Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕ್ರೀಡೆ
  4. ಹಾಕಿ ವಿಶ್ವಕಪ್ ಗೆಲ್ಲಲು ಭಾರತಕ್ಕೆ...

ಹಾಕಿ ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸದವಕಾಶ

ಮಾಜಿ ಕೋಚ್ ಜೋಸ್ ಬ್ರಾಸಾ

ವಾರ್ತಾಭಾರತಿವಾರ್ತಾಭಾರತಿ1 Dec 2018 11:51 PM IST
share
ಹಾಕಿ ವಿಶ್ವಕಪ್ ಗೆಲ್ಲಲು ಭಾರತಕ್ಕೆ ಸದವಕಾಶ

ಹೊಸದಿಲ್ಲಿ, ಡಿ.1: ಕಳೆದ ಒಂದು ದಶಕದಿಂದ ಪುನಶ್ಚೇತನದ ಹಾದಿಯಲ್ಲಿರುವ ಭಾರತ ಹಾಕಿ ತಂಡದ ಸಾಧನೆಯಿಂದ ತಾನು ಪ್ರಭಾವಿತನಾಗಿದ್ದು ಇದೀಗ ನಡೆಯುತ್ತಿರುವ ಹಾಕಿ ವಿಶ್ವಕಪ್ ಟ್ರೋಫಿ ಗೆಲ್ಲಲು ಭಾರತಕ್ಕೆ ಇದು ಅತ್ಯುತ್ತಮ ಅವಕಾಶವಾಗಿದೆ ಎಂದು ಭಾರತ ಹಾಕಿ ತಂಡದ ಮಾಜಿ ಕೋಚ್, ಸ್ಪೇನ್‌ನ ಜೋಸ್ ಬ್ರಾಸಾ ಹೇಳಿದ್ದಾರೆ. ಬುಧವಾರ ಭುವನೇಶ್ವರದಲ್ಲಿ ನಡೆದ ಆರಂಭಿಕ ಪಂದ್ಯದಲ್ಲಿ ಭಾರತೀಯರು ದಕ್ಷಿಣ ಆಫ್ರಿಕ ತಂಡವನ್ನು 5-0 ಅಂತರದಿಂದ ಮಣಿಸಿ ಶುಭಾರಂಭ ಮಾಡಿದ್ದಾರೆ. ಈ ಗೆಲುವಿನ ಸರಮಾಲೆಯನ್ನು ಮುಂದುವರಿಸಿ 43 ವರ್ಷಗಳ ವಿಶ್ವಕಪ್ ಟ್ರೋಫಿಯ ಬರವನ್ನು ಭಾರತ ನೀಗಿಸಿಕೊಳ್ಳಲು ಇದು ಸುಲಭದ ಅವಕಾಶವಾಗಿದೆ. ಆದರೆ ಸ್ಥಿರತೆಯನ್ನು ಕಾಯ್ದುಕೊಳ್ಳುವ ಅಗತ್ಯವಿದೆ ಎಂದು ಬ್ರಾಸಾ ಹೇಳಿದ್ದಾರೆ.

ತವರು ನೆಲದಲ್ಲಿ ಅಪಾರ ಬೆಂಬಲಿಗರ ಎದುರು ಆಡುವ ಅನುಕೂಲತೆ ಭಾರತಕ್ಕಿದೆ. ಆದರೆ ಮಹತ್ವದ ಪಂದ್ಯದಲ್ಲಿ ಯಾವಾಗಲೂ ಭಾರತೀಯರ ಆಟ ಅನಿಶ್ಚಿತತೆಯಿಂದಲೇ ಸಾಗುತ್ತದೆ. ಆಸ್ಟ್ರೇಲಿಯಾ, ಬೆಲ್ಜಿಯಂ, ಹಾಲಂಡ್, ಜರ್ಮನಿ ಮುಂತಾದ ಪ್ರಮುಖ ತಂಡಗಳ ಸಾಲಿನಲ್ಲಿ ಭಾರತವೂ ಕಾಣಿಸಿಕೊಂಡಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ಸುಲಭದ ಪಂದ್ಯದಲ್ಲಿ ಸೋತು ಅವಕಾಶಗಳನ್ನು ವ್ಯರ್ಥಗೊಳಿಸಿದ ಸಾಕಷ್ಟು ನಿದರ್ಶನಗಳಿವೆ ಎಂದವರು ಹೇಳಿದ್ದಾರೆ. ಪ್ರಮುಖ ಟೂರ್ನಿಗಳಲ್ಲಿ ಪ್ರಶಸ್ತಿ ಗೆಲ್ಲಲು ಅಗತ್ಯವಿರುವ ಅನುಭವದ ಕೊರತೆಯನ್ನು ಸ್ವದೇಶದ ಪ್ರೇಕ್ಷಕರ ಬೆಂಬಲದ ಬಲದಿಂದ ಸರಿದೂಗಿಸಿಕೊಳ್ಳಲು ಭಾರತಕ್ಕೆ ಈಗ ಸುವರ್ಣಾವಕಾಶ ಒದಗಿ ಬಂದಿದೆ. ದಕ್ಷಿಣ ಆಫ್ರಿಕಾ ಎದುರಿನ ಪಂದ್ಯದಲ್ಲಿ ಭಾರತ ಇನ್ನಷ್ಟು ಉತ್ತಮ ಪ್ರದರ್ಶನ ತೋರಬಹುದಿತ್ತು. ಆರಂಭದಲ್ಲೇ ಎರಡು ಗೋಲು ದಾಖಲಿಸಿದ ಬಳಿಕ ಅವರು ಹಿಡಿತ ಸಡಿಲಿಸಿದಂತೆ ಕಂಡು ಬಂದಿತು. ಇಂತಹ ಸುಲಭ ಪಂದ್ಯದಲ್ಲೂ ಇದಿರು ತಂಡಕ್ಕೆ ನಾಲ್ಕು ಪೆನಾಲ್ಟಿ ಕಾರ್ನರ್ ಅವಕಾಶಗಳನ್ನು ಬಿಟ್ಟುಕೊಟ್ಟಿರುವುದು ಬಹುದೊಡ್ಡ ಪ್ರಮಾದವಾಗಿದೆ. ಬಲಿಷ್ಠ ತಂಡಗಳೆದುರು ಈ ತಪ್ಪನ್ನು ಪುನರಾವರ್ತಿಸುವುದಿಲ್ಲ ಎಂದು ನಿರೀಕ್ಷಿಸಿದ್ದೇನೆ. ಗೋಲ್‌ಕೀಪರ್ ಪಿ.ಆರ್.ಶ್ರೀಜೇಶ್‌ರಂತಹ ಅನುಭವಿ ಆಟಗಾರನಿಂದಾಗಿ ಭಾರತ ತಂಡಕ್ಕೆ ಹೆಚ್ಚಿನ ಅನುಕೂಲವಿದೆ. ಬೆಲ್ಜಿಯಂ ಎದುರು ಗೆಲುವು ಸಾಧಿಸಿ ನೇರವಾಗಿ ಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆಯಲು ಭಾರತ ಪ್ರಯತ್ನಿಸಬೇಕು ಎಂದರು.

   

ಭಾರತದಲ್ಲಿ ಈಗ ಬಹಳಷ್ಟು ಕೃತಕ ಹಾಕಿಪಿಚ್‌ಗಳಿವೆ. ಅಲ್ಲದೆ ಕಳೆದ 10 ವರ್ಷಗಳಲ್ಲಿ ಹಲವು ವಿದೇಶಿ ಕೋಚ್‌ಗಳು ಭಾರತ ತಂಡಕ್ಕೆ ತರಬೇತಿ ನೀಡಿದ್ದಾರೆ. ರೋಲೆಂಟ್ ಓಲ್ತಮಸ್, ರಿಕ್ ಚಾರ್ಲ್ಸ್‌ವರ್ತ್‌ರಂತಹ ಅನುಭವಿ ಕೋಚ್‌ಗಳಡಿ ಭಾರತೀಯ ಆಟಗಾರರು ಪಳಗಿದ್ದಾರೆ ಎಂದು ಬ್ರಾಸಾ ಹೇಳಿದ್ದಾರೆ. ಬ್ರಾಸ ಕೋಚ್ ಆಗಿದ್ದ ಸಂದರ್ಭ ಭಾರತ ತಂಡ 2010ರ ದಿಲ್ಲಿ ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ರಜತ ಪದಕ, ಹಾಂಕಾಂಗ್‌ನಲ್ಲಿ ನಡೆದಿದ್ದ ಏಶ್ಯನ್ ಗೇಮ್ಸ್‌ನಲ್ಲಿ ಕಂಚಿನ ಪದಕ ಗೆದ್ದಿದೆ. 2009ರಲ್ಲಿ ಕೋಚ್ ಆಗಿ ನೇಮಕವಾಗಿದ್ದ ಬ್ರಾಸ್ ಗುತ್ತಿಗೆ ಅವಧಿ 2010ರಲ್ಲಿ ಕೊನೆಗೊಂಡ ಬಳಿಕ ಅವರ ಸೇವಾವಧಿಯನ್ನು ವಿಸ್ತರಿಸಿರಲಿಲ್ಲ. ಭಾರತ ರವಿವಾರ ನಡೆಯಲಿರುವ ತನ್ನ ಎರಡನೇ ಪಂದ್ಯದಲ್ಲಿ ಬೆಲ್ಜಿಯಂ ಎದುರು ಹಾಗೂ ಡಿಸೆಂಬರ್ 8ರಂದು ಕೆನಡಾದ ಎದುರು ಸೆಣಸಲಿದೆ. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X