Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಸರಕಾರ, ಸಮಾಜದಿಂದ ಕೊರಗರ ಪ್ರಗತಿ ಸಾಧ್ಯ:...

ಸರಕಾರ, ಸಮಾಜದಿಂದ ಕೊರಗರ ಪ್ರಗತಿ ಸಾಧ್ಯ: ಪೇಜಾವರ ಶ್ರೀ

ಕೊಗರ ಸಮುದಾಯದೊಂದಿಗೆ ಸೌಹಾರ್ದ ಕುಟುಂಬ ಸಮ್ಮಿಲನ

ವಾರ್ತಾಭಾರತಿವಾರ್ತಾಭಾರತಿ2 Dec 2018 5:32 PM IST
share
ಸರಕಾರ, ಸಮಾಜದಿಂದ ಕೊರಗರ ಪ್ರಗತಿ ಸಾಧ್ಯ: ಪೇಜಾವರ ಶ್ರೀ

ಉಡುಪಿ, ಡಿ.2: ಕೊರಗ ಸಮುದಾಯದ ಪ್ರಗತಿಗಾಗಿ ಸರಕಾರ ಮತ್ತು ಸಮಾಜ ಒಗ್ಗೂಡಿ ಕೆಲಸ ಮಾಡಬೇಕು. ಎಲ್ಲರು ಒಂದಾಗಿ ಕೊರಗ ಸಮುದಾಯದ ಉನ್ನತಿಗೆ ಶ್ರಮಿಸುವ ಮೂಲಕ ಅವರ ಬದುಕಿನಲ್ಲಿ ಮೆರುಗು ತರಬೇಕು ಎಂದು ಪೇಜಾವರ ಶ್ರೀವಿಶ್ವೇಶತೀರ್ಥ ಸ್ವಾಮೀಜಿ ಹೇಳಿದ್ದಾರೆ.

ಮಂಚಿಕೋಡಿಯ ಮಂಜುಶ್ರೀ ನಗರದ ಭಾಗ್ಯಶ್ರೀ ಕೊರಗ ಸಮುದಾಯ ಭವನದಲ್ಲಿ ರವಿವಾರ ಆಯೋಜಿಸಲಾದ ಕೊಗರ ಸಮುದಾಯದೊಂದಿಗೆ ಸೌಹಾರ್ದ ಕುಟುಂಬ ಸಮ್ಮಿಲನ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

‘ಗ್ರಾಮೀಣ ಜ್ಞಾನದ ಅಗತ್ಯತೆ’ ವಿಷಯದ ಕುರಿತು 35ಸಾವಿರ ಕಿ.ಮೀ. ಪಾದಯಾತ್ರೆ ಮೂಲಕ ಭಾರತಕ್ಕೆ ಪ್ರದಕ್ಷಿಣೆ ಬಂದ ಸಾಧಕ ಸೀತಾರಾಮ ಕೆದ್ಲಾಯ ದಿಕ್ಸೂಚಿ ಭಾಷಣ ಮಾಡಿ, ಇಂದು ದೇಶದಲ್ಲಿ ನಡೆಯುತ್ತಿರುವ ವಿಕೃತಿ ಹಾಗೂ ಕಲಹಗಳಿಗೆ ಅಜ್ಞಾನವೇ ಕಾರಣವಾಗಿದ್ದು, ಆ ಅಜ್ಞಾನವನ್ನು ದೂರ ಮಾಡಲು ಭಾರತ ನಿಜವಾದ ಆತ್ಮವಾಗಿರುವ ಹಳ್ಳಿಗಳ ಕಡೆ ಹೋಗಬೇಕು ಮತ್ತು ಅದನ್ನು ಪ್ರೀತಿಸಬೇಕು ಎಂದರು.

ಹಳ್ಳಿಗಳ ಬದುಕಿನಲ್ಲಿ ನಿಜವಾದ ಭಾರತದ ಸ್ವರೂಪವನ್ನು ಕಾಣಬಹುದು. ಇದು ಅಮ್ಮಂದಿರು ತಮ್ಮ ಮಕ್ಕಳಿಗೆ ಹೇಳಿಕೊಟ್ಟ ಸಂಸ್ಕಾರದ ಪಾಠದಿಂದ ಸಾಧ್ಯವಾಗಿದೆ. ಮನುಷ್ಯನು ಎಲ್ಲರಿಗಾಗಿ ತೆರೆದುಕೊಂಡಾಗ ದೇವ ಮಾನವನಾಗುತ್ತಾನೆ. ಹೆಣ್ಣನ್ನು ಅಮ್ಮನಂತೆ ಕಾಣುವ ವಿಶೇಷ ಸಂಸ್ಕೃತಿ ಈಗಲೂ ದೇಶದ ಅನೇಕ ಹಳ್ಳಿಗಳಲ್ಲಿವೆ ಎಂದು ಅವರು ಹೇಳಿದರು.

ಉತ್ತಮ ಸಂಸ್ಕೃತಿ, ಆಚಾರ, ವಿಚಾರಗಳು ಶೇ.95ರಷ್ಟು ಹಳ್ಳಿಗಳಲ್ಲಿ ಈಗಲೂ ಉಳಿದುಕೊಂಡಿವೆ. ಕೇವಲ ಶೇ.5ರಷ್ಟಿರುವ ಕೆಟ್ಟ ವಿಚಾರವನ್ನು ಮಾಧ್ಯಮಗಳಲ್ಲಿ ವರ್ಣರಂಜಿತವಾಗಿ ಬಿಂಬಿಸುತ್ತಿರುವುದನ್ನೇ ನೋಡಿ ಇಡೀ ಸಮಾಜ ಹಾಳಾಗಿದೆ ಎಂಬುದು ಹೇಳುವುದು ಸರಿಯಲ್ಲ ಎಂದು ಅವರು ತಿಳಿಸಿದರು.

ಉಡುಪಿ ಶಾಸಕ ಕೆ.ರಘಪತಿ ಭಟ್, ವಿಧಾನ ಪರಿಷತ್ ವಿರೋಧ ಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಕೆ.ಜಯಪ್ರಕಾಶ್ ಹೆಗ್ಡೆ, ಸಂಘಟಕಿ ರಮ್ಯ ಉಪಸ್ಥಿತರಿದ್ದರು. ಅಧ್ಯಕ್ಷತೆಯನ್ನು ಮಂಜುಶ್ರೀ ನಗರದ ಪಿ.ಸುಂದರ ಗುರಿಕಾರ ವಹಿಸಿದ್ದರು.

ಈ ಸಂದರ್ಭದಲ್ಲಿ ಕೊರಗ ದಂಪತಿಗಳಿಗೆ ವಸ್ತ್ರ ಹಾಗೂ ಮಕ್ಕಳಿಗೆ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಕಾರ್ಯಕ್ರಮ ಸಂಘಟಕ ಕೆ.ರಾಘವೇಂದ್ರ ಕಿಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ನಗರಸಭಾ ಸದಸ್ಯ ಅಶೋಕ್ ನಾಯ್ಕ ಸ್ವಾಗತಿಸಿದರು. ದಿವ್ಯಾ ಕಾರ್ಯಕ್ರಮ ನಿರೂಪಿಸಿದರು.

ಬಳಿಕ ಸಾವಯವ ಧಾನ್ಯ/ತರಕಾರಿಗಳಿಂದ ಕೊರಗರೇ ತಯಾರಿಸಿದ ಭೋಜನವನ್ನು ರಘುಪತಿ ಭಟ್, ಕೋಟ ಶ್ರೀನಿವಾಸ ಪೂಜಾರಿ, ಜಯ ಪ್ರಕಾಶ್ ಹೆಗ್ಡೆ ಹಾಗೂ ಜನಪ್ರತಿನಿಧಿಗಳು ಸೇರಿದಂತೆ ಸಾರ್ವಜನಿಕರು ಸಾಮೂಹಿಕವಾಗಿ ಸೇವಿಸಿದರು.

ಅಸ್ಪಶ್ಯತೆಯಿಂದ ಮತಾಂತರ: ಭಟ್
ಅಸಮಾನತೆ ಹಾಗೂ ಅಸ್ಪೃಶ್ಯತೆಯಿಂದಾಗಿ ಹಿಂದೂ ಸಮಾಜದಲ್ಲಿ ಸಮಸ್ಯೆ ಗಳು ಹುಟ್ಟಿಕೊಂಡು ಕೊರಗ ಸಮುದಾಯ ಸೇರಿದಂತೆ ಅನೇಕ ಹಿಂದುಳಿದ ಸಮುದಾಯವರು ಇತರೆ ಧರ್ಮಕ್ಕೆ ಮತಾಂತರಗೊಂಡಿದ್ದಾರೆ. ಇದರಿಂದ ಹಿಂದೂ ಸಮಾಜಕ್ಕೆ ಬಹಳ ದೊಡ್ಡ ಹಾನಿಯಾಗಿದೆ ಎಂದು ಉಡುಪಿ ಶಾಸಕ ಕೆ.ರಘುಪತಿ ಭಟ್ ತಿಳಿಸಿದ್ದಾರೆ.
ಕೊರಗ ಸಮುದಾಯದ ಯುವಜನತೆಗೆ ಶಿಕ್ಷಣವನ್ನು ನೀಡಿ ಉದ್ಯೋಗಾವಕಾಶವನ್ನು ಕಲ್ಪಿಸಿಕೊಡುವ ಮೂಲಕ ಸಮಾಜವನ್ನು ಆರ್ಥಿಕವಾಗಿ ಬಲಗೊಳಿಸಬೇಕಾಗಿದೆ. ಈ ನಿಟ್ಟಿನಲ್ಲಿ ಈ ಸಮುದಾಯಕ್ಕೆ ಪ್ರತ್ಯೇಕ ಮೀಸಲಾತಿ ನೀಡುವ ಅಗತ್ಯ ಇದೆ ಎಂದು ಅವರು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X