Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ಕನ್ನಡ ಸಾಹಿತಿಗಳು ಸಿನೆಮಾ ಸಾಹಿತ್ಯದತ್ತ...

ಕನ್ನಡ ಸಾಹಿತಿಗಳು ಸಿನೆಮಾ ಸಾಹಿತ್ಯದತ್ತ ಆಸಕ್ತಿ ವಹಿಸಲಿ: ನಟ ಯಶ್

ವಾರ್ತಾಭಾರತಿವಾರ್ತಾಭಾರತಿ1 Dec 2018 10:02 PM IST
share
ಕನ್ನಡ ಸಾಹಿತಿಗಳು ಸಿನೆಮಾ ಸಾಹಿತ್ಯದತ್ತ ಆಸಕ್ತಿ ವಹಿಸಲಿ: ನಟ ಯಶ್

ಬೆಂಗಳೂರು, ಡಿ.1: ಪ್ರಸ್ತುತ ಕನ್ನಡ ಚಿತ್ರರಂಗ ಸಿನೆಮಾ ಸಂಭಾಷಣೆ, ಚಿತ್ರಕತೆಯ ಕೊರತೆ ಎದುರಿಸುತ್ತಿದ್ದು, ಕನ್ನಡ ಸಾಹಿತಿಗಳು ಸಿನೆಮಾ ಸಾಹಿತ್ಯ ರಚನೆಯಲ್ಲೂ ಆಸಕ್ತಿ ವಹಿಸಬೇಕೆಂದು ಎಂದು ನಟ ಯಶ್ ಹೇಳಿದರು.

ಶನಿವಾರ ಅಂಕಿತ ಪುಸ್ತಕ ಪ್ರಕಾಶನ ನಗರದ ಬಸವನಗುಡಿಯ ಬಿ.ಪಿ.ವಾಡಿಯಾ ಸಭಾಂಗಣದಲ್ಲಿ ಆಯೋಜಿಸಿದ್ದ ಹಿರಿಯ ಪತ್ರಕರ್ತ ಜೋಗಿ ಅವರ ‘ಸಲಾಂ ಬೆಂಗಳೂರು’ ಕಾದಂಬರಿ, ಲೇಖಕ ಶರತ್ ಭಟ್ ಸೇರಾಜಿ ಅವರ ‘ಬಾಗಿಲು ತೆರೆಯೇ ಸೇಸಮ್ಮ’ ವೈಚಾರಿಕ ಸುಲಲಿತ ಪ್ರಬಂಧ ಸಂಕಲನ ಮತ್ತು ಕಥೆಗಾರ ಸಚಿನ್ ತೀರ್ಥಹಳ್ಳಿ ಅವರ ‘ನವಿಲು ಕೊಂದ ಹುಡುಗ’ ಕಥಾ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು.

ಇಂದು ಜಗತ್ತು ಹಲವು ರೀತಿಯಲ್ಲಿ ತೆರೆದುಕೊಳ್ಳುತ್ತಿದೆ. ನಾನಾ ರೀತಿಯ ಪುಸ್ತಕ, ವೆಬ್ ಸರಣಿ, ಸಿನಿಮಾ ಸೇರಿದಂತೆ ನಾನಾ ಬಗೆಯ ಮಾಧ್ಯಮಗಳು ಜನರಿಗೆ ತಲುಪುತ್ತಿವೆ. ಸಿನಿಮಾ ಹೆಚ್ಚು ಜನರಿಗೆ ತಲುಪುವ ಮಾಧ್ಯಮವಾಗಿದೆ. ಇಂದು ಕನ್ನಡ ಚಿತ್ರರಂಗ ಸಾಹಿತಿಗಳ ಕೊರತೆ ಅನುಭವಿಸುತ್ತಿದೆ. ಹೀಗಾಗಿ ಕನ್ನಡ ಸಾಹಿತಿಗಳು ಚಿತ್ರ ಸಾಹಿತ್ಯ ರಚನೆಗೂ ಮುಂದಾಗಬೇಕೆಂದು ಅವರು ಆಶಿಸಿದರು.

ತಮ್ಮ ಬದುಕಿನಲ್ಲಿ ಪುಸ್ತಕಗಳು ಗಂಭೀರ ಪರಿಣಾಮ ಬೀರಿವೆ. ಆರಂಭದ ದಿನಗಳಲ್ಲಿ ಧಾರಾವಾಹಿ, ನಾಟಕಗಳಲ್ಲಿ ಸಂಭಾಷಣೆ ಒಪ್ಪಿಸುವಾಗ ಹಳ್ಳಿಯ ಭಾಷೆ ಬರುತ್ತಿತ್ತು. ಹಾಗಾಗಿ ಕೆಲವರ ಸಲಹೆ ಮೇರೆಗೆ ಪುಸ್ತಕಗಳನ್ನು ಓದಲು ಆರಂಭಿಸಿ, ಕಾಲಕ್ರಮೇಣ ಸ್ಪಷ್ಟವಾಗಿ ಕನ್ನಡ ಮಾತನಾಡುವುದನ್ನು ಕಲಿತೆ. ಧಾರಾವಾಹಿ ಚಿತ್ರೀಕರಣದ ವೇಳೆ ಒಂದು ಸಣ್ಣ ವಿರಾಮ ಸಿಕ್ಕರೂ ಪುಸ್ತಕ ಹಿಡಿದು ಕೂರುವ ಮಟ್ಟಕ್ಕೆ ಓದನ್ನು ಹಚ್ಚಿಕೊಂಡಿದ್ದೆ ಎಂದು ಅವರು ತಿಳಿಸಿದರು.

ಪುಸ್ತಕದ ಒಡನಾಟ ಇರಬೇಕು. ಏಕೆಂದರೆ, ಲೇಖಕರಾದವರು ನೂರಾರು ಜನರ ಬದುಕು, ಪುಸ್ತಕಗಳ ಓದು, ಸಂಶೋಧನೆ ಹೀಗೆ ಹಲವು ರೀತಿಯಲ್ಲಿ ಅಧ್ಯಯನ ಮಾಡಿ ಪುಸ್ತಕ ಬರೆಯುತ್ತಾರೆ. ನನ್ನ ಪ್ರಕಾರ ಇಂತಹ ಪುಸ್ತಕ ಓದುವುದರಿಂದ ಸುಲಭವಾಗಿ ಅಷ್ಟೂ ಜ್ಞಾನ ಪಡೆಯಬಹುದು ಎಂದು ಯಶ್ ಅಭಿಪ್ರಾಯಪಟ್ಟರು. ಕಾರ್ಯಕ್ರಮದಲ್ಲಿ ಲೇಖಕರಾದ ಜೋಗಿ, ಲೇಖಕ ಶರತ್ ಭಟ್ ಸೇರಾಜಿ, ಸಚಿನ್ ತೀರ್ಥಹಳ್ಳಿ ಮತ್ತಿತರರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X