ಮೂಡುಬಿದಿರೆಯಲ್ಲಿ ಕೋಟಿ-ಚೆನ್ನಯ ಜೋಡುಕರೆ ಕಂಬಳ ಉದ್ಘಾಟನೆ

ಮೂಡುಬಿದಿರೆ, ಡಿ. 1: ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿಯ ವತಿಯಿಂದ ಇಲ್ಲಿನ ಕಡಲಕೆರೆ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಶನಿವಾರ 16ನೇ ವರ್ಷದ ಹೊನಲು ಬೆಳಕಿನ ಕೋಟಿ-ಚೆನ್ನಯ ಜೋಡುಕರೆ ಕಂಬಳೋತ್ಸವವು ನಡೆಯಿತು.
ಶಾಸಕ ಉಮಾನಾಥ ಕೋಟ್ಯಾನ್ ನೇತೃತ್ವದಲ್ಲಿ ನಡೆದ ಈ ಕಂಬಳವನ್ನು ಆಲಂಗಾರು ಚರ್ಚಿನ ಧರ್ಮಗುರು ರೆ/ಫಾ ವಾಲ್ಟರ್ ಡಿ"ಸೋಜ, ಆಲಂಗಾರು ಬಡಗು ಮಹಾಲಿಂಗೇಶ್ವರ ದೇವಸ್ಥನದ ಆಡಳಿತ ಮೊಕ್ತೇಸರ ವೇ/ಮೂ.ಈಶ್ವರ ಭಟ್, ಪುತ್ತಿಗೆ ನೂರಾನಿ ಮಸೀದಿಯ ಧರ್ಮಗುರು ಮೌಲಾನ ಝಿಯ್ಯಾಲ್ಲಾ ಕಂಬಳ ಕರೆಗೆ ಪೂಜೆ ಮಾಡುವ ಮೂಲಕ ಉದ್ಘಾಟಿಸಿದರು. ಅಧ್ಯಕ್ಷತೆ ವಹಿಸಿದ್ದ ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ್ ಎಂ. ಕರೆಗೆ ಪುತ್ತಿಗೆ ದೇವಳದ ಪ್ರಸಾದವನ್ನು ಅರ್ಪಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಉಮಾನಾಥ ಕೋಟ್ಯಾನ್ ಅವರು ಕಂಬಳ ಪ್ರಿಯರ ಒಗ್ಗಟ್ಟಿನಿಂದ ತುಳುನಾಡಿನ ಜಾನಪದ ಕ್ರೀಡೆಯಾದ ಕಂಬಳವು ಮೂಡುಬಿದಿರೆಯಲ್ಲಿ ನಡೆಯುತ್ತಿದ್ದು ಇದು ಜಿಲ್ಲೆಯ ಪ್ರತಿಷ್ಠಿತ ಕಂಬಳವಾಗಿದೆ. ಅದನ್ನು ಮತ್ತಷ್ಟು ವೈಭವೀಕರಿಸಿ ನಡೆಸಿ ಅವರ ಗೌರವವನ್ನು ಹೆಚ್ಚಿಸುತ್ತಿದ್ದೇವೆ. ನಿಯಮದಂತೆ 24 ಗಂಟೆಯೊಳಗೆ ಕಂಬಳ ಮುಗಿಸಲು ಪ್ರಯತ್ನಿಸಲಾಗುವುದು ಎಂದರು.
ಮುಖ್ಯ ಅತಿಥಿಗಳಾಗಿ ಪಕ್ಷಿಕೆರೆ ಚರ್ಚ್ನ ಧರ್ಮಗುರು ವಂ/ಫಾ ಮೆಲ್ವೀನ್ ನೋರೋನ್ಹಾ, ಜೈನ ಬಸದಿಗಳ ಮೊಕ್ತೇಸರ ದಿನೇಶ್ ಕುಮಾರ್ ಆನಡ್, ವೆಂಕಟರಮಣ ಹನುಮಂತ ದೇವಳಗಳ ಆಡಳಿತ ಮೊಕ್ತೇಸರ ಜಿ.ಉಮೇಶ್ ಪೈ, ರೋಟರಿ ಕ್ಲಬ್ ಅಧ್ಯಕ್ಷ ಡಾ.ರಮೇಶ್, ಲಯನ್ಸ್ ಕ್ಲಬ್ ಅಧ್ಯಕ್ಷ ಡಾ.ನಿತ್ಯಾನಂದ ಶೆಟ್ಟಿ, ತ್ರಿಭುವನ್ ಜೇಸಿಸ್ ಅಧ್ಯಕ್ಷೆ ಸಂಗೀತ ಪ್ರಭು, ರೋಟರ್ಯಾಕ್ಟ್ ಕ್ಲಬ್ ಅಧ್ಯಕ್ಷ ಪವನ್ ಭಟ್, ರೋಟರಿ ಕ್ಲಬ್ ಮಿಡ್ಟೌನ್ ಅಧ್ಯಕ್ಷ ಪ್ರವೀಣ್ ಜೈನ್, ರೋಟರಿ ಕ್ಲಬ್ ಟೆಂಪಲ್ ಟೌನ್ ಅಧ್ಯಕ್ಷ ವಿನ್ಸೆಂಟ್ ಡಿಕೋಸ್ತ, ಆಲಂಗಾರು ಲಯನ್ಸ್ ಕ್ಲಬ್ ಅಧ್ಯಕ್ಷ ಹೆರಾಲ್ಡ್ ತಾವ್ರೋ ಭಾಗವಹಿಸಿದ್ದರು.
ಜಿ.ಪಂ ಸದಸ್ಯರಾದ ಕೆ.ಪಿ ಸುಚರಿತ ಶೆಟ್ಟಿ, ಸುಜಾತ ಕೆ.ಪಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೆ.ಪಿ ಜಗದೀಶ ಅಧಿಕಾರಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುದರ್ಶನ ಎಂ, ಪುರಸಭಾ ಸದಸ್ಯರಾದ ಕೊರಗಪ್ಪ, ಹನೀಫ್ ಆಲಂಗಾರು, ಬಾಹುಬಲಿ ಪ್ರಸಾದ್,ಲಕ್ಷ್ಮಣ್ ಪೂಜಾರಿ, ನಾಗರಾಜ ಪೂಜಾರಿ, ದಿನೇಶ್ ಪೂಜಾರಿ, ದಿನೇಶ್ ಪೂಜಾರಿ, ಬಿಜೆಪಿ ಮಂಡಲ ಅಧ್ಯಕ್ಷ ಈಶ್ವರ ಕಟೀಲ್, ಕಾರ್ಯದರ್ಶಿ ಸುಕೇಶ್ ಶೆಟ್ಟಿ, ಬೆಳುವಾಯಿ ಗ್ರಾ.ಪಂ ಅಧ್ಯಕ್ಷ ಬೆಳುವಾಯಿ ಭಾಸ್ಕರ ಆಚಾರ್ಯ, ಪಡುಮಾರ್ನಾಡು ಗ್ರಾ.ಪಂ ಅಧ್ಯಕ್ಷ ಶ್ರೀನಾಥ್ ಸುವರ್ಣ, ಉದ್ಯಮಿಗಳಾದ ಸಂದೇಶ್ ಪೂಜಾರಿ,ಸಂದೇಶ್ ಶೆಟ್ಟಿ, ರಂಜಿತ್ ಪೂಜಾರಿ, ತಿಮ್ಮಯ್ಯ ಶೆಟ್ಟಿ, ಅಭಿಜಿತ್ ಎಂ ಮತ್ತಿತರರು ಭಾಗವಹಿಸಿದ್ದರು.
ಜಿಲ್ಲಾ ಕಂಬಳ ಸಮಿತಿಯ ಕೋಶಾಧಿಕಾರಿ ಸುರೇಶ್ ಕೆ.ಪೂಜಾರಿ, ಸಮಿತಿಯ ಕೋಶಾಧಿಕಾರಿ ಭಾಸ್ಕರ್ ಎಸ್.ಕೋಟ್ಯಾನ್, ಪ್ರಧಾನ ಕಾರ್ಯದರ್ಶಿ ಕೆ.ಗುಣಪಾಲ ಕಡಂಬ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು. ನವೀನ್ ಅಂಬೂರಿ ಕಾರ್ಯಕ್ರಮ ನಿರೂಪಿಸಿದರು.