ವಿವಿಗಳಿಗೆ ನೋಟಿಫಿಕೇಷನ್ ಕುರಿತು ಅನುಮತಿ ನೀಡಿಲ್ಲ ಎಂದು ಉನ್ನತ ಶಿಕ್ಷಣ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವರ್ಷ ಅವಶ್ಯಕ: ಪಿಎಚ್‌ಡಿ ನೋಟಿಫಿಕೇಷನ್‌ಗೆ ಸರಕಾರ ಅನುಮತಿ ನೀಡಿದ ತಕ್ಷಣವೇ ಅಭ್ಯರ್ಥಿಗಳನ್ನು ಸೇರಿಸಿಕೊಂಡು ಸಂಶೋಧನಾ ಪ್ರಕ್ರಿಯೆ ಆರಂಭಿಸಲು ಸಾಧ್ಯವಿಲ್ಲ. ವಿವಿಗಳಲ್ಲಿ ಲಭ್ಯವಿರುವ ಪ್ರಾಧ್ಯಾಪಕರು, ಸಹ ಮತ್ತು ಸಹಾಯಕ ಪ್ರಾಧ್ಯಾಪಕರ ಆಧಾರದಲ್ಲಿ ಕ್ರಮವಾಗಿ ಒಬ್ಬೊಬ್ಬರಿಗೆ ತಲಾ 8, 6 ಹಾಗೂ 4 ಸಂಶೋಧನಾ ವಿದ್ಯಾರ್ಥಿಗಳನ್ನು ಗೊತ್ತು ಮಾಡುವಂತೆ ಪ್ರಸ್ತಾವನೆಯಲ್ಲಿ ಸಲಹೆ ಮಾಡಲಾಗಿದೆ.

ಸರಕಾರ ಇದಕ್ಕೆ ಒಪ್ಪಿಗೆ ಕೊಟ್ಟ ನಂತರ, ಪತ್ರಿಕೆಗಳಲ್ಲಿ ಈ ಸಂಬಂಧ ಜಾಹೀರಾತು ನೀಡಿ, ಅರ್ಜಿ ಆಹ್ವಾನಿಸಬೇಕು. ಬಂದಿರುವ ಅರ್ಜಿಗಳನ್ನೆಲ್ಲ ಪರಿಶೀಲಿಸಿ, ಅಗತ್ಯ ದಾಖಲೆಯ ಆಧಾರದಲ್ಲಿ ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪರೀಕ್ಷೆ ನಡೆಸಬೇಕು. ಪ್ರವೇಶ ಪತ್ರದಲ್ಲಿ ತೇರ್ಗಡೆ ಹೊಂದಿದ ಅಭ್ಯರ್ಥಿಗಳಿಗೆ ಪಿಎಚ್.ಡಿ ನೋಂದಣಿ ಪ್ರಕ್ರಿಯೆ ನಡೆಯುತ್ತದೆ. ಇದಾದ ನಂತರ ಅಭ್ಯರ್ಥಿಗಳಿಂದ ಸಂಶೋಧನಾ ಪ್ರಬಂಧ ವಿಷಯ ಆಯ್ಕೆ, ಅದಕ್ಕೆ ಟಿಪ್ಪಣಿ ಪಡೆಯುವುದು, ಇದೆಲ್ಲ ಪ್ರಕ್ರಿಯೆ ಮುಗಿದ ನಂತರ 6 ತಿಂಗಳ ಕೋರ್ಸ್ ವರ್ಕ್ ಇರುತ್ತದೆ. ಇದು ಪುರ್ಣಗೊಂಡ ನಂತರ ಮಾರ್ಗದರ್ಶಕರ ಸೂಚನೆಯಂತೆ ಸಂಶೋಧನಾ ಪ್ರಕ್ರಿಯೆ ಆರಂಭವಾಗಲಿದೆ. ಇಷ್ಟೆಲ್ಲ ಪ್ರಕ್ರಿಯೆ ನಡೆಸಲು ಕನಿಷ್ಠ ಒಂದು ವರ್ಷ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X